ಉಳ್ಳಾಲ: ಸಮುದ್ರಪಾಲಾದ ಮೈಸೂರು ಮೂಲದ ಮಹಿಳೆ
Team Udayavani, May 29, 2022, 1:20 AM IST
ಉಳ್ಳಾಲ: ಉಳ್ಳಾಲದ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮೈಸೂರು ನಿವಾಸಿ ಭಾಗ್ಯಲಕ್ಷ್ಮೀ (45) ಮೃತರು. ಭಾಗ್ಯಲಕ್ಷ್ಮೀ ದಂಪತಿ, ಅವರ ಮೂವರು ಪುತ್ರಿಯರು ಹಾಗೂ ಮೊಮ್ಮಗಳು ಮೈಸೂರಿನಿಂದ ಮಂಗಳೂರಿಗೆ ವಿಹಾರಕ್ಕೆಂದು ಬಂದಿದ್ದರು. ಪಂಪ್ವೆಲ್ ಬಳಿ ರೂಮಿನಲ್ಲಿ ತಂಗಿದ್ದ ಕುಟುಂಬ ಮೇ 28ರಂದು ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದರು.
ಅಲ್ಲಿಂದ ಉಳ್ಳಾಲದ ಸಮುದ್ರವಿಹಾರಕ್ಕೆಂದು ತೆರಳಿದ್ದ ಕುಟುಂಬದ ಪೈಕಿ ಭಾಗ್ಯಲಕ್ಷ್ಮೀ ಅವರು ಸಮುದ್ರದ ಅಲೆಯೊಂದಕ್ಕೆ ಸಿಲುಕಿ ಸಮುದ್ರಪಾಲಾಗಿದ್ದಾರೆ. ತತ್ಕ್ಷಣ ಕುಟುಂಬಸ್ಥರು ಕಿರುಚಲು ಆರಂಭಿಸಿದಾಗ, ಸಮೀಪದಲ್ಲಿ ಇದ್ದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ದೌಡಾಯಿಸಿ ಮಹಿಳೆಯನ್ನು ಮೇಲ ಕ್ಕೆತ್ತಿದರು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ