ರಸ್ತೆ ವಿಭಾಜಕಕ್ಕೆ ಸ್ಕೂಟರ್ ಢಿಕ್ಕಿ:ಹೊಂಡ ತಪ್ಪಿಸಲು ಹೋಗಿ ಪ್ರಾಣವೇ ಹೋಯ್ತು
Team Udayavani, Aug 6, 2022, 11:58 PM IST
ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರಿನ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸಂಭವಿಸಿದೆ.
ಕೊಂಚಾಡಿ ನಿವಾಸಿ ಆತೀಶ್ (20) ಮೃತಪಟ್ಟವರು. ಆತೀಶ್ ಸಂಜೆ 6.45ರ ಸುಮಾರಿಗೆ ನಂತೂರು ಜಂಕ್ಷನ್ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಹೋಗುತ್ತಿದ್ದರು. ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ಗಿಂತ ಸ್ವಲ್ಪ ಮೊದಲು ಡಿವೈಡರ್ ಪಕ್ಕದಲ್ಲಿದ್ದ ಹೊಂಡವನ್ನು ಮಳೆಯಿಂದಾಗಿ ಗಮನಿಸದೆ ಕೊನೆಯ ಕ್ಷಣದಲ್ಲಿ ಹೊಂಡ ತಪ್ಪಿಸಲು ಯತ್ನಿಸಿದ್ದರು. ಆಗ ಸ್ಕೂಟರ್ ನಿಯಂತ್ರಣ ಕಳೆದುಕೊಂಡು
ಡಿವೈಡರ್ಗೆ ಢಿಕ್ಕಿ ಹೊಡೆದು ಸುಮಾರು 50 ಅಡಿ ದೂರಕ್ಕೆ ಹೋಗಿ ಬಿತ್ತು. ಆತೀಶ್ ಅವರ ತಲೆ ಡಿವೈಡರ್ ಮಧ್ಯೆ ಅಳವಡಿಸಿದ ರಿಫ್ಲೆಕ್ಟರ್ ಕಬ್ಬಿಣದ ಕಂಬಕ್ಕೆ ಬಡಿದಿತ್ತು.
ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ದದರೂ, ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್