ಉಳ್ಳಾಲ : ರಸ್ತೆ ಅಪಘಾತದಿಂದ ಏಳು ತಿಂಗಳು ಕೋಮಾದಲ್ಲಿದ್ದ ಯುವತಿ ಸಾವು
Team Udayavani, Jun 25, 2022, 11:08 PM IST
ಉಳ್ಳಾಲ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿ ಏಳು ತಿಂಗಳುಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ.
ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಪಲ್ಲವಿ (25) ಮೃತ ಯುವತಿ. 2021ರ ಡಿ. 2ರಂದು ಮಂಗಳೂರಿನಿಂದ ಕೆಲಸ ಮುಗಿಸಿ ವಾಪಸಾಗುತ್ತಿದ್ದ ಪಲ್ಲವಿ ಕೊಲ್ಯ ಸಮೀಪ ರಾ.ಹೆ. 66 ಅನ್ನು ದಾಟುವ ಸಂದರ್ಭ ಮೊಬೈಲ್ ಕೈಯಿಂದ ಕೆಳಗೆ ಬಿತ್ತೆಂದು ಹೆಕ್ಕಲು ಮುಂದಾದಾಗ ಅದೇ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು.
ಈ ಅಪಘಾತದಲ್ಲಿ ಬೈಕ್ ಸವಾರ ಕುಂಪಲ ಆಶ್ರಯ ಕಾಲನಿ ನಿವಾಸಿ ವಿಜೇಶ್ (31) ಸ್ಥಳದಲ್ಲೇ ಸಾವನ್ನಪ್ಪಿದ್ದರು. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಪಲ್ಲವಿ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸುಧಾರಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಂಗಳೂರು ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಪಲ್ಲವಿ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ : ಉಳ್ಳಾಲ ಸಮುದ್ರ ತೀರದಲ್ಲಿ ದ.ಕ ಜಿಲ್ಲಾಡಳಿತ ನೇತೃತ್ವದಲ್ಲಿ ಅಣುಕು ರಕ್ಷಣಾ ಕಾರ್ಯಾಚರಣೆ