ಬೆಳೆ ಸಮೀಕ್ಷೆ: ಯುವಕರ ಕೈಸೇರದ ಸಂಭಾವನೆ


Team Udayavani, Jan 17, 2019, 12:30 AM IST

cover-crop-survey.jpg

ಸುಬ್ರಹ್ಮಣ್ಯ: “ನಿರುದ್ಯೋಗಿ ಯುವಕರ ಸಂಪಾದನೆಗೆ ಸುವರ್ಣಾವಕಾಶ; ಮೊಬೈಲ್‌ನಲ್ಲಿ ಕಾಲಹರಣ ಮಾಡುವ ಬದಲು ಮುಂಗಾರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ ಹಣ ಗಳಿಸಿ’ ಎಂಬಿತ್ಯಾದಿ ಹೇಳಿಕೆಗಳ ಮೂಲಕ ನಿರುದ್ಯೋಗಿ ಯುವಕರಲ್ಲಿ ಆಸೆ ಹುಟ್ಟಿಸಿ ಮುಂಗಾರು ಬೆಳೆ ಸಮೀಕ್ಷೆ ಮಾಡಿಸಿಕೊಂಡಿದ್ದ ಸರಕಾರ ಇದೀಗ ಸಂಭಾವನೆ ನೀಡದೆ ಸತಾಯಿಸುತ್ತಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಬೆಳೆ ಸಮೀಕ್ಷೆಯನ್ನು ಸರಕಾರಿ ಸಿಬಂದಿ ಜತೆ ಖಾಸಗಿ ನಿರುದ್ಯೋಗಿ ಯುವಕರ ಕೈಯಲ್ಲಿ ಮಾಡಿಸಲಾಗಿತ್ತು. ಸಮೀಕ್ಷೆ ಪೂರ್ಣಗೊಂಡು ಮೂರು ತಿಂಗಳಾ ದರೂ ಸಂಭಾವನೆ ಕೈಸೇರಿಲ್ಲ.

ಏಕೆ ಈ ಕ್ರಮ?
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೃಷಿಕರ ಮುಂಗಾರು ಪೂರ್ವ ಬೆಳೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿತ್ತು. ಕಳೆದ ಬಾರಿ ಗ್ರಾಮ ಲೆಕ್ಕಿಗರ ಮೂಲಕ ಸಮೀಕ್ಷೆ ಕೈಗೊಂಡಿತ್ತು. ಇದರಿಂದ ಎರಡು ತಿಂಗಳ ಅವಧಿ ಅವರಿಗೆ ಬೇರೆ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತದೆಂಬ ಕಾರಣಕ್ಕೆ ಈ ಬಾರಿ ಆಯಾ ಗ್ರಾಮದ ಖಾಸಗಿ ವ್ಯಕ್ತಿಗಳನ್ನು ಬೆಳೆ ಸಮೀಕ್ಷೆಗಾಗಿ ನಿಯೋಜಿಸಲಾಗಿತ್ತು.

422 ಗ್ರಾಮಗಳಲ್ಲಿ ಸಮೀಕ್ಷೆ 
ಪ್ರತಿ ಸರ್ವೆ ನಂಬರಿನ ಸಮೀಕ್ಷೆಗೆ ತಲಾ 10 ರೂ. ಸಂಭಾವನೆಯನ್ನು ನಿಗದಿ ಪಡಿಸಲಾಗಿತ್ತು. ದ.ಕ. ಜಿಲ್ಲೆಯ 422 ಗ್ರಾಮಗಳಲ್ಲಿ ಸಮೀಕ್ಷೆ ಮಾಡಲು 1,250 ಖಾಸಗಿ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಸೆಪ್ಟಂಬರ್‌ನಲ್ಲಿ ಸಮೀಕ್ಷೆಗೆ ಬಳಸಿ ಕೊಂಡಿದ್ದು, ಎರಡು ಬಾರಿ ತರಬೇತಿ ನೀಡಲಾಗಿತ್ತು. ಬಳಿಕ ಯುವಕರು ರೈತರ ಮನೆ, ಕೃಷಿ ಭೂಮಿಗಳಿಗೆೆ ತೆರಳಿ ಮೊಬೈಲ್‌ನಲ್ಲಿ ಆ್ಯಪ್‌ ಮೂಲಕ ಮಾಹಿತಿ ಪಡೆದುಕೊಂಡು ಹಿಂದಿರುಗಿದ್ದರು. ಇದರಿಂದ ರೈತರಿಗೆ ವಿಮ ಪರಿಹಾರ ನೀಡಲು ಸರಕಾರಕ್ಕೆ ಅನುಕೂಲವಾಗಿತ್ತು.

ಬಣ್ಣದ ಭರವಸೆ!
ಸಮೀಕ್ಷೆ ಪೂರ್ಣವಾದ ತತ್‌ಕ್ಷಣದಲ್ಲಿ ಹಣ ನಿಮ್ಮ ಖಾತೆಗೆ ಸಂದಾಯವಾಗುತ್ತದೆ ಎಂದು ಯುವಕರ ಕೈಯಿಂದ ಆಧಾರ್‌ ಕಾರ್ಡ್‌, ಬ್ಯಾಂಕು ಖಾತೆ ವಿವರಗಳನ್ನು ಅಧಿಕಾರಿಗಳು ಕಲೆಹಾಕಿದ್ದರು. ಉತ್ತಮ ನಿರ್ವಹಣೆ ತೋರಿದ ಯುವಕರಿಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ತಾತ್ಕಾಲಿಕವಾಗಿ ಅವಕಾಶ ನೀಡುವುದಾಗಿಯೂ ಅಧಿಕಾರಿಗಳು ಭರವಸೆ ನೀಡಿದ್ದರು. ಅದೂ ಈಡೇರಿಲ್ಲ ಎಂದು ಯುವಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಹಿತಿ ಕೇಳುತ್ತೇವೆ
ಸಮೀಕ್ಷೆಯಲ್ಲಿ ಭಾಗವಹಿಸಿದ ಯುವಕರಿಗೆ ಸರಕಾರದಿಂದ ನೀಡಬೇಕಿರುವ ಸಂಭಾವನೆ ವಿಳಂಬ ವಿಚಾರವಾಗಿ ತಾಲೂಕು ದಂಡಾಧಿಕಾರಿಗಳ ಬಳಿಯಿಂದ ಮಾಹಿತಿ ಪಡೆಯಲಾಗುವುದು.
– ಎಚ್‌.ಕೆ. ಕೃಷ್ಣ ಮೂರ್ತಿ, ಸ. ಆಯುಕ್ತರು, ಪುತ್ತೂರು

ಹಣ ಬಂದಿಲ್ಲ
ಸಮೀಕ್ಷೆ ವೇಳೆ ಪಹಣಿ ಪತ್ರವೊಂದಕ್ಕೆ ತಲಾ 10 ರೂ.ನಂತೆ ಸಂಭಾವನೆ ನೀಡಲಾಗುವುದು ಎಂದಿದ್ದರು. ಆದರೆ ಇಂದಿನ ವರೆಗೆ ಹಣ ನಮಗೆ ದೊರಕಿಲ್ಲ.
– ಆದರ್ಶ, ಸಮೀಕ್ಷೆಯಲ್ಲಿ ಪಾಲ್ಗೊಂಡ ಯುವಕ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.