ಕೋವಿಡ್ ಪ್ರಕರಣ ಏರಿಕೆ: ದ.ಕ. ಜಿಲ್ಲೆಯ 5 ಶಾಲೆಗಳಿಗೆ ರಜೆ
Team Udayavani, Jan 21, 2022, 6:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ 5 ಶಾಲೆಗೆ ನಿರ್ದಿಷ್ಟ ಕಾಲಾವಧಿಯವರೆಗೆ ರಜೆ ಸಾರಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 10 ಶಾಲೆಗಳು ಕೊರೊನಾ ಕಾರಣದಿಂದ ಮುಚ್ಚಲಾಗಿದೆ.
ಮಂಗಳೂರು ಉತ್ತರದ 1 ಶಾಲೆಯ 10ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಕಾರಣದಿಂದ ಆ ತರಗತಿಯನ್ನು ಮಾತ್ರ ಮುಚ್ಚಲಾಗಿದೆ. ಮಂಗಳೂರು ದಕ್ಷಿಣದ 1 ಶಾಲೆ ಹಾಗೂ ಪುತ್ತೂರು ತಾಲೂಕಿನ 3 ಶಾಲೆಗಳನ್ನು ಮುಚ್ಚಲಾಗಿದೆ.
288 ಮಕ್ಕಳಿಗೆ ಕೊರೊನಾ :
ದ.ಕ. ಜಿಲ್ಲೆಯಲ್ಲಿ ಗುರುವಾರ ಒಟ್ಟು 32 ವಿದ್ಯಾರ್ಥಿಗಳು ಹಾಗೂ 7 ಶಿಕ್ಷಕರಿಗೆ ಕೊರೊನಾ ದಾಖಲಾಗಿದೆ. ಈ ಮೂಲಕ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 288 ವಿದ್ಯಾರ್ಥಿಗಳು ಹಾಗೂ 43 ಶಿಕ್ಷಕರಿಗೆ ಕೊರೊನಾ ವರದಿಯಾಗಿದೆ.
9,616 ಮಕ್ಕಳಿಗೆ ಲಸಿಕೆ ಬಾಕಿ :
ದ.ಕ. ಜಿಲ್ಲೆಯಲ್ಲಿ 9ನೇ ಹಾಗೂ 10ನೇ ತರಗತಿಯಲ್ಲಿ ಒಟ್ಟು 66,497 ವಿದ್ಯಾರ್ಥಿಗಳಿದ್ದು ಈ ಪೈಕಿ 55,298 ಮಕ್ಕಳು ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದಾರೆ. ಇದರಲ್ಲಿ 45,682 ಮಕ್ಕಳು ಲಸಿಕೆ ಪಡೆದಿದ್ದಾರೆ. 9,616 ಮಕ್ಕಳು ಲಸಿಕೆ ಪಡೆಯಲು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್