Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು


Team Udayavani, Apr 16, 2024, 8:34 PM IST

16

ದ್ವಿಚಕ್ರ ವಾಹನಗಳಿಗೆ ಕಾರು ಢಿಕ್ಕಿ

ಸುಳ್ಯ: ಎರಡು ದ್ವಿಚಕ್ರ ವಾಹನಗಳಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರು ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲೂÕರಿನಲ್ಲಿ ಸೋಮವಾರ ಸಂಭವಿಸಿದೆ.

ಮಂಡೆಕೋಲಿನ ಬದಿಕಾನದ ಹಿತೇಶ್‌ ಹಾಗೂ ಅವರ ತಮ್ಮ ಕೃತಿಕ್‌ ತಮ್ಮ ವಾಹನದಲ್ಲಿ ಸುಳ್ಯಕ್ಕೆ ತೆರಳುತ್ತಿದ್ದ ವೇಳೆ ಜಾಲ್ಸೂರಿನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ಕಾರನ್ನು ಅದರ ಚಾಲಕ ಅಜಾಗರೂಕತೆಯಿಂದ ಚಲಾಯಿಸಿ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಉಂಟು ಮಾಡಿದ್ದು, ಘಟನೆಯಲ್ಲಿ ಹಿತೇಶ್‌ ಹಾಗೂ ಕೃತಿಕ್‌ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಬಿದ್ದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಸುಳ್ಯ: ಕುಡಿತದ ಚಟ ಹೊಂದಿದ್ದ ಯುವಕನೋರ್ವನ ಮೃತದೇಹ ಬಿದ್ದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದ್ದು, ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡೆಕೋಲು ಗ್ರಾಮದ ಕುತ್ಯಾಡಿ ಮನೆ ಕುಸುಮಾವತಿ ಅವರ ಪುತ್ರ ಸಚಿನ್‌ (28) ಮೃತರು.

ಕುಸುಮಾವತಿ ಅವರು ಎ.14ರಂದು ತನ್ನ ನಡುಗಲ್ಲಿನ ತಂಗಿಯ ಮನೆಗೆ ಹೋಗಿದ್ದು, ಮನೆಯಲ್ಲಿ ಸಚಿನ್‌ ಒಬ್ಬರೇ ಇದ್ದಿದ್ದರು. ಎ. 15ರಂದು ಬೆಳಗ್ಗೆ ಸಚಿನ್‌ ಬಿದ್ದು ಗಾಯಗೊಂಡಿರುವ ಫೋಟೋವನ್ನು ಕುಸುಮಾವತಿ ಅವರ ತಂಗಿಯ ಮಗನ ಮೊಬೈಲ್‌ಗೆ ಕಳುಹಿಸಿದ್ದು, ಮಧ್ಯಾಹ್ನ ಕುತ್ಯಾಡಿಯ ತನ್ನ ಮನೆಗೆ ಕುಸುಮಾವತಿ ಅವರು ಬಂದು ನೋಡಿದಾಗ ಮನೆಯ ಎದುರಿನ ಹಾಗೂ ಹಿಂದಿನ ಬಾಗಿಲು ಒಳಭಾಗದಿಂದ ಹಾಕಲಾಗಿತ್ತು.

ಸಚಿನ್‌ ಹಾಲ್‌ನಲ್ಲಿ ಮಲಗಿದ್ದು, ಸುತ್ತಲೂ ರಕ್ತ ಹರಿದಿರುವುದು ಪತ್ತೆಯಾಗಿದೆ. ಇದರಿಂದ ಗಾಬರಿಗೊಂಡು ನೆರೆಕರೆಯವರ ಸಹಾಯದಿಂದ ಬಾಗಿಲು ತೆಗೆದು ಒಳಹೋಗಿ ನೋಡಿದಾಗ ಸಚಿನ್‌ನ ಬಲಕಣ್ಣಿನ ಮೇಲ್ಭಾಗದಲ್ಲಿ ಗಾಯವಾಗಿ ರಕ್ತ ಹೊರಬಂದು ಮೃತಪಟ್ಟಿರುವುದು ಕಂಡು ಬಂದಿದೆ. ಸಚಿನ್‌ ತಾಯಿ ಕುಸುಮಾವತಿ ಅವರು ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.

ಅಪಘಾತ: ಪ್ರಕರಣ ದಾಖಲು

ಸುಳ್ಯ: ಪೆರುವಾಜೆ ಗ್ರಾಮದ ಬೋರಡ್ಕದಲ್ಲಿ ರಸ್ತೆ ಬದಿಯ ಮರಕ್ಕೆ ಸ್ಕೂಟರ್‌ ಢಿಕ್ಕಿಯಾಗಿ ಸಹಸವಾರ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ.11ರಂದು ರಾತ್ರಿ ಸ್ಕೂಟರ್‌ನಲ್ಲಿ ಮಹಮ್ಮದ್‌ ಮುಸಾಬ್‌ ಸವಾರನಾಗಿ ಹಾಗೂ ಮಹಮ್ಮದ್‌ ರಾಜೀಕ್‌ ಸಹ ಸವಾರನಾಗಿ ಪ್ರಯಾಣಿಸುತ್ತ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಬೋರಡ್ಕಕ್ಕೆ ತಲುಪಿದಾಗ ಮಹಮ್ಮದ್‌ ಮುಸಾಬ್‌ ಸ್ಕೂಟರ್‌ನ್ನು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾಗಿ ಮಗುಚಿ ಬಿದ್ದಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಾಗ ಮಹಮ್ಮದ್‌ ರಾಜಿಕ್‌ ಮೃತಪಟ್ಟಿದ್ದು, ಮಹಮ್ಮದ್‌ ಮುಸಾಬ್‌ ನನ್ನು ಒಳರೋಗಿಯನ್ನಾಗಿ ದಾಖಲಿಸಲಾಗಿತ್ತು. ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.