ಮೂವರು ಮಕ್ಕಳ ಸಾವಿನ ಪ್ರಕರಣ: ಪದ್ಮನ್ನೂರಿನಲ್ಲಿ ಆವರಿಸಿದೆ ನೀರವ ಮೌನ
Team Udayavani, Jun 25, 2022, 12:38 AM IST
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ (46) ತನ್ನ ಪತ್ನಿ ಹಾಗೂ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆ ಯತ್ನ ಮಾಡಿದ ಪ್ರಕರಣದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಹಿತೇಶ್ನ ಮಾನಸಿಕ ಖಿನ್ನತೆ, ಮೌನ, ಆರ್ಥಿಕ ಮುಗ್ಗಟ್ಟು ಮೂವರು ಮಕ್ಕಳನ್ನು ಸಾವಿನಂಚಿಗೆ ತಳ್ಳಿದೆ. ಘಟನೆ ನಡೆದ ಪದ್ಮನ್ನೂರಿನಲ್ಲಿ ನೀರವ ಮೌನ ಆವರಿಸಿದೆ.
ಹಿತೇಶ್ ಮೊದಲಿಗೆ ಪತ್ನಿ ಲಕ್ಷ್ಮೀಯ ಜತೆಗೆ ಉತ್ತಮವಾಗಿಯೇ ಇದ್ದ. ಎರಡನೇ ಪುತ್ರ ಉದಯ ಜನಿಸಿದ ಅನಂತರ ಆತನ ವರ್ತನೆಯಲ್ಲಿ ಬದಲಾ ವಣೆ ಕಾಣಿಸಿಕೊಂಡಿತ್ತು ಎಂದು ಪತ್ನಿ ಲಕ್ಷ್ಮೀ ಹೇಳಿದ್ದಾರೆ. ಮೂರೂ ಮಕ್ಕಳಲ್ಲೂ ಸ್ವಲ್ಪ ಮಟ್ಟಿನ ಅಂಗವೈಕಲ್ಯವೂ ಹಿತೇಶನ ಮಾನಸಿಕ ಖಿನ್ನತೆಗೆ ಕಾರಣವಾಗಿತ್ತು. ವ್ಯವಹಾರಕ್ಕಾಗಿ ಮಾಡಿದ್ದ ಸಾಲ, ಬ್ಯಾಂಕ್ಗೆ ಕಟ್ಟಬೇಕಾಗಿದ್ದ ಬಡ್ಡಿ, ಸರಿಸುಮಾರು ಒಂದೂವರೆ ಲಕ್ಷ ರೂ. ಖರ್ಚು ಮಾಡಿ ಅಂಗಡಿ ಕಟ್ಟಡ ಕಟ್ಟಿದ್ದ. ಆದರೆ ಅದಕ್ಕೆ ಲೈಸೆನ್ಸ್ ಸಿಕ್ಕಿರಲಿಲ್ಲ.
ಹೀಗಾಗಿ ಮತ್ತಷ್ಟು ಸಾಲ ಬಿಗಾಡಿಯಿಸಿತ್ತು. ಹೀಗೆ ಎಲ್ಲ ಸಮಸ್ಯೆಗಳು ಆತನನ್ನು ಅಕ್ಷರಶಃ ಮಾನಸಿಕ ಖನ್ನತೆಯತ್ತ ತಳ್ಳಲ್ಪಟ್ಟಿತ್ತು. ಆದರೆ ಏನೂ ಅರಿಯದ ಮೂವರು ಮಕ್ಕಳನ್ನು ಆತ ಕೊಂದು ಹಾಕಿದನಲ್ಲ ಎನ್ನುವ ನೋವು ಊರಿನ ಪ್ರತೀಯೋರ್ವರಲ್ಲೂ ಕಂಡುಬಂದಿದೆ. ಈ ಹಿಂದೆ 10-12 ವರ್ಷ ಮುಂಬಯಿಯಲ್ಲಿ ಹೊಟೇಲ್ ಇನ್ನಿತರ ಕೆಲಸ ಮಾಡಿಕೊಂಡಿದ್ದ ಹಿತೇಶ್, 2 ಮಕ್ಕಳಾಗುವವರೆಗೂ ಊರಿಗೆ ಬಂದು ಹೋಗುತ್ತಿದ್ದ. ಅನಂತರ ಮುಂಬಯಿ ಬಿಟ್ಟು ಬಂದು ಊರಿನಲ್ಲಿಯೇ ನೆಲೆಸಿದ್ದ.
ಶಾಲೆಗಳಿಗೆ ರಜೆ ಸಾರಲಾಗಿತ್ತು
ವಿದ್ಯಾರ್ಥಿನಿ ಮೃತ ರಶ್ಮಿತಾ (14) ಸ್ಮರಣಾರ್ಥ ಆಕೆ ಕಲಿಯುತ್ತಿದ್ದ ಕಟೀಲು ಪ್ರೌಢಶಾಲೆಗೆ ರಜೆ ಸಾರಲಾಗಿತ್ತು. ಉದಯ (12) ಕಲಿಯುತ್ತಿದ್ದ ಪುನರೂರು ಶಾಲೆ ಮತ್ತು ದಕ್ಷಾ (6) ಹೋಗುತ್ತಿದ್ದ ಪದ್ಮನೂರು ಅಂಗನವಾಡಿಗೆ ರಜೆ ಸಾರಲಾಗಿತ್ತು. ಮಕ್ಕಳ ಅಂತ್ಯಕ್ರಿಯೆಯಲ್ಲಿ ತಂದೆ ಹಿತೇಶ್ಗೆ ಭಾಗವಹಿಸಲು ಅವಕಾಶ ನೀಡಲಾಗಿಲ್ಲ.
ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ಆರ್ಡರ್!
ತಾನೇ ಕೈಯ್ನಾರೆ ಕೊಂದ ತನ್ನ 2ನೇ ಪುತ್ರ ಉದಯನ ಹುಟ್ಟು ಹಬ್ಬ ಜೂ. 28ರಂದು ನಡೆಯಲಿಕ್ಕಿತ್ತು. ಇನ್ನೂ ಕೆಲವು ದಿನ ಇದ್ದರೂ, ವಾರದ ಹಿಂದೆಯೇ ಪುತ್ರನ ಬರ್ತ್ಡೇ ಕೇಕ್ ಅನ್ನು ಕಿನ್ನಿಗೋಳಿಯ ಬೇಕರಿಯಲ್ಲಿ ಆರ್ಡರ್ ಮಾಡಿದ್ದರು ಪುತ್ರನ ತಾಯಿ ಲಕ್ಷ್ಮೀ. ಆದರೆ ವಿಧಿಯಾಟ ಪತಿ ಹಿತೇಶನ ಮಾನಸಿಕತೆಗೆ ಪುತ್ರ ಉದಯ ಸಾವಿಗೀಡಾಗಿದ್ದ. ತಾಯಿ ಬೀಡಿ ಕಟ್ಟಿ ಮಕ್ಕಳಿಗೆ ಹೊಸ ಯೂನಿಫಾರಂ ಅನ್ನು ಕೂಡ ಹೊಲಿಸಿಟ್ಟಿದ್ದರು. ಉದಯನ ಅಂತಿಮ ಸಂಸ್ಕಾರದ ಸಮಯದಲ್ಲಿ ಕೇಕ್ ಹಾಗೂ ಹೊಸ ಬಟ್ಟೆಯನ್ನು ಇಟ್ಟು ಸುಡಲಾಯಿತು. ಈ ಎಲ್ಲ ಘಟನೆಗಳೂ ಅಲ್ಲಿ ನೆರೆದವರ ಮನಕಲಕುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…