ದ.ಕ.: ಲಾಕ್‌ಡೌನ್‌ ಆರಂಭ : ಸಾರಿಗೆ, ವಾಣಿಜ್ಯ ಚಟುವಟಿಕೆ ಸ್ಥಗಿತ

ಉಡುಪಿ ಜಿಲ್ಲಾ ಗಡಿ ಬಂದ್‌ ; ಚರ್ಚ್‌ಗಳಲ್ಲಿ ಪೂಜೆ ರದ್ದು

Team Udayavani, Jul 16, 2020, 6:30 AM IST

ದ.ಕ.: ಲಾಕ್‌ಡೌನ್‌ ಆರಂಭ : ಸಾರಿಗೆ, ವಾಣಿಜ್ಯ ಚಟುವಟಿಕೆ ಸ್ಥಗಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 15ರ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್‌ ಆರಂಭವಾಗಿದೆ. ಜು. 23ರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ.

ಅನಾವಶ್ಯಕ ತಿರುಗಾಡುತ್ತಿದ್ದವರನ್ನು ಪೊಲೀಸರು ತಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಬೆಳಗ್ಗೆ 8ರಿಂದ ಮಧ್ಯಾಹ್ನ 11ರ ವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿ ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣು ತರಕಾರಿ ಇತ್ಯಾದಿ ಮಾರಾಟಕ್ಕೆ ಅನುಮತಿ ಇದೆ.

ಯಾರಿಗೆ ವಿನಾಯಿತಿ
ಆರೋಗ್ಯ, ವೈದ್ಯಕೀಯ, ಶಿಕ್ಷಣ, ಪೊಲೀಸ್‌, ಗೃಹ ರಕ್ಷಕದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ವಿಪತ್ತು ನಿರ್ವಹಣೆ, ಮಂಗಳೂರು ಪಾಲಿಕೆ ಚಟುವಟಿಕೆಗಳಿಗೆ ವಿನಾಯಿತಿಯಿದೆ.

ಎಲ್ಲ ಆಹಾರ ಸಂಸ್ಕರಣೆ, ಸಂಬಂಧಿತ ಕೈಗಾರಿಕೆಗಳು, ಬ್ಯಾಂಕ್‌ಗಳು, ವಿಮಾ ಕಚೇರಿಗಳು, ಎಟಿಎಂ, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಕ್ಕೆ ವಿನಾಯಿತಿಯಿದೆ.

ರೈಲು, ವಿಮಾನ ಪ್ರಯಾಣಿಕರು ಟಿಕೆಟ್‌ ತೋರಿಸಿ ಪ್ರಯಾಣಿಸಲು ಅವಕಾಶವಿದ್ದು, ಎಸೆಸೆಲ್ಸಿ ಮೌಲ್ಯ ಮಾಪನ ಕೇಂದ್ರಗಳಿಗೆ ತೆರಳುವ ಶಿಕ್ಷಕರಿಗೂ ಅನುಮತಿ ನೀಡಲಾಗಿದೆ.

ಇವರಿಗಿಲ್ಲ ವಿನಾಯಿತಿ
ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳನ್ನು ತೆರೆಯಲು ಅನುಮತಿಯಿಲ್ಲ. ರಾಜ್ಯ ಸರಕಾರದ ಕಚೇರಿಗಳು ಹಾಗೂ ಅವುಗಳ ಸ್ವಾಯತ್ತ ಸಂಸ್ಥೆಗಳು ನಿಗಮ ಮುಂತಾದವು ಮುಚ್ಚಿರಲಿವೆ. ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಸಂಚಾರವನ್ನು (ತುರ್ತು, ಅಗತ್ಯ ಸೇವೆಗಳ ಹೊರತು) ನಿಷೇಧಿಸ ಲಾಗಿದೆ. ಟ್ಯಾಕ್ಸಿಗಳು (ಆಟೋ ರಿಕ್ಷಾಗಳು ಸೇರಿದಂತೆ) ಮತ್ತು ಕ್ಯಾಬ್‌ಗಳಿಗೂ ನಿಷೇಧವಿದೆ.

ಹೆಜಮಾಡಿ: ಸೀಲ್‌ಡೌನ್‌ಗೆ ಸಕಲ ಸಿದ್ಧತೆ
ಜಿಲ್ಲೆಯ ಗಡಿಭಾಗ ಹೆಜಮಾಡಿಯ ಸೀಲ್ ‌ಡೌನ್‌ಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಿನಪೂರ್ತಿ ಕಾರ್ಯಾಚರಿಸುವ ಚೆಕ್‌ಪೋಸ್ಟ್‌ ಮೂಲಕ ಗಡಿ ಪ್ರವೇಶಕ್ಕೆ ಇರುವ ನಿರ್ಬಂಧಗಳನ್ನು ಪಾಲಿಸ‌ಲಾಗುವುದೆಂದು ಕಾಪು ತಹಶೀಲ್ದಾರ್‌ ಮಹಮ್ಮದ್‌ ಐಸಾಕ್‌ ತಿಳಿಸಿದ್ದಾರೆ.

ತುರ್ತು ಆರೋಗ್ಯ ಸಂಬಂಧಿ ಸಮಸ್ಯೆಯಿಂದ ಜಿಲ್ಲೆಗೆ ಆಗಮಿಸುವ ಆ್ಯಂಬುಲೆನ್ಸ್‌ಗಳನ್ನು ಪರಿಶೀಲಿಸಿ ಒಳಬಿಡಲಾಗುವುದು. ಸರಕಾರಿ ಸ್ವಾಮ್ಯದ ಕಂಪೆನಿಗಳು, ಕೇಂದ್ರ ಸರಕಾರದ ಸ್ವಾಮ್ಯದ ಉದ್ದಿಮೆಗಳ ಯಾರಿಗೇ ಆಗಲಿ ಅವರ ಗುರುತು ಚೀಟಿಯನ್ನು ಪರಿಶೀಲಿಸಿ ಪ್ರವೇಶಕ್ಕೆ ಅನುಮತಿ ಇದೆ ಎಂದರು.

ಉಡುಪಿ ಜಿಲ್ಲಾ ಗಡಿ ಬಂದ್‌
ಜಿಲ್ಲೆಯ 10 ಗಡಿಗಳನ್ನು ಬುಧವಾರ ರಾತ್ರಿ ಜಿಲ್ಲಾಡಳಿತ ಬಂದ್‌ ಮಾಡಿದೆ. ಗುರುವಾರದಿಂದ 14 ದಿನಗಳ ಕಾಲ ಗಡಿ ಸೀಲ್‌ಡೌನ್‌ ಮಾಡಲಾಗುತ್ತಿದೆ. ಬಸ್‌ ವ್ಯವಸ್ಥೆ ರದ್ದುಪಡಿಸಲಾಗಿದೆ. ಸಾರ್ವಜನಿಕ ಕಾರ್ಯಕ್ರಮ ನಡೆಸದಂತೆ ಸೂಚಿಸಲಾಗಿದೆ.

ಚರ್ಚ್‌ಗಳಲ್ಲಿ ಪೂಜೆ ರದ್ದು
ಕೋವಿಡ್ 19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ತಳೆದ ನಿರ್ಧಾರಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಸಾಮೂಹಿಕ ಪೂಜೆ, ಧಾರ್ಮಿಕ ಆಚರಣೆಗಳನ್ನು ರದ್ದುಗೊಳಿಸ ಲಾಗಿದೆ. ಮುಂದಿನ ಆದೇಶ ಬರುವವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಧರ್ಮಪ್ರಾಂತದ ಅಧ್ಯಕ್ಷ ರೆ|ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.