ಸರ್ವೆಗೆ ಅಡ್ಡಿ, ಕೊಲೆಯತ್ನ ಪ್ರಕರಣ: ನಿರೀಕ್ಷಣಾ ಜಾಮೀನು
Team Udayavani, Nov 12, 2022, 12:07 AM IST
ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಬಿರಾವು ಎಂಬಲ್ಲಿ ಸರ್ವೆ ನಡೆಸಲು ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣದಲ್ಲಿ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಅ.6ರಂದು ಮೂಡುಬಿದಿರೆ ತಾಲೂಕು ಕಂದಾಯ ನಿರೀಕ್ಷಕರು, ತಾಲೂಕು ಭೂಮಾಪಕರು, ಗ್ರಾಮಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕರು ಸರ್ವೆ ನಡೆಸಲು ಹೋಗಿದ್ದಾಗ ಜೀವನ್ ಕಿರಣ್ ಡೆಲಿಯಾ, ನೆಲ್ಲಿ ಮೋನಿಸ್, ರೀಟಾ ಕುಟಿನ್ಹಾ ಮತ್ತು ಇತರರು ಸರ್ವೆಗೆ ಅಡ್ಡಿಪಡಿಸಿರುವ ಬಗ್ಗೆ ಹಾಗೂ ಈ ಪೈಕಿ ಜೀವನ್ ಕಿರಣ್ ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಹೊಡೆಯಲು ಬಂದಿದ್ದ ಬಗ್ಗೆ ಮತ್ತು ಜೀವ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪರವಾಗಿ ನ್ಯಾಯವಾದಿ ನಾರಾಯಣ ಎಲ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ