ಮರಳು ದಿಬ್ಬಕ್ಕೆ ಢಿಕ್ಕಿ: ಬೋಟ್ ಮುಳುಗಡೆ
Team Udayavani, May 26, 2017, 11:06 AM IST
ಉಳ್ಳಾಲ: ಮಂಗಳೂರಿನ ದಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ತೆರಳುತ್ತಿದ್ದ ಬೋಟ್ ಉಳ್ಳಾಲ ಅಳಿವೆ ಬಾಗಿಲಿನಲ್ಲಿ ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದು ಸಮುದ್ರದಲ್ಲಿ ಮುಳುಗಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಬೋಟಿನಲ್ಲಿದ್ದ 10 ಮಂದಿ ಮೀನುಗಾರರನ್ನು ಇನ್ನೊಂದು ಮೀನುಗಾರಿಕಾ ಬೋಟಿನವರು ರಕ್ಷಿಸಿದ್ದಾರೆ. ಮಂಗಳೂರಿನ ಲೋಕನಾಥ ಬೋಳಾರ್ ಅವರಿಗೆ ಸೇರಿದ “ಎಚ್.ಎಂ.ಎಲ್’ಮೀನುಗಾರಿಕಾ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ಬುಧವಾರ ರಾತ್ರಿ ಹೊರಟಿದ್ದು, ಮೀನುಗಾರಿಕೆಗೆ ಹೊರಟ ಕೆಲವೇ ಗಂಟೆಗಳಲ್ಲಿ ಅಪಘಾತ ಸಂಭವಿಸಿತ್ತು.
ಬೋಟ್ ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆಯುತ್ತಿದ್ದಂತೆ ಬೋಟ್ ಒಡೆದು ಮುಳುಗಲು ಆರಂಭವಾಗಿದ್ದು, ಮಾಹಿತಿ ಸಿಗುತ್ತಿದ್ದಂತೆ ಬೇರೆ ಬೋಟ್ನವರು ಆಗಮಿಸಿ ಬೋಟ್ನಲ್ಲಿದ್ದ 10 ಮಂದಿ ಮೀನುಗಾರರು ರಕ್ಷಣೆ ಮಾಡಿದರು. ಘಟನೆಯಿಂದ ಬೋಟ್ ಮಾಲಕರಿಗೆ ರೂ. 70 ಲಕ್ಷ ನಷ್ಟ ಉಂಟಾಗಿದೆ. ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ