ದ.ಕ.: ಮತ್ತೆ ರಾಜ್ಯದಲ್ಲೇ ಅತ್ಯಧಿಕ ಸೋಂಕು
Team Udayavani, Aug 15, 2021, 7:40 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 411 ಮಂದಿಗೆ ಕೊರೊನಾ ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣ ದ.ಕ. ಜಿಲ್ಲೆಯಲ್ಲಿ ದಾಖಲಾಗಿದೆ.
ಜಿಲ್ಲೆಯಲ್ಲಿ ಶನಿವಾರ 371 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 1,497 ಮಂದಿ ಕೊರೊನಾ ದಿಂದ ಮೃತಪಟ್ಟಿದ್ದಾರೆ. ಒಟ್ಟು 1,05,533 ಮಂದಿ ಕೊರೊನಾ ಸೋಂಕಿಗೊಳಗಾಗಿದ್ದು, 1,00,354 ಮಂದಿ ಗುಣಮುಖ ರಾಗಿದ್ದಾರೆ. ಸದ್ಯ 3,682 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 3.73 ಇದೆ. ಮಂಗಳೂರಿನ 4 ಮತ್ತು ಬೆಳ್ತಂಗಡಿ ತಾಲೂಕಿನ 2 ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಉಡುಪಿ: 169 ಪಾಸಿಟಿವ್; 1 ಸಾವು :
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ 169 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿಯ 61 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ 98, ಕುಂದಾಪುರದಲ್ಲಿ 25, ಕಾರ್ಕಳದಲ್ಲಿ 43, ಅನ್ಯ ಜಿಲ್ಲೆಯ 3 ಮಂದಿಗೆ ಸೋಂಕು ಕಂಡುಬಂದಿದೆ. ಒಟ್ಟು 5,848 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 146 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,296 ಪ್ರಕರಣಗಳು ಸಕ್ರಿಯವಾಗಿವೆ.
ಕಾಸರಗೋಡು: 520 ಮಂದಿಗೆ ಸೋಂಕು :
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 520 ಮಂದಿಗೆ ಕೊರೊನಾ ದೃಢಪಟ್ಟಿದೆ. 848 ಮಂದಿ ಗುಣಮುಖರಾಗಿ ದ್ದಾರೆ. 6,331 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಸಾವಿನ ಪ್ರಕರಣ ದಾಖಲಾಗಿಲ್ಲ.
ಕೇರಳದಲ್ಲಿ 19,451 ಪ್ರಕರಣ :
ಕೇರಳದಲ್ಲಿ ಶನಿವಾರ 19,451 ಮಂದಿಗೆ ಕೊರೊನಾ ದೃಢಪಟ್ಟಿದೆ. 19,104 ಮಂದಿ ಗುಣಮುಖರಾಗಿದ್ದಾರೆ. 105 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ
18,499ಕ್ಕೇರಿದೆ. 1,80,240 ಸಕ್ರಿಯ ಪ್ರಕರಣಗಳಿವೆ.
ಕೊಡಗು: 95 ಪಾಸಿಟಿವ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ 95 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 605 ಸಕ್ರಿಯ ಪ್ರಕರಣಗಳಿವೆ. 85 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ. 3.83ರಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು