ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಕೋವಿಡ್ 19 ಸಾವು!


Team Udayavani, Jul 11, 2020, 2:06 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಕೋವಿಡ್ 19 ಸಾವು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸಾವಿನ ಪ್ರಕರಣ ಮುಂದುವರಿಯುತ್ತಿದೆ.

ಅದರಲ್ಲಿಯೂ ಇಳಿ ವಯಸ್ಸಿನವರೊಂದಿಗೆ ಎಳೆ ವಯಸ್ಸಿನವರೂ ಮೃತಪಟ್ಟಿರುವುದು ಜಿಲ್ಲೆಯ ಮಟ್ಟಿಗೆ ಆತಂಕ ತಂದೊಡ್ಡುತ್ತಿದ್ದು, ಜನರು ಸೋಂಕು ಹರಡದಂತೆ ಮತ್ತಷ್ಟು ಮುಂಜಾಗ್ರತೆ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಜಿಲ್ಲೆಯಲ್ಲಿ ಎ. 19ರಿಂದ ಜು. 10ರ ವರೆಗೆ 38 ಮಂದಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಐವರು ಹೊರ ಜಿಲ್ಲೆಯವರಾದರೆ, ಉಳಿದ 33 ಮಂದಿ ದ.ಕ. ಜಿಲ್ಲೆಯವರೇ ಆಗಿದ್ದಾರೆ.

ಮೃತಪಟ್ಟವರ ಪೈಕಿ ಎಲ್ಲರೂ ದೀರ್ಘ‌ಕಾಲದ ಸಮಸ್ಯೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ, ಕಿಡ್ನಿ ತೊಂದರೆ, ನ್ಯುಮೋನಿಯಾದಿಂದ ಬಳಲುತ್ತಿದ್ದವರು.

ಜೂ. 30ರ ವರೆಗೆ 13 ಇದ್ದ ಮೃತರ ಸಂಖ್ಯೆ ಬಳಿಕದ ಹತ್ತೇ ದಿನದಲ್ಲಿ 38ಕ್ಕೆ ತಲುಪಿದೆ. ಅದರಲ್ಲೂ ಶುಕ್ರವಾರ ಒಂದೇ ದಿನ ಎಂಟು ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಮೃತಪಟ್ಟವರ ಪೈಕಿ ಕೋವಿಡ್ 19 ಸೋಂಕು ಬಾಧಿಸಿ ತೀವ್ರ ಉಸಿರಾಟದ ಸಮಸ್ಯೆ, ಇನ್‌ಫ್ಲೂಯೆನಾl ಲೈಕ್‌ ಇಲ್‌ನೆಸ್‌ ಸಮಸ್ಯೆ ಇದ್ದವರೇ ಬಹುತೇಕರು.

ಹಿರಿಯರ ಜತೆ 30-35 ವಯಸ್ಸಿನವರೂ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಮೃತರಲ್ಲಿ ಮಂಗಳೂರಿನವರೇ ಅಧಿಕ ಮಂದಿ. ವೇಣೂರು, ಬಂಟ್ವಾಳ, ಸುಳ್ಯ, ಮೂಡುಬಿದಿರೆ, ಸುರತ್ಕಲ್‌, ಉಳ್ಳಾಲದ ಮಂದಿ ಮೃತಪಟ್ಟವರಲ್ಲಿ ಸೇರಿದ್ದಾರೆ.

ಪ್ಲೇಗ್‌ ಮಹಾಮಾರಿಗೆ 2279 ಬಲಿಯಾಗಿದ್ದರು
ದ. ಕ. ಜಿಲ್ಲೆ ಸದ್ಯ ಕೋವಿಡ್ 19 ಸೋಂಕಿನಿಂದ ಕಂಗೆಟ್ಟಿದ್ದರೆ, 120 ವರ್ಷಗಳ ಹಿಂದೆ ಇದೇ ರೀತಿಯಲ್ಲಿ ಪ್ಲೇಗ್‌ ಮಹಾಮಾರಿಯು  ಬಾಧಿಸಿತ್ತು. 1902ರಿಂದ 10 ವರ್ಷಗಳ ಕಾಲ ಪ್ಲೇಗ್‌ ಮಾರಿ ಜಿಲ್ಲೆಯನ್ನು ಬಿಡದೇ ಕಾಡಿದ್ದು, 2,279 ಮಂದಿ ಸಾವಿಗೀಡಾಗಿದ್ದರು ಎಂಬುದಾಗಿ ಮಹಾನಗರ ಪಾಲಿಕೆ ದಾಖಲೆಗಳು ಹೇಳುತ್ತವೆ.

ಸ್ವಯಂ ಲಾಕ್‌ಡೌನ್‌ಗೆ ಜನರ ಒಲವು
ಜಿಲ್ಲೆಯಲ್ಲಿ ಕೋವಿಡ್ 19 ಹರಡುತ್ತಿರುವ ವೇಗವನ್ನು ಗಮನಿಸಿದರೆ ಸ್ವಯಂ ಲಾಕ್‌ಡೌನ್‌ ವಿಧಿಸಿಕೊಂಡು ಸ್ವರಕ್ಷಣೆ ಕೈಗೊಳ್ಳುವುದೊಂದೇ ನಮ್ಮ ಮುಂದಿರುವ ಆಯ್ಕೆಯಾಗಿದೆ ಎಂದು ಜನರು ಭಾವಿಸಿದ್ದಾರೆ.

ಇದಕ್ಕಾಗಿ ರಸ್ತೆಗಿಳಿಯದೇ, ಅಂಗಡಿ ಮುಂಗಟ್ಟುಗಳನ್ನು ಅವಶ್ಯವಿದ್ದಲ್ಲಿ ಮಾತ್ರ ತೆರೆಯಲು ನಿರ್ಧರಿಸಿದ್ದಾರೆ. ಉಳ್ಳಾಲದ ಕೆಲವೆಡೆ, ಮೂಡುಬಿದಿರೆ, ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, ಬಂಟ್ವಾಳದ ಕೆಲವು ಪ್ರದೇಶಗಳಲ್ಲಿ ಈಗಾಗಲೇ ಅರ್ಧ ದಿನ ಬಂದ್‌  ಜಾರಿಯಲ್ಲಿದೆ.

ಸ್ವರಕ್ಷಣೆ ಮಾಡಿಕೊಳ್ಳಿ
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿನೇದಿನೇ ಜಾಸ್ತಿಯಾಗುತ್ತಿದೆ. ಜನ ಆದಷ್ಟು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿಯೇ ಓಡಾಡುವುದನ್ನು ರೂಢಿಸಿಕೊಳ್ಳಬೇಕು. ಸದ್ಯ ಏರುತ್ತಿರುವ ಕೋವಿಡ್ 19 ಸಂಖ್ಯೆಯನ್ನು ನಿಯಂತ್ರಿಸಬೇಕಾದರೆ ಇದೊಂದೇ ಪರಿಹಾರ. ನಿಯಮಗಳನ್ನು ಪಾಲಿಸಿ, ಪ್ರತಿಯೊಬ್ಬರೂ ಸ್ವರಕ್ಷಣೆ ಮಾಡಿಕೊಳ್ಳಬೇಕು.
– ಸಿಂಧೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.