ಕಾರು ಕಳವು ಪ್ರಕರಣ: 25 ವರ್ಷಗಳ ಬಳಿಕ ಆರೋಪಿಯ ಬಂಧನ


Team Udayavani, Sep 14, 2022, 7:00 AM IST

ಕಾರು ಕಳವು ಪ್ರಕರಣ: 25 ವರ್ಷಗಳ ಬಳಿಕ ಆರೋಪಿಯ ಬಂಧನ

ಮಂಗಳೂರು: ಕಾರು ಕಳವು ನಡೆದು 25 ವರ್ಷಗಳ ಅನಂತರ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಆರೆನಹಳ್ಳಿ ನಿವಾಸಿ ಅಸ್ಲಾಂ ಆಲಿಯಾಸ್‌ ಅಸ್ಲಾಂ ಪಾಷಾ (65) ಬಂಧಿತ ಆರೋಪಿ. ಈತ ಮಂಗಳೂರಿನಲ್ಲಿ 1997ರಲ್ಲಿ ನಡೆದಿದ್ದ ಕಳವು ಪ್ರಕರಣದ ಆರೋಪಿ.

ಪ್ರಕರಣದ ವಿವರ
1997ರ ನ. 11ರಂದು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಂಬಾಸಿಡರ್‌ ಕಾರು ಕಳವು ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಯಾಗಿರಲಿಲ್ಲ. ಅನಂತರ ಮೈಸೂರಿನಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಲ್ಲಿನ ಪೊಲೀಸರು ಅಸ್ಲಾಂನನ್ನು ಬಂಧಿಸಿದ್ದರು. ಆಗ ಮಂಗಳೂರಿನಲ್ಲಿ ಕಾರು ಕಳವು ಮಾಡಿರುವ ಪ್ರಕರಣವೂ ಬಯಲಾಗಿತ್ತು. ಆರೋಪಿ ಮೈಸೂರು ಜೈಲಿನಲ್ಲಿದ್ದ.

ಮಂಗಳೂರು ಪೊಲೀಸರು ಎರಡು ಬಾರಿ ಬಾಡಿ ವಾರೆಂಟ್‌ ಮೇಲೆ ಆರೋಪಿಯನ್ನು ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಜೈಲಿನಲ್ಲಿಯೇ ಇದ್ದ. ಕೆಲವು ಸಮಯದ ಅನಂತರ ಮೈಸೂರಿನ ಪ್ರಕರಣಗಳಲ್ಲಿ ಬಿಡುಗಡೆಗೊಂಡಿದ್ದ. ಆದರೆ ಮಂಗಳೂರಿನ ಪ್ರಕರಣ ಬಾಕಿಯಾಗಿತ್ತು. 2015 ಮೇ 7ರಂದು ಎಲ್‌ಪಿಸಿ (ದೀರ್ಘ‌ಕಾಲ ಬಾಕಿ ಇರುವ ಪ್ರಕರಣ) ಪ್ರಕರಣವೆಂದು ಪರಿಗಣಿಸಲಾಗಿತ್ತು. ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಕಳೆದ ಸೋಮವಾರ ಮಂಗಳೂರು ದಕ್ಷಿಣ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಪುಟ್ಟರಾಮ ಹಾಗೂ ಕಾನ್‌ಸ್ಟೆಬಲ್‌ ರವಿಕುಮಾರ್‌ ಅವರು ಪಿರಿಯಾಪಟ್ಟಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಳ್ಳು ವಿಳಾಸ ನೀಡಿದ್ದ
ಆರೋಪಿ ಪೊಲೀಸರಿಗೆ ಸುಳ್ಳು ವಿಳಾಸಗಳನ್ನೇ ನೀಡಿದ್ದ. ಪೀಣ್ಯ ಬೆಂಗಳೂರಿನ ನಿವಾಸಿಯೆಂದು ತೋರಿಸಿದ್ದ. ಈತನ ಕುಟುಂಬದ ಬಗ್ಗೆ ನೀಡಿದ ಮಾಹಿತಿಯೂ ಸುಳ್ಳಾಗಿತ್ತು. ಈತ ಪತ್ನಿ, ಅತ್ತೆ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದ.

ಅಸ್ಲಾಂ ಪಾಷ ಮಂಗಳೂರಿನ ಅತ್ತಾವರ ಬಾಬುಗುಡ್ಡೆ ಮತ್ತು ಎಮ್ಮೆಕೆರೆಯಲ್ಲಿ ಕಾರುಗಳನ್ನು ಕಳವು ಮಾಡಿದ್ದ. ಅಲ್ಲದೆ ಮೈಸೂರು, ಪಿರಿಯಾಪಟ್ಟಣ ಮೊದಲಾದೆಡೆ ಹಲವು ವಾಹನಗಳನ್ನು ಕಳವು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

6 ಅಂಬಾಸಿಡರ್‌ ಕಾರು ಕದ್ದಿದ್ದ
ಅಸ್ಲಾಂ ಪಾಷಾ ಮಂಗಳೂರಿನ ಕೊಡಿಯಾಲಬೈಲ್‌, ಎಮ್ಮೆಕೆರೆ ಮತ್ತು ಅತ್ತಾವರ ಬಾಬುಗುಡ್ಡೆಯಲ್ಲಿ ಒಟ್ಟು ಮೂರು ಅಂಬಾಸಿಡರ್‌ ಕಾರುಗಳನ್ನು ಕದ್ದಿದ್ದ. ಅಲ್ಲದೆ ಬೆಂಗಳೂರು ಜೆಪಿ ನಗರ, ಮೈಸೂರು ವಿಶ್ವೇಶ್ವರನಗರ, ಕೆ.ಆರ್‌.ಆಸ್ಪತ್ರೆ ಬಳಿ ಕೂಡ ತಲಾ ಒಂದು ಅಂಬಾಸಿಡರ್‌ ಕಾರುಗಳನ್ನು ಕಳವು ಮಾಡಿದ್ದ. ಮೈಸೂರು ಕುಕ್ರಳ್ಳಿ ಕೆರೆ, ವಿಜಯನಗರ, ಬೆಂಗಳೂರು ಮೊದಲಾದೆಡೆ 8ಕ್ಕೂ ಅಧಿಕ ಬೈಕ್‌ಗಳನ್ನು ಕಳವು ಮಾಡಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.