ವಿವಾಹ ವಿಚ್ಛೇದನ ನಕಲಿ ಡಿಕ್ರಿ ಪ್ರಕರಣ: ಸಿಐಡಿ ಆರೋಪ ಪಟ್ಟಿ ಸಲ್ಲಿಕೆ


Team Udayavani, May 10, 2022, 9:46 PM IST

ವಿವಾಹ ವಿಚ್ಛೇದನ ನಕಲಿ ಡಿಕ್ರಿ ಪ್ರಕರಣ: ಸಿಐಡಿ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರು: ವಿವಾಹ ವಿಚ್ಛೇದನದ ನಕಲಿ ಡಿಕ್ರಿ ದಾಖಲೆ ಸೃಷ್ಟಿಸಿದ ಪ್ರಕರಣವೊಂದರ ತನಿಖಾ ವರದಿಯನ್ನು ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಮಂಗಳೂರಿನ ಹಿರಿಯ ವಕೀಲ ಎಂ.ಪಿ. ನೊರೊನ್ಹಾ ಅವರು ನಿರ್ದೋಷಿ ಎಂದು ತನ್ನ ವರದಿಯಲ್ಲಿ ಹೇಳಿದೆ.

ಏನಿದು ಪ್ರಕರಣ
ಮಂಗಳೂರಿನ ನಿವಾಸಿಯೊಬ್ಬರು ತಾನು ಪ್ರೀತಿಸುತ್ತಿದ್ದ ಯುವತಿಯ ಜತೆ ಮದುವೆಯಾಗುವ ಉದ್ದೇಶದಿಂದ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಲು ಮಂಗಳೂರಿನ ವಕೀಲೆಯೊಬ್ಬರನ್ನು ಸಂಪರ್ಕಿಸಿ ನ್ಯಾಯಾಲಯದ ಮುಖಾಂತರ ಆದೇಶ ದೊರಕಿಸಿಕೊಡಲು ಕೇಳಿಕೊಂಡಿದ್ದರು. ನ್ಯಾಯಾಲಯದಿಂದ 2005 ಜುಲೈ ತಿಂಗಳಲ್ಲಿ ವಿವಾಹ ವಿಚ್ಛೇದನ ಆದೇಶ ಆಗಿದೆ ಎಂದು ಡಿಕ್ರಿಯನ್ನು ಹಾಜರುಪಡಿಸಿದ್ದರು. ಆ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಸಾವನ್ನಪ್ಪಿದ್ದರು. ಅನಂತರ ಮೃತರ ಹೆಸರಿನಲ್ಲಿದ್ದ ಬಾಂಡ್‌, ಎಫ್‌.ಡಿ.ಗಳ ಹಂಚಿಕೆ ವಿಚಾರದಲ್ಲಿ ಮೊದಲ ಪತ್ನಿ ಮತ್ತು ಎರಡನೆಯ ಪತ್ನಿ ನಡುವೆ ತಕರಾರು ಉಂಟಾಯಿತು. ನ್ಯಾಯಾಲಯದಲ್ಲಿ ಈ ಬಗ್ಗೆ ವ್ಯಾಜ್ಯ ದಾಖಲಾಗಿತ್ತು. ಆ ವ್ಯಾಜ್ಯದಲ್ಲಿ ಎರಡನೇ ಪತ್ನಿ ಮೊದಲ ಪತ್ನಿಯ ವಿವಾಹ ವಿಚ್ಛೇದನ ಡಿಕ್ರಿ ನೈಜವಾದ ದಾಖಲೆಯೆಂದು ನಂಬಿ ವಕೀಲರಾದ ಎಂ. ಪಿ ನೊರೊನ್ಹಾ ಮುಖಾಂತರ 2009ರಲ್ಲಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು.ಆ ಡಿಕ್ರಿಯನ್ನು ನ್ಯಾಯಾಲಯದಲ್ಲಿ ಪರಿಶೀಲಿಸಿದಾಗ ಅದು ವಿವಾಹ ವಿಚ್ಛೇದನದ ನಕಲಿ ಡಿಕ್ರಿ ದಾಖಲೆ ಎಂಬುದು ಗೊತ್ತಾಯಿತು.

ಕೂಡಲೇ 2009ರಲ್ಲಿ ವಕೀಲ ಎಂ.ಪಿ. ನೊರೊನ್ಹಾ ಅವರು ನ್ಯಾಯಾಲಯದ ಮತ್ತು ವೃತ್ತಿ ಗೌರವ ಕಾಪಾಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಆ ಪ್ರಕರಣದಿಂದ ತತ್‌ಕ್ಷಣವೇ ನಿವೃತ್ತಿಯಾಗಿದ್ದರು. ಆದರೆ ಕೆಲ ವ್ಯಕ್ತಿಗಳು ಈ ಪ್ರಕರಣ ನಡೆದು ಐದು ವರ್ಷಗಳ ಅನಂತರ ಅಂದರೆ 2014ರಲ್ಲಿ ದುರುದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ವಕೀಲ ನೊರೊನ್ಹಾ ನ್ಯಾಯಾಲಯಕ್ಕೆ ಡಿಕ್ರಿ ಸೃಷ್ಟಿಸಿ ಹಾಜರುಪಡಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದರು.

ನಕಲಿ ಡಿಕ್ರಿ ದಾಖಲೆ ಸೃಷ್ಟಿಸಿದ ಬಗ್ಗೆ ಮಂಗಳೂರಿನ ಬಂದರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಹೈಕೋರ್ಟ್‌ ಆದೇಶದ ಪ್ರಕಾರ ಸಿಐಡಿಯವರು ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ಭಾಗಿಯಾದ ಮಂಗಳೂರಿನ ವಕೀಲೆ ಹಾಗೂ ಅವರ ಗುಮಾಸ್ತರನ್ನು ಆರೋಪಿಗಳೆಂದು ಹೆಸರಿಸಿ ಅವರ ವಿರುದ್ಧ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ವಕೀಲ ಎಂ. ಪಿ ನೊರೊನ್ಹಾ ಅವರ ಮೇಲೆ ಹೊರಿಸಿದ ಆರೋಪ ಸುಳ್ಳು ಎಂದಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.