ದೇಶಾಭಿಮಾನದಿಂದ ರಾಷ್ಟ್ರಾಭಿವೃದ್ಧಿ : ಶಾಸಕ ಅಂಗಾರ
Team Udayavani, Jan 27, 2018, 11:39 AM IST
ಸುಳ್ಯ : ದೇಶ ಬಲಿಷ್ಠವಾಗಲು ನಂಬಿಕೆ, ವಿಶ್ವಾಸ ಮುಖ್ಯ. ಭಾರತ ಅತ್ಯಂತ ವೇಗವಾಗಿ ಮುನ್ನಡೆಯುತ್ತಿದ್ದು, ವಿಶ್ವವೇ ತಿರುಗಿ ನೋಡುವಂತೆ ಅಭಿವೃದ್ಧಿ ಹೊಂದುತ್ತಿದೆ. ದೇಶಾಭಿಮಾನದಿಂದ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಅವರು ಹೇಳಿದರು.
ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ವತಿಯಿಂದ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಗಣ ರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಸಂವಿಧಾನದ ನಾಲ್ಕು ಪ್ರಮುಖ ಅಂಗಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಇವುಗಳ ಮೇಲೆ ನಂಬಿಕೆ ಮುಖ್ಯ. ಇವುಗಳ ಮೇಲೆ ಜನ ವಿಶ್ವಾಸ ಕಳೆದುಕೊಳ್ಳದಂತೆ ಎಲ್ಲರೂ ಹೊಣೆಗಾರಿಕೆ ನಿಭಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದು, ದೇಶದ ಸಾರ್ವಭೌಮತೆ ಎತ್ತಿ ಹಿಡಿಯಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು, ತಹಶೀ ಲ್ದಾರ್ ಬಿ.ಎಂ. ಕುಂಞಮ್ಮ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಭಾಗವಹಿಸಿ, ಪ್ರಜಾ ಪ್ರಭುತ್ವ ರಾಷ್ಟ್ರದಲ್ಲಿ ಸರ್ವಸಮಾನತೆ ಮೂಡಿ ಶಾಂತಿಯಿಂದ ಬದುಕುವಂತಾಗಬೇಕು ಎಂದರು.
ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ ಗೌಡ, ಎಪಿಎಂಸಿ ಅಧ್ಯಕ್ಷ ದೇರಣ್ಣ ಗೌಡ ಅಡ್ಯಂತಡ್ಕ, ಕರ್ನಾಟಕ ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಕನ್ನಡ ಸಾಹಿತ್ಯ ಪರಿಷತ್ ತಾ| ಅಧ್ಯಕ್ಷ ಡಾ| ಹರಪ್ರಸಾದ್ ತುದಿಯಡ್ಕ, ಪೊಲೀಸ್ ವೃತ್ತ ನಿರೀಕ್ಷಕ ಸತೀಶ್, ಸ.ಪ.ಪೂ. ಕಾಲೇಜು ಪ್ರಾಂಶುಪಾಲ ಚಿದಾನಂದ ಎಂ.ಎಸ್., ಪಿ.ಎ. ಮಹಮ್ಮದ್, ಗೃಹರಕ್ಷಕ ದಳದ ಜಯಂತ ಶೆಟ್ಟಿ ಉಪಸ್ಥಿತರಿದ್ದರು.
ಮಾಜಿ ಯೋಧ ಲಕ್ಷ್ಮಣ ಗೌಡ ಕಟ್ಟೆಮನೆ ಅವರನ್ನು ಸಮ್ಮಾನಿಸಲಾಯಿತು. ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿನಿ ಪ್ರತಿಭೆ ಕೀರ್ತಿ ಎಸ್., ರಾಜ್ಯಮಟ್ಟದ ಕರಾಟೆಯಲ್ಲಿ ಪ್ರಶಸ್ತಿ ಪಡೆದ ಪ್ರತಿಭೆ ಆಶ್ವಿತಾ ಪಿ.ಎಲ್. ಅವರನ್ನು ಗೌರವಿಸಲಾಯಿತು.
ಕೃಷಿಕರಿಗೆ ಸಮ್ಮಾನ
2017-18ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿಜೇತರಾದ ರಾಧಾಕೃಷ್ಣ ದಾಸ್ ಉಬರಡ್ಕ (ಜೇನು ಕೃಷಿ) ಪಿ.ವಿ. ರಮೇಶ್ ಅರಂತೋಡು (ತೋಟಗಾರಿಕೆ), ಶಿವರಾಮ ಎಣ್ಮೂರು (ಹೈನುಗಾರಿಕೆ), ಚಂದ್ರಶೇಖರ ಡಿ. ಎಸ್. ಅಮರ ಮುಟ್ನೂರು ( ಸಾವಯವ ಕೃಷಿ), ಚಂದ್ರಶೇಖರ ಕೇನಾಜೆ, ರಾಮ ಮಲೆ ಪರ್ವತಮುಖೀ ಹಾಗೂ ಸುಶೀಲಾ ಪೂಜಾರಿ ಮನೆ (ಭತ್ತದ ಬೆಳೆ) ಅವರನ್ನು ಸಮ್ಮಾನಿಸಲಾಯಿತು.
ಬೆಳಗ್ಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳು, ಗೃಹ ರಕ್ಷಕ ದಳದ ಸಿಬಂದಿ, ಪೊಲೀಸರ, ಹಾಗೂ ಸ್ಕೌಟ್ಸ್ ಎಂಡ್ ಗೈಡ್ಸ್, ಎನ್ನೆಸೆಸ್ ತಂಡ, ಬುಲ್ ಬುಲ್ಸ್ ಘಟಕ ಹಾಗೂ ವಿದ್ಯಾರ್ಥಿ ಗಳ ಆಕರ್ಷಕ ಪಥಸಂಚಲ ನಡೆಯಿತು. ತಹಸಿಲ್ದಾರ್ ಬಿ.ಎಂ ಗೌರವ ವಂದನೆ ಸ್ವೀಕರಿಸಿ ಗಣರಾಜ್ಯೋತ್ಸವದ ಸಂದೇಶ ವಾಚಿಸಿದರು.
ರೋಟರಿ ಪ್ರಾ. ಶಾಲೆ, ಶಾರದಾ ಪ್ರೌಢಶಾಲೆ, ಜಟ್ಟಿಪಳ್ಳ ಪ್ರಾ. ಶಾಲೆ, ಪ.ಪೂ. ಕಾಲೇಜು, ಸುಳ್ಯ, ಗಾಂಧಿನಗರ ಪ್ರೌಢಶಾಲೆ, ಗಾಂಧಿನಗರ ಪ್ರಾ. ಶಾಲೆ, ಸುಳ್ಯ ಪ್ರಾ.ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಕೆಂಪ ಲಿಂಗಪ್ಪ ಸ್ವಾಗತಿಸಿ, ಅಕ್ಷರ ದಾಸೋಹ ಸಂಯೋಜಕ ಚಂದ್ರಶೇಖರ ಪೆರಾಲ್ ವಂದಿಸಿದರು. ಅಚ್ಯುತ ಅಟ್ಲೂರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ