ಕ್ರೆಡಿಟ್‌ ಕಾರ್ಡ್‌: ಗ್ರಾಹಕನಿಗೆ 48,695 ರೂ. ಖೋತಾ !


Team Udayavani, Mar 9, 2018, 10:18 AM IST

cash-less.jpg

ವಿಟ್ಲ : ರಾಷ್ಟ್ರೀಕೃತ ಬ್ಯಾಂಕಿನ ಕ್ರೆಡಿಟ್‌ ಕಾರ್ಡ್‌ ಬಳಸಿ, ಕ್ಯಾಶ್‌ಲೆಸ್‌ ವ್ಯವಹಾರ ನಡೆಸಿದ ಗ್ರಾಹಕರೋರ್ವರ ವಿಶ್ವಾಸಕ್ಕೆ ಧಕ್ಕೆ ಉಂಟಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಗ್ರಾಹಕರನ್ನು ಸತಾಯಿಸಿಯೂ ಜವಾಬ್ದಾರಿಯುತವಾದ ಯಾವುದೇ ಉತ್ತರ ನೀಡದೇ ನುಣುಚಿಕೊಳ್ಳುವ ಮೂಲಕ ಬ್ಯಾಂಕ್‌ ಗ್ರಾಹಕ ಸೇವಾ ಕೇಂದ್ರ ಮತ್ತು ಒಂಬುಡ್ಸ್‌ ಮನ್‌ ವ್ಯಾವಹಾರಿಕ ಚಿಂತನೆಯನ್ನೂ ಬಿಟ್ಟು ಹಣವನ್ನೂ ಹಿಂದಿರುಗಿಸದೇ ಗ್ರಾಹಕನ ವಿಶ್ವಾಸಕ್ಕೆ ಧಕ್ಕೆ ತಂದಿದೆ.

ನಗದು ರಹಿತ ವ್ಯವಹಾರ ವ್ಯವಸ್ಥೆಗೆ ಸ್ಪಂದಿಸಿದ ವಿಟ್ಲಪಟ್ನೂರು ಗ್ರಾಮದ ಉದಯ ಕಾನ ಅವರು ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಮೂಲಕ ವ್ಯವಹಾರ ನಡೆಸುತ್ತಿದ್ದರು. ಉಪನ್ಯಾಸಕರೂ ಕೃಷಿಕರೂ ಆಗಿರುವ ವ್ಯವಹಾರದಲ್ಲಿ ಅನನುಭವಿಯೂ ಅಲ್ಲ. ನಾಲ್ಕು ತಿಂಗಳ ಹಿಂದೆ ವಿಟ್ಲದ ಶ್ರೀನಿವಾಸ್‌ ಟ್ರೇಡರ್ನಿಂದ ಸಾಮಗ್ರಿ ಖರೀದಿಸಿದ ಅವರು ಕ್ರೆಡಿಟ್‌ ಕಾರ್ಡ್‌ ಮೂಲಕ 48,695 ರೂ. ಪಾವತಿಸಿದ್ದರು. ಆ ದಿನ ಅವರ ಖಾತೆಯಿಂದ ಹಣ ತೆಗೆದ ಸಂದೇಶ ಬಂದಿತ್ತು. ಆದರೆ ಅದು ಶ್ರೀನಿವಾಸ್‌ ಟ್ರೇಡರ್ ಖಾತೆಗೆ ಜಮಾ ಆಗಲಿಲ್ಲ. ಇಬ್ಬರೂ ಒಂದೆರಡು ದಿವಸಗಳಲ್ಲಿ ಪಾವತಿಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. 

ಹಣ ಜಮೆಯಾಗದ ಕಾರಣ ಉದಯ ಅವರು ಖಾತೆಯಲ್ಲಿ ಹಣ ಇರಬಹುದು ಎಂದುಕೊಂಡಿದ್ದರು. 15 ದಿವಸಗಳ ಬಳಿಕ ಅವರ ಖಾತೆಯಿಂದ 48,695 ರೂ. ಕಡಿತಗೊಳಿಸಲಾಯಿತು. ತತ್‌ಕ್ಷಣ ಅವರು ಶ್ರೀನಿವಾಸ್‌ ಟ್ರೇಡರ್ ಮಾಲಕರನ್ನು ಸಂಪರ್ಕಿಸಿದರು. ಆದರೆ ಅವರ ಖಾತೆಗೆ ಜಮಾ ಆಗಲಿಲ್ಲ. ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸಿದ ಅವರಿಗೆ ದೂರು ದಾಖಲಿಸಲು ಸೂಚನೆ ನೀಡಲಾಯಿತು. ಅವರ ಸೂಚನೆಯನ್ನೆಲ್ಲ ಪಾಲಿಸಿಯೂ ಸಮಸ್ಯೆ ಪರಿಹಾರದ ನಿರೀಕ್ಷೆಯಲ್ಲಿದ್ದ ಉದಯ ಅವರು ಮತ್ತೆ ಸಮಸ್ಯೆಯ ಸುಳಿಯಲ್ಲಿ ಸಿಗುವಂತಾಯಿತು. ಅವರು ಒಂಬುಡ್ಸ್‌ಮನ್‌ಗೆ ದೂರು ನೀಡಿದರು. ಅವರೂ ಸಮಸ್ಯೆಯನ್ನು ಪರಿಹರಿಸುವ ಬದಲಾಗಿ ಇದು ನಮಗೆ ಸಂಬಂಧಪಟ್ಟಿರುವುದಿಲ್ಲ ಎಂದು ತನಿಖೆ ಪ್ರಕ್ರಿಯೆಯಿಂದ ತಪ್ಪಿಸಿಕೊಂಡರು.

ಕಸ್ಟಮರ್‌ ಕೇರ್‌ನವರು ಪ್ರಕರಣವನ್ನು ಮುಚ್ಚಲು ಪ್ರಯತ್ನಿಸುತ್ತಿದ್ದಾರೆ. ಗ್ರಾಹಕರ ಸಮಸ್ಯೆಯನ್ನು 75 ದಿನಗಳ ಒಳಗೆ ಮುಗಿಸಬೇಕೆಂಬ ಕಾನೂನಿದೆ. ಆದುದರಿಂದ ನಾವು ನಿಮ್ಮ ಈ ಪ್ರಕರಣವನ್ನು ಮುಕ್ತಾಯಗೊಳಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಗ್ರಾಹಕರಾದ ಉದಯ ಕಾನ ಅವರು ತನ್ನ ಖಾತೆಯಿಂದ ಹಣವನ್ನು ತೆಗೆದು ಸಂಬಂಧಪಟ್ಟವರಿಗೆ ಹಸ್ತಾಂತರಿಸದೇ ನನಗೂ ಹಿಂದಿರುಗಿಸದೇ ಈ ಪ್ರಕರಣವನ್ನು ಮುಚ್ಚಿದರೆ ನ್ಯಾಯ ಸಿಕ್ಕಂತಾಗುತ್ತದೆಯೇ ? ನನಗೆ ನ್ಯಾಯ ಬೇಕು ಮತ್ತು ನನ್ನ ಹಣವನ್ನು ಹಿಂದಿರುಗಿಸಬೇಕು ಹಾಗೂ ಕಳೆದ ನಾಲ್ಕು ತಿಂಗಳ ಕಾಲ ಬ್ಯಾಂಕ್‌ ನೀಡಿದ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.