ಬೆಳೆ ಸಮೀಕ್ಷೆ ಶೇ. 70 ಸಂಭಾವನೆ ಬಿಡುಗಡೆ


Team Udayavani, Jan 21, 2019, 1:30 AM IST

bele-sala.jpg

ಸುಳ್ಯ: ಮುಂಗಾರು ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡ ಯುವಕರಿಗೆ ಬಾಕಿಯಾಗಿದ್ದ ಸಂಭಾವನೆಯನ್ನು ನೀಡಲು ಸರಕಾರ ಕೊನೆಗೂ ನಿರ್ಧರಿಸಿದೆ. ಆರಂಭದಲ್ಲಿ ಶೇ. 70ರಷ್ಟು ಹಣ ಖಾತೆಗೆ ಪಾವತಿಯಾಗಲಿದೆ, ಬಳಿಕ ಉಳಿದ ಹಣ ಕೈ ಸೇರಲಿದೆ.

ರಾಜ್ಯ ಸರಕಾರ ಎಲ್ಲ ಜಿಲ್ಲೆಗಳ ಬಹುತೇಕ ಹಳ್ಳಿಗಳಲ್ಲಿ ಮುಂಗಾರು ಪೂರ್ವ ಬೆಳೆ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಗ್ರಾಮ ಲೆಕ್ಕಿಗರ ಜತೆ ಸಮೀಕ್ಷೆ ವೇಳೆ ಸ್ಥಳೀಯ ನಿರುದ್ಯೋಗಿ ಯುವಕರನ್ನು ಬಳಸಿಕೊಂಡಿತ್ತು. ಈ ಯುವಕರಿಗೆ ತರಬೇತಿ ಕೂಡ ನೀಡಲಾಗಿತ್ತು.

ಬಹುತೇಕ ಹಳ್ಳಿಗಳಲ್ಲಿ ಯುವಕರು ಕೃಷಿಕರ ಮನೆಗಳಿಗೆ ತೆರಳಿ ಮೊಬೈಲ್‌ ಆ್ಯಪ್‌ ಬಳಸಿ ಸರ್ವೆ ನಡೆಸಿದ್ದರು. ಪ್ರತಿ ಸರ್ವೆ ನಂಬರಿನ ಸಮೀಕ್ಷೆಗೆ ತಲಾ 10 ರೂ.ನಂತೆ ಸಂಭಾವನೆ ನೀಡಲು ಸರಕಾರ ನಿಗದಿಪಡಿಸಿತ್ತು. ಆದರೆ ಸಮೀಕ್ಷ ಮುಗಿದು 3 ತಿಂಗಳು ಕಳೆದರೂ ಸಂಭಾವನೆ ಸಿಕ್ಕಿರಲಿಲ್ಲ.

“ಉದಯವಾಣಿ’ಯಲ್ಲಿ ವರದಿ ಪ್ರಕಟ
ಸಂಭಾವನೆ ಸಿಗದ ಕುರಿತು ಜ. 16ರ “ಉದಯವಾಣಿ’ಯಲ್ಲಿ ವಿಸ್ತೃತ ವರದಿ ಪ್ರಕಟಿಸಿ ಸರಕಾರ ಮತ್ತು ಅಧಿಕಾರಿಗಳ ಗಮನ ಸೆಳೆದಿತ್ತು. ಈಗ ಸರಕಾರ ಸಂಭಾವನೆ ನೀಡಲು ಒಪ್ಪಿದೆ. ಆದರೆ ಪೂರ್ಣ ಪ್ರಮಾಣಕ್ಕೆ ಬದಲಾಗಿ ಶೇ. 70ರಷ್ಟು ಮಾತ್ರ ಆರಂಭದಲ್ಲಿ ನೀಡಲಾಗುತ್ತಿದೆ. ಮುಂಗಾರು ಬೆಳೆ ಸಮೀಕ್ಷೆ ಮುಗಿದಿದ್ದರೂ ಕೆಲವು ಭಾಗಗಳಲ್ಲಿ ಪರಿಪೂರ್ಣವಾಗಿಲ್ಲ, ಈ ಕಾರಣಕ್ಕೆ ಸಮೀಕ್ಷೆ ಪೂರ್ಣವಾದ ಬಳಿಕ ಪೂರ್ತಿ ಸಂಭಾವನೆಯನ್ನು ನೀಡಲಾಗುವುದು. ಅಲ್ಲಿಯ ತನಕ ಶೇ. 30ರಷ್ಟು ಸಂಭಾವನೆಯನ್ನು ತಡೆಹಿಡಿಯಲಾಗುತ್ತದೆ ಎಂದು ಕಂದಾಯ ಇಲಾಖೆ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣ ಹುಡುಕುತ್ತಿದ್ದಾರೆ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮೀಕ್ಷಕ ಯುವಕರು, ನಮಗೆ ವಹಿಸಿದ ಕಾರ್ಯವನ್ನು ಪೂರ್ಣಗೊಳಿಸಿ ಕೊಟ್ಟಿದ್ದೇವೆ. ಬಿಸಿಲಿಗೆ ಓಡಾಡಿಸಿ ದಿನಕ್ಕೆ ಇಂತಿಷ್ಟು ಮನೆಗಳ ಸಮೀಕ್ಷೆ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದ ಕಂದಾಯ ಅಧಿಕಾರಿಗಳು ಸಂಭಾವನೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ವಿಳಂಬಕ್ಕೆ ಸಬೂಬು ಹುಡುಕುತ್ತಿದ್ದಾರೆ. ಇದು ಸರಿಯಲ್ಲ. ಈ ತಾರತಮ್ಯದಿಂದ ಬೇಸರ ಆಗಿದೆ ಎಂದು ಅಳಲು ವ್ಯಕ್ತಪಡಿಸಿದ್ದಾರೆ. 

ವಾರದೊಳಗೆ  ಹಣ ಖಾತೆಗೆ
ಸರಕಾರ ಹಣ ಬಿಡುಗಡೆ ಗೊಳಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಯುವಕರ ಖಾತೆಗಳಿಗೆ ವಾರದೊಳಗೆ ಸಂಭಾವನೆ ಹಣ ಪಾವತಿಯಾಗಲಿದೆ.
– ಸಂತೋಷ್‌ ಕುಮಾರ್‌, ತಹಶೀಲ್ದಾರ್‌, ಸುಳ್ಯ

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.