ದ. ಕ. ಜಿಲ್ಲೆ: ವಾರದಲ್ಲಿ ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ 


Team Udayavani, Dec 5, 2021, 6:49 AM IST

ದ. ಕ. ಜಿಲ್ಲೆ: ವಾರದಲ್ಲಿ ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ವಾರಗಳಿಂದ ಲಸಿಕೆ ಅಭಿಯಾನಕ್ಕೆ ವೇಗ ದೊರೆತಿದೆ. ಸರಕಾರಿ ಕಚೇರಿಗಳಲ್ಲಿಯೂ ಅಭಿಯಾನ ನಡೆಸಲಾಗುತ್ತಿದ್ದು, ಲಸಿಕೆ ಪಡೆಯುವವರ ಸಂಖ್ಯೆ ಎರಡು ಪಟ್ಟು ಹೆಚ್ಚಳವಾಗಿದೆ.

ಕೆಲವು ವಾರಗಳ ಹಿಂದೆ ಪ್ರತೀ ದಿನ ಸರಾಸರಿ 5ರಿಂದ 6 ಸಾವಿರ ಮಂದಿ ಲಸಿಕೆ ಪಡೆಯುತ್ತಿದ್ದರು. ಸದ್ಯ ಅದು 15ರಿಂದ 20 ಸಾವಿರ ಮಂದಿಗೆ ಏರಿದೆ. ಈ ಹಿಂದೆ ಮಂಗಳೂರಿನಲ್ಲಿ ಆಸ್ಪತ್ರೆಗಳಲ್ಲಿ ಹೆಚ್ಚಾಗಿ ಲಸಿಕೆ ಅಭಿಯಾನ ನಡೆಯುತ್ತಿದ್ದರೆ ಸದ್ಯ ಜಿಲ್ಲಾಧಿಕಾರಿ ಕಚೇರಿ,  ಮಾಲ್‌ಗ‌ಳು ಸೇರಿದಂತೆ ಅತೀ ಹೆಚ್ಚು ಸಾರ್ವಜನಿಕ ಸಂಪರ್ಕ ಇರುವ ಸರಕಾರಿ ಕಚೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಮೊಬೈಲ್‌ ಲಸಿಕೆ ವ್ಯಾನ್‌ ಮೂಲಕ ನಗರದ ಅಲ್ಲಲ್ಲಿ ಲಸಿಕೆ ನೀಡಲಾಗುತ್ತಿದೆ. ಪರಿಣಾಮವಾಗಿ 10 ದಿನಗಳಲ್ಲಿ ಜಿಲ್ಲೆಯ 1,77,347 ಮಂದಿ ಲಸಿಕೆ ಪಡೆದಿದ್ದಾರೆ.

ಹೆಚ್ಚಿನ ಕಚೇರಿಗಳ ಪ್ರವೇಶಕ್ಕೆ ಎರಡೂ ಡೋಸ್‌ ಪಡೆದಿರುವುದು ಕಡ್ಡಾಯ ಮಾಡಿರುವುದರಿಂದ ಅನೇಕ ಮಂದಿ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿದ್ದಾರೆ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು.

ಶೇ. 74ರಷ್ಟು ಮಂದಿಗೆ ಎರಡೂ ಡೋಸ್‌ ಪೂರ್ಣ:

ದ.ಕ. ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಶೇ. 74.18ರಷ್ಟು ಮಂದಿ ಎರಡೂ ಡೋಸ್‌ ಲಸಿಕೆ ಪಡೆದಿದ್ದಾರೆ. ಎರಡನೇ ಡೋಸ್‌ ಪಡೆಯಲು ಆರೋಗ್ಯ ಇಲಾಖೆ ಒಟ್ಟು 15,48,320 ಮಂದಿಯ ಗುರಿ ಇರಿಸಿದ್ದು, ಸದ್ಯ 11,48,602 ಮಂದಿ ಎರಡೂ ಡೋಸ್‌ ಲಸಿಕೆ ಪಡೆದಿದ್ದಾರೆ. ಶೇ. 90.06ರಷ್ಟು ಮಂದಿ ಮೊದಲನೇ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. 17,19,113 ಮಂದಿಯ ಗುರಿಯ ಪೈಕಿ 15,48,320 ಮಂದಿ ಲಸಿಕೆ ಪಡೆದಿದ್ದಾರೆ. ನವೆಂಬರ್‌ ಒಂದೇ ತಿಂಗಳಿನಲ್ಲಿ ಜಿಲ್ಲೆಯ 2,81,975 ಮಂದಿಗೆ ಲಸಿಕೆ ನೀಡಲಾಗಿದೆ. 27,762 ಮಂದಿಗೆ ಮೊದಲನೇ ಡೋಸ್‌, 2,54,213 ಮಂದಿಗೆ ಎರಡನೇ ಡೋಸ್‌ ನೀಡಲಾಗಿದೆ.

ಉಡುಪಿ ಜಿಲ್ಲೆ: ಶೇ.94.4  ಪ್ರಥಮ ಡೋಸ್‌:

ಉಡುಪಿ: ಉಡುಪಿ ಜಿಲ್ಲೆಯ 9.99 ಲಕ್ಷ ಗುರಿಯಲ್ಲಿ 9,43,089 ಮಂದಿ ಪ್ರಥಮ ಡೋಸ್‌ ಲಸಿಕೆಯನ್ನು ಪಡೆದಿದ್ದಾರೆ. ಇದರ ಪ್ರಮಾಣ ಶೇ. 94.4. ಎರಡನೆಯ ಡೋಸ್‌ ಲಸಿಕೆಯನ್ನು 7,43,484 ಮಂದಿ ಪಡೆದಿದ್ದು ಶೇ.74.42 ಸಾಧನೆಯಾಗಿದೆ.

ಲಸಿಕೆ ಮಿತ್ರ’  ಅಭಿಯಾನ ಯಶಸ್ವಿ :

ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಚುರುಕು ನೀಡುವ ಉದ್ದೇಶದಿಂದ “ಲಸಿಕೆ ಮಿತ್ರ’ ಅಭಿಯಾನ ಆರಂಭಿಸಲಾಗಿದೆ. ಅಂಗನವಾಡಿ- ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬಂದಿ, ವಿವಿಧ ಕಾಲೇಜುಗಳ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆಯಲು ಅರಿವು ಮೂಡಿಸುತ್ತಿದ್ದಾರೆ.

10 ದಿನಗಳಲ್ಲಿ ಲಸಿಕೆ ಪಡೆದವರು:

ದಿನಾಂಕ             ದ.ಕ.     ಉಡುಪಿ

ನ. 27     40,601   9,055

ನ. 28     6,281     4,180

ನ. 29     15,657 14,723

ನ. 30     12,661   11,866

ಡಿ. 1       24,652 16,476

ಡಿ. 2       11,870 8,349

ಡಿ. 3       15,821 10,089

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.