ತೊಕ್ಕೊಟ್ಟು: ಬೈಕ್ -ಕಾರು ಢಿಕ್ಕಿ; ಇಬ್ಬರಿಗೆ ಗಾಯ
Team Udayavani, Aug 11, 2022, 12:09 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಿಂದ ಬಂದ ಬೈಕ್ಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್ ಎರಡೂ ಕಮರಿಗೆ ಉರುಳಿ ಬಿದ್ದಿದೆ.
ಮರ ಕಡಿಯುವ ಕೆಲಸ ಮಾಡುತ್ತಿದ್ದ ಮಂಜನಾಡಿ ನಿವಾಸಿ ಆಸೀಫ್ ಮತ್ತು ಅಂಬ್ಲಿಮೊಗರು ನಿವಾಸಿ ಮಹಮ್ಮದ್ ಅಶ್ರಫ್ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾರಿನಲ್ಲಿದ್ದ ಸಂದೀಪ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಅಪಘಾತದಲ್ಲಿ ಆಸೀಫ್ ಗಂಭೀರ ಗಾಯಗೊಂಡಿದ್ದು, ಕಲ್ಲಿನೆಡೆಯಲ್ಲಿ ಸಿಲುಕಿದ್ದ ಅವರನ್ನು ಸ್ಥಳೀಯರು ಮೇಲಕ್ಕೆ ತಂದಿದ್ದು ಬಳಿಕ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು.
ಮರ ಕಡಿಯುವ ಕೆಲಸ ಮುಗಿಸಿ ಉಳ್ಳಾಲ ಕಡೆಯಿಂದ ಕಾಪಿಕಾಡು ಕಡೆಗೆ ವಿರುದ್ಧ ದಿಕ್ಕಿನಲ್ಲಿ ಆಸೀಫ್ ಅವರು ತಮ್ಮ ಬೈಕ್ನಲ್ಲಿ ಮಹಮ್ಮದ್ ಅಶ್ರಫ್ರೊಂದಿಗೆ ತೆರಳುತ್ತಿದ್ದಾಗ ಕುಂಪಲ ಕಡೆಯಿಂದ ಕೊಲ್ಯ ಮಾರ್ಗವಾಗಿ ಓವರ್ ಬ್ರಿಡ್ಜ್ ಕಡೆ ಬರುತ್ತಿದ್ದ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಕಾರು ಮತ್ತು ಬೈಕ್ ಕಮರಿಗೆ ಉರುಳಿ ಬಿದ್ದಿತ್ತು. ದಕ್ಷಿಣ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್