ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ: ತಂದೆಗೆ 10 ವರ್ಷ ಜೈಲು
Team Udayavani, Jul 30, 2022, 12:39 AM IST
ಮಂಗಳೂರು: ಪುತ್ರಿಯ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್ಸಿ(2) (ಪೋಕ್ಸೊ ನ್ಯಾಯಾಲಯ) 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಬಂಟ್ವಾಳ ತಾಲೂಕಿನ ಇಸ್ಮಾಯಿಲ್ (47) ಶಿಕ್ಷೆಗೊಳಗಾದವ. ಈತ ತನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ 2019ರಲ್ಲಿ ಪೋಕೊÕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 20,000 ರೂ. ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಮತ್ತೆ 1 ತಿಂಗಳು ಸಾದಾ ಸಜೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ.
ಅಂದಿನ ಪ್ರೊಬೆಷನರಿ ಡಿವೈಎಸ್ಪಿ, ಬೆಳ್ತಂಗಡಿಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಗೋವಿಂದರಾಜು ಬಿ. ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಅಭಿಯೋಜನೆ ಪರ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದ ಮಂಡಿಸಿದ್ದರು.
ಬಾಲಕಿಗೆ ಕಿರುಕುಳ: ಆರೋಪಿ ಬಂಧನ
ಪುಂಜಾಲಕಟ್ಟೆ: ಯುವಕನೋರ್ವ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಪುಂಜಾಲಕಟ್ಟೆಯಲ್ಲಿ ಜು. 25ರಂದು ಸಂಭವಿಸಿದೆ.
ಆರೋಪಿ ಕುಕ್ಕಳ ಗ್ರಾಮದ ಗಂಪದಡ್ಡ ನಿವಾಸಿ ಮಹಮ್ಮದ್ ಸಿರಾಜ್ (28) ನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಸರಕಾರಿ ಶಾಲಾ ಮೈದಾನದಲ್ಲಿ ಸಂಜೆ ಶಾಲೆ ಬಿಡುವ ಹೊತ್ತು ನಿಂತಿದ್ದ ಶಾಲಾ ಬಸ್ನ ಒಳಗಡೆ ಪಾನಮತ್ತನಾಗಿ ಅಕ್ರಮವಾಗಿ ಪ್ರವೇಶಗೈದ ಆರೋಪಿ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಮರುದಿನ ವಿದ್ಯಾರ್ಥಿನಿ ಶಾಲೆಗೆ ಹೋಗದಿರುವ ಬಗ್ಗೆ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಹೆತ್ತವರು ಶಾಲೆಗೆ ಬಂದು ಬಸ್ ಚಾಲಕ ಇಸುಬು ಎನ್ನುವಾತನಲ್ಲಿ ವಿಚಾರಿಸಿದ್ದಾರೆ. ಬಳಿಕ ಶಾಲಾ ಮುಖ್ಯ ಶಿಕ್ಷಕರಲ್ಲಿ ಈ ಬಗ್ಗೆ ತಿಳಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ