ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ಬೆಂಕಿ
Team Udayavani, Aug 21, 2022, 12:18 AM IST
ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್ ಸ್ಕೂಟರ್ಗಳು ಬೆಂಕಿಗಾಹುತಿಯಾದ ಘಟನೆ ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ.
ಘಟನೆಯಲ್ಲಿ 2 ಸ್ಕೂಟರ್ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಮತ್ತೆರಡು ಸ್ಕೂಟರ್ಗಳಿಗೆ ಭಾಗಶಃ ಹಾನಿಯಾಗಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್ಗಳನ್ನು ಬೋಳೂರಿನ ಹಾಲಿನ ಬೂತ್ ಬಳಿ ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಚಾರ್ಜಿಗೆ ಇಡಲಾಗಿತ್ತು. ಮಧ್ಯಾಹ್ನದ ವೇಳೆಗೆ ಸ್ಕೂಟರ್ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಪರಿಣಾಮ ಎರಡು ಸ್ಕೂಟರ್ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಸ್ಥಳೀಯರ ಪ್ರಯತ್ನದಿಂದಾಗಿ ಇನ್ನೆರಡು ಸ್ಕೂಟರ್ಗಳನ್ನು ದೂರಕ್ಕೆ ತರಲಾಯಿತು. ಅಷ್ಟರಲ್ಲೇ ಅವುಗಳಿಗೂ ಭಾಗಶಃ ಹಾನಿಯಾಗಿದೆ.
4 ಲಕ್ಷ ರೂ. ನಷ್ಟ
ಸ್ಕೂಟರ್ಗಳು ಬೆಂಕಿಗಾಹುತಿ ಆಗಿರುವುದರಿಂದ ಒಟ್ಟು ಅಂದಾಜು 4 ಲ.ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದರು. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !