ಅಗತ್ಯವುಳ್ಳವರಿಗೆ ಲಸಿಕೆ ಕೊಡಿಸಿ ನಿಜಾರ್ಥದ ಸಮಾಜ ಸೇವಕರಾಗಿ


Team Udayavani, Apr 14, 2021, 10:01 AM IST

ಅಗತ್ಯವುಳ್ಳವರಿಗೆ ಲಸಿಕೆ ಕೊಡಿಸಿ ನಿಜಾರ್ಥದ ಸಮಾಜ ಸೇವಕರಾಗಿ

ಸಮಾಜ ಸೇವಕರು ಎಂದು ಕರೆಸಿಕೊಳ್ಳಲು ಬಯಸು ವವರ ಸಂಖ್ಯೆ ಸಾಕಷ್ಟು ದೊಡ್ಡದಿದೆ. ಆದರೆ ಅದರಲ್ಲಿ ನಿಜವಾಗಿ ಸಮಾಜ ಸೇವೆ ಮಾಡುವವರು ಎಷ್ಟು ಮಂದಿ ಎಂಬ ಪ್ರಶ್ನೆ ಜೀವಂತವಾಗಿಯೇ ಇದೆ. ಈಗಿನ ಕೋವಿಡ್ ಕಾಲದಲ್ಲಿ ನಿಜವಾದ ಸಮಾಜ ಸೇವೆ ಮಾಡಲು ಎಲ್ಲರಿಗೂ ಉತ್ತಮ ಅವಕಾಶವಿದೆ. ಅರ್ಹರು ಮತ್ತು ಅಗತ್ಯವುಳ್ಳವರಿಗೆ ಲಸಿಕೆ ಕೊಡಿಸುವ ಮೂಲಕ ವೈಯ ಕ್ತಿಕವಾಗಿ ಆ ವ್ಯಕ್ತಿಗೆ, ಬಳಿಕ ಅವರ  ಮನೆಯವರಿಗೂ ಅನುಕೂಲ ಮಾಡ ಬಹುದು. ಇದು  ಸೋಂಕು ಹರಡುವು ದನ್ನು ತಪ್ಪಿಸಲು ಸಹಾಯಕವಾಗುವ ಮೂಲಕ ಪರೋಕ್ಷವಾಗಿ ಸಮಾಜಕ್ಕೂ  ಉತ್ತಮ ಕೊಡುಗೆಯಾಗುತ್ತದೆ. ಇದಕ್ಕೆ ಕಾರಣರಾದವರು ನಿಜಾರ್ಥದ ಸಮಾಜಸೇವಕರಾಗುತ್ತಾರೆ.

ನಾನು ಎರಡು ಡೋಸ್‌ ಲಸಿಕೆ ತೆಗೆದುಕೊಂಡಿದ್ದೇನೆ. ಯಾವುದೇ ಸಮಸ್ಯೆಯಾಗಿಲ್ಲ. ಕೋವಿಡ್‌ ಮಹಾಮಾರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಎಲ್ಲರೂ ಲಸಿಕೆ ತೆಗೆದುಕೊಳ್ಳುವುದು ಅತಿ ಅಗತ್ಯವಾಗಿದೆ. ಜನರು ಈ ಬಗೆಗಿನ ಯಾವುದೇ ವದಂತಿಗಳಿಗೆ ಕಿವಿಗೊಡದೆ ತಮ್ಮ ಸುರಕ್ಷೆಗೆ ಆದ್ಯತೆ ನೀಡಿ ಲಸಿಕೆ ತೆಗೆದುಕೊಳ್ಳಬೇಕು.ಡಾ| ಎಚ್‌.ಎಸ್‌.ಬಲ್ಲಾಳ್‌,  ಸಹಕುಲಾಧಿಪತಿ  ಮಾಹೆ

ನಾನು ಎರಡು ತಿಂಗಳ ಹಿಂದೆ ಲಸಿಕೆ ಪಡೆದಿದ್ದು, ಇದುವರೆಗೆ ಯಾವುದೇ ಸಮಸ್ಯೆ ಆಗಿಲ್ಲ. ಲಸಿಕೆ ಪಡೆದ ಬಳಿಕ ಹೊಸ ಧೈರ್ಯವೂ ಬಂದಿದೆ. ಆದ್ದರಿಂದ ಯಾರೂ ಆತಂಕ, ಗೊಂದಲಕ್ಕೆ ಒಳಗಾಗಬಾರದು ಹಾಗೂ ಲಸಿಕೆ ಕುರಿತಾದ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಲಸಿಕೆ  ಪಡೆದುಕೊಂಡು ಕೊರೊನಾದಿಂದ ತಮ್ಮನ್ನು ರಕ್ಷಿಸಿಕೊಳ್ಳುವುದು ಅಗತ್ಯ. ಟಿ. ಶೇಷಪ್ಪ ಮೂಲ್ಯ, ನಿವೃತ್ತ ಶಿಕ್ಷಕರು  ಹಾಗೂ  ಸಮಾಜಸೇವಕರು

ಈಗ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಆರಂಭವಾಗಿದ್ದು, ಜನರಲ್ಲಿ ಹೊಸ ಹೊಸ  ಪ್ರಶ್ನೆಗಳು ಮೂಡುತ್ತಿವೆ. ಓದುಗರು ಶನಿವಾರ ಕೇಳಿರುವ ಪ್ರಮುಖ ಪ್ರಶ್ನೆಗಳಿಗೆ  ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್‌. ಚಂದ್ರಶೇಖರ್‌ ಅವರು  ಉತ್ತರಿಸಿದ್ದಾರೆ.

ನನ್ನ ಮಗನಿಗೆ 31 ವರ್ಷ. ವಿದೇಶದಲ್ಲಿದ್ದ ಆತ ಕೊರೊನಾ ಸೋಂಕಿಗೊಳಗಾಗಿ 4 ತಿಂಗಳ ಹಿಂದೆ  ಚೇತರಿಸಿಕೊಂಡಿದ್ದಾನೆ. ಆ ಸಮಯದಲ್ಲಿ ಥೈರಾಯಿಡ್‌ ಸಮಸ್ಯೆ ಕಾಣಿಸಿದ್ದು, ಅದಕ್ಕೆ ಔಷಧ ಬೇಡ ಎಂದಿದ್ದಾರೆ. ಈಗಲೂ ತುಂಬಾ ಸುಸ್ತು,   ಕೆಲಸ ಮಾಡಲು ಆಗುತ್ತಿಲ್ಲ. ಏನು ಮಾಡಬೇಕು?                            – ಹೆಸರು  ತಿಳಿಸಿಲ್ಲ, ಉದ್ಯಾವರ

ಲಸಿಕೆ ತೆಗೆದುಕೊಳ್ಳಬಹುದು. ಇದರಿಂದ ಯಾವುದೇ ರೀತಿಯ ಸಮಸ್ಯೆ ಉಂಟಾಗದು. ಇತರ ಸಮಸ್ಯೆಗೆ  ವೈದ್ಯರನ್ನು ಮುಖತಾ ಭೇಟಿಯಾಗಿ ಸಲಹೆ ಪಡೆದುಕೊಳ್ಳಬಹುದು.

ಒಂದು ಮನೆಯ ಅರ್ಹರೆಲ್ಲರೂ ಒಟ್ಟಿಗೆ ಲಸಿಕೆ ತೆಗೆದುಕೊಳ್ಳುವುದು ಉತ್ತಮವೇ ಅಥವಾ ಬೇರೆ ಬೇರೆ ದಿನಗಳಲ್ಲಿ ತೆಗೆದುಕೊಳ್ಳುವುದು ಉತ್ತಮವೇ?   ರಮೇಶ್‌, ಮಂಗಳೂರು

ಬೇರೆ-ಬೇರೆ ದಿನ ತೆಗೆದುಕೊಳ್ಳುವುದಕ್ಕಿಂತ ಒಟ್ಟಿಗೆ ತೆಗೆದುಕೊಳ್ಳುವುದು ಸೂಕ್ತ. ಇದನ್ನು ಆದಷ್ಟು ಬೇಗನೆ ಮಾಡಿದರೆ ಮತ್ತೂ ಒಳ್ಳೆಯದು.

ಅಟೋಇಮ್ಯೂನಿ ಕಾಯಿಲೆ ಪರೀಕ್ಷೆ ಮಾಡಿದಾಗ ಪಾಸಿಟಿವ್‌ ಬಂದಿದೆ. ನಾನು ಲಸಿಕೆ ತೆಗೆದುಕೊಳ್ಳಬಹುದೇ?-54 ವರ್ಷದ ವ್ಯಕ್ತಿ, ಉಡುಪಿ

ಇವರು ಅತ್ಯಾವಶ್ಯಕವಾಗಿ ಲಸಿಕೆ ತೆಗೆದುಕೊಳ್ಳಬೇಕು. ಸಂಧಿವಾತ ಕಾಯಿಲೆ ಇರುವವರು ಲಸಿಕೆ ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯಾಗದು..

ವಿವಿಧ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕರಿಗೆ  ಲಸಿಕೆ ಸಂಬಂಧಿಸಿ ಹಲವು ಗೊಂದಲಗಳಿರುತ್ತವೆ. ಅವರು ತಮ್ಮ  ವೈದ್ಯರಿಂದ ಸರ್ಟಿಫಿಕೆಟ್‌ ಪಡೆಯುವ ಬದಲು ಲಸಿಕಾ ಕೇಂದ್ರಗಳಲ್ಲಿಯೇ ಅಗತ್ಯ ಮಾಹಿತಿ ನೀಡಿದರೆ ಉತ್ತಮವಲ್ಲವೇ?ಥಾಮಸ್‌,  ಊರು ತಿಳಿಸಿಲ್ಲ

ಕೋವಿಡ್‌-19 ಸೋಂಕಿನಿಂದ ಬಳಲುತ್ತಿರುವವರು ಲಸಿಕೆ ಪಡೆಯಬಾರದು. ಇತರ ಗಂಭೀರ ಕಾಯಿಲೆಗಳಿಂದ ಬಳಲುವವರು ವೈದ್ಯರ ಸಲಹೆ ಪಡೆದುಕೊಳ್ಳಬಹುದು. ಸದ್ಯಕ್ಕೆ ಲಸಿಕಾ ಕೇಂದ್ರಗಳಲ್ಲಿ ಈಗ ಲಸಿಕೆಯನ್ನಷ್ಟೇ ನೀಡಲಾಗುತ್ತಿದೆ. ಇತರ ರೋಗಗಳಿಗೆ ಸಂಬಂಧಿಸಿ ಮಾಹಿತಿ ನೀಡುವ ವ್ಯವಸ್ಥೆಯಿಲ್ಲ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.