ಪರವಾನಿಗೆ ಇಲ್ಲದೆ ಮರ ಸಾಗಾಟ ಪತ್ತೆ; ವಶಕ್ಕೆ
Team Udayavani, Jul 31, 2022, 1:06 AM IST
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮುಂಡೋಳಿಮೂಲೆ ಸಮೀಪದಿಂದ ಹಲಸಿನ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸುಳ್ಯ ಅರಣ್ಯ ಇಲಾಖೆ ಸಿಬಂದಿಯು ವಾಹನ, ಮರದ ದಿಮ್ಮಿ ವಶಪಡಿಸಿಕೊಂಡು, ನಾಲ್ವರ ವಿರುದ್ಧ ಕೇಸು ದಾಖಲಿಸಿಕೊಂಡ ಘಟನೆ ಜು. 29ರ ರಾತ್ರಿ ನಡೆದಿದೆ.
ಅರಣ್ಯ ಇಲಾಖೆ ಸಿಬಂದಿ ರಾತ್ರಿ ಗಸ್ತು ತಿರುಗುತ್ತಿದ್ದಾಗ ಮುಂಡೋಳಿಮೂಲೆಯ ಮುಳ್ಯ ಕಜೆ ಎಂಬಲ್ಲಿ ವಾಹನದಲ್ಲಿ ಹಲಸಿನ ಮರದ ದಿಮ್ಮಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ತತ್ಕ್ಷಣ ಅರಣ್ಯ ಇಲಾಖೆಯವರು ವಾಹನವನ್ನು ತಡೆದು, ಪರವಾನಿಗೆ ಇಲ್ಲದೆ ಮರ ಸಾಗಿಸುತ್ತಿದ್ದ ಮಹಮ್ಮದ್ ಶಫೀಕ್ ಅಡ್ಕಾರ್, ಸುಂದರ್ ಅಡ್ಕಾರ್, ಫೈಝಲ್ ಅಡ್ಕಾರ್ ನನ್ನು ವಶಕ್ಕೆ ಪಡೆದಿದ್ದರು. ಅವರು ನೀಡಿದ ಹೇಳಿಕೆಯಂತೆ ಮರ ಸಾಗಾಟದ ಪ್ರಮುಖ ಆರೋಪಿ ಅಬ್ದುಲ್ ಮಜೀದ್ ನಡುವಡ್ಕ ಸೇರಿದಂತೆ ನಾಲ್ವರ ವಿರುದ್ಧ ಕೇಸು ದಾಖಲಾಗಿದೆ.
ಸುಳ್ಯ ಎ.ಸಿ.ಎಫ್. ಪ್ರವೀಣ್ ಕುಮಾರ್ ಶೆಟ್ಟಿ, ರೇಂಜರ್ ಗಿರೀಶ್ ಮಾರ್ಗದರ್ಶನದಲ್ಲಿ ಫಾರೆಸ್ಟರ್ ಯಶೋಧರ, ಸಿಬಂದಿ ದೇವಿಪ್ರಸಾದ್, ಲಿಂಗಪ್ಪ, ಗಂಗಾಧರ್, ಪುರುಷೋತ್ತಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!