ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದಿನಿಂದ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ


Team Udayavani, Sep 28, 2020, 11:27 AM IST

mng-tdy-2

ಮಹಾನಗರ, ಸೆ. 27:  ಮಂಗಳೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ಸೆ. 28ರಿಂದ ಅ. 5ರ ವರೆಗೆ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ನಡೆಯಲಿದೆ. ಆದರೆ ಇದು ಸ್ವಯಂ ಪ್ರೇರಿತ ತಪಾಸಣೆಯಾಗಿದ್ದು, ಜನ ಗೊಂದಲ, ಭಯಗೊಳ್ಳುವ ಅಗತ್ಯ ಇಲ್ಲ. ದ.ಕ. ಜಿಲ್ಲೆಯಲ್ಲಿ ಕೋವಿಡ್ ದೃಢ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಾಲೂಕಿನ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ಹಮ್ಮಿಕೊಳ್ಳಲು ದ.ಕ. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ರಾಮ ಪಂಚಾಯತ್‌ಗಳ ಪ್ರಮುಖರಿಗೆ ಸೂಚನೆ ನೀಡಿದ್ದಾರೆ.  ಇತರರಿಗೆ ಹರಡದಂತೆ ಮುನ್ನೆಚ್ಚರಿಕೆ ಅಗತ್ಯ

ಜನರಿಗೆ ಕೋವಿಡ್ ಬಗ್ಗೆ ಆತಂಕ ಇರುವ ಹಿನ್ನೆಲೆಯಲ್ಲಿ ಮತ್ತು ಲಕ್ಷಣಗಳು ಕಂಡು ಬಂದಾಗ ಪರೀಕ್ಷೆ ಮಾಡುವ ಬಗ್ಗೆ ಗೊಂದಲ ಇರುವ ಕಾರಣ ಈ ಅವಕಾಶ ನೀಡಲಾಗಿದೆ. ಜ್ವರ, ಕೆಮ್ಮು, ಶೀತ, ಉಸಿರಾಟದ ತೊಂದರೆಯಂತಹ ಲಕ್ಷಣಗಳಿದ್ದಲ್ಲಿ ಇದು ಕೊರೊನಾ ಸೋಂಕಿನ ಲಕ್ಷಣವನ್ನು ಹೋಲುವುದರಿಂದ ಜನ ಕೊರೊನಾ ಪರೀಕ್ಷೆಗೆ ಒಳಪಡಬಹುದು. ಇದು ಸೋಂಕು ತೀವ್ರಗೊಳ್ಳುವುದನ್ನು ಮತ್ತು ಕುಟುಂಬದ ಇತರರಿಗೆ ಹರಡು ವುದನ್ನು ತಡೆಯಲು ಸಹಕಾರಿ. ಜನ ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ :  ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ನಡೆಸಿ ವಾರದೊಳಗೆ ವರದಿ ನೀಡುವಂತೆ ಗ್ರಾಮ ಪಂಚಾಯತ್‌ಗಳಿಗೆ ಸೂಚನೆ ನೀಡಿದ್ದೇನೆ. ಆದರೆ ಇದು ಕಡ್ಡಾಯ ಪರೀಕ್ಷೆಯಲ್ಲ. ಹೀಗಿರುವಾಗ, ಜನರು ಇದು ಕಡ್ಡಾಯವೆಂದು ಭಯ ಪಡಬಾರದು. ಆಸಕ್ತರು ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಗಾಗಬಹುದು. ತಪಾಸಣೆ ಮಾಡಿಸಿಕೊಳ್ಳುವುದರಿಂದ ಕುಟುಂಬ, ಸಮಾಜದಲ್ಲಿ ಹರಡುವುದು, ಸಂಭವನೀಯ ಅಪಾಯಗಳನ್ನು ತಪ್ಪಿಸಬಹುದು. -ಡಾ| ಆರ್‌. ಸೆಲ್ವಮಣಿ,   ಜಿ.ಪಂ. ಸಿಇಒ

ಭಯ ಬೇಡ, ಧೈರ್ಯವಿರಲಿ : ಗ್ರಾ.ಪಂ.  ಮಟ್ಟದಲ್ಲಿ ನಡೆಯುವ ಕೋವಿಡ್‌-19 ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟರೆ ಅದಕ್ಕೆ ಬೇಕಾದ ಔಷಧಗಳನ್ನು ವೈದ್ಯರು ನೀಡುತ್ತಾರೆ.  ಏನೂ ಲಕ್ಷಣವಿಲ್ಲದೆ ಇದ್ದಲ್ಲಿ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಇದ್ದು, ಅಥವಾ ಆಸ್ಪತ್ರೆಗೆ ಹೋಗಬೇಕಾದ ಅಗತ್ಯ ಕಂಡು ಬಂದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬಹುದು. ಆರಂಭಿಕ ಹಂತದಲ್ಲೇ ಈ ರೀತಿಯ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ. ಜನ ಈ ಬಗ್ಗೆ ಅನಗತ್ಯ ಭಯಪಡದೆ ಧೈರ್ಯದಿಂದ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬುದು “ಸುದಿನ’ ಕಳಕಳಿ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.