ತುರ್ತು ಕಾಲಕ್ಕೆ ಕರಾವಳಿ ಕಚ್ಚಾ ತೈಲವೇ ಆಧಾರ!


Team Udayavani, Jul 2, 2018, 5:15 AM IST

paduru-oil-storage-600.jpg

ಮಂಗಳೂರು: ಇನ್ನು ದೇಶದ ತುರ್ತುಕಾಲಕ್ಕೆ ಬೇಕಾಗುವ ಕಚ್ಚಾತೈಲಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯ ತೈಲ ಸಂಗ್ರಹಾಗಾರವೇ ಆಧಾರ! ತುರ್ತು ಸಂದರ್ಭಕ್ಕೆ ತೈಲ ಸಂಗ್ರಹಕ್ಕೆ ಅನುಕೂಲವಾಗುವಂತೆ ಮಂಗಳೂರು ಹಾಗೂ ಉಡುಪಿಯಲ್ಲಿ ಒಟ್ಟು 3.55 ಮಿಲಿಯನ್‌ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಭೂಗತ ಕಚ್ಚಾ ತೈಲ ಸಂಗ್ರಹಾಗಾರ ಸ್ಥಾವರ ಸ್ಥಾಪನೆಗೊಂಡಿದೆ. ಇದಕ್ಕೆ ಪೂರಕವಾಗಿ ಉಡುಪಿಯ ಪಾದೂರಿನಲ್ಲಿ ಮತ್ತೆ 2.5 ಮಿಲಿಯನ್‌ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಇನ್ನೊಂದು ತೈಲ ಸಂಗ್ರಹಾಗಾರ ಸ್ಥಾಪನೆಗೆ ಕೇಂದ್ರ ಸರಕಾರ ನಿರ್ಧರಿಸಿದೆ. ಹೀಗಾಗಿ ಕರಾವಳಿಯಲ್ಲಿ ಒಟ್ಟು  6.50 ಮಿಲಿಯನ್‌ ಮೆಟ್ರಿಕ್‌ ಟನ್‌ ಕಚ್ಚಾ ತೈಲ ಸಂಗ್ರಹವಾಗಲಿದೆ. ಇದು ಸದ್ಯ ದೇಶದಲ್ಲಿ ನಿರ್ಮಾಣವಾಗುತ್ತಿರುವ ಅತಿದೊಡ್ಡ ತುರ್ತು ಸಂದರ್ಭ ಬಳಸುವ ಕಚ್ಚಾ ತೈಲ ಸಂಗ್ರಹಾಗಾರ ಸ್ಥಾವರ.

ಮೂರು ಕಡೆ ತೈಲ ಸಂಗ್ರಹ ಸ್ಥಾವರ
ಪೆಟ್ರೋಲಿಯಂ ಸಚಿವಾಲಯದ ಅಧೀನದ ಐ.ಎಸ್‌.ಪಿ.ಆರ್‌.ಎಲ್‌. (ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌) ವತಿಯಿಂದ ಭೂಗರ್ಭದಲ್ಲಿ ಮೂರು ಕಡೆ ನಿರ್ಮಿಸಿದೆ. ಉಡುಪಿ ಸಮೀಪದ ಪಾದೂರು ಸ್ಥಾವರದಲ್ಲಿ 2.5 ಮಿಲಿಯನ್‌ ಮೆ.ಟನ್‌ (1,693 ಕೋ.ರೂ ವೆಚ್ಚ), ಮಂಗಳೂರಿನ ಪೆರ್ಮುದೆ ಸ್ಥಾವರದಲ್ಲಿ 1.5 ಮಿಲಿಯನ್‌ ಮೆ.ಟನ್‌(1,227 ಕೋ.ರೂ.), ವಿಶಾಖಪಟ್ಟಣದಲ್ಲಿ 1.3 ಮಿಲಿಯನ್‌ ಮೆ.ಟನ್‌ (1,178 ಕೋ.ರೂ) ಸೇರಿದಂತೆ ಸುಮಾರು 5.3 ಮಿಲಿಯನ್‌ ಮೆಟ್ರಿಕ್‌ ಟನ್‌ ತೈಲ ಸಂಗ್ರಹದ ಗುರಿ ಹೊಂದಲಾಗಿದೆ. ಪಾದೂರುವಿನಲ್ಲಿ ಹೆಚ್ಚುವರಿಯಾಗಿ 2.5 ಮಿಲಿಯ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಸ್ಥಾವರ ನಿರ್ಮಾಣವಾಗಲಿದೆ.  ಇದು ತುರ್ತು ಸಂದರ್ಭಗಳಲ್ಲಿ ದೇಶದ 13 ದಿನಗಳ ಬೇಡಿಕೆ ಪೂರೈಸಬಹುದು. ಪಾದೂರು ಹಾಗೂ ಒಡಿಶಾದಲ್ಲಿ ಹೊಸದಾಗಿ ಎರಡು ಸ್ಥಾವರ ನಿರ್ಮಾಣವಾಗುವುದರಿಂದ ಒಟ್ಟೂ 25 ದಿನಗಳ ಅಗತ್ಯದಷ್ಟು ತೈಲ ಸಂಗ್ರಹವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಪಾದೂರು ರೆಡಿ; ಪೆರ್ಮುದೆ ಅರ್ಧ ಫುಲ್‌
ಪಾದೂರಿನಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ತೈಲಸಂಗ್ರಹಕ್ಕೆ ಪೆಟ್ರೋಲಿಯಂ ಸಚಿವಾಲಯ ಸೂಚಿಸಬೇಕಿದೆ. ಪೆರ್ಮುದೆ ಸ್ಥಾವರಕ್ಕೆ ಇರಾನ್‌ ಮತ್ತು ‘ಅಬುಧಾಬಿ ನ್ಯಾಷನಲ್‌ ಆಯಿಲ್‌ ಕಂಪೆನಿ’ (ಅಡ್ನೋಕ್‌) ತರಿಸಿದ ತೈಲವನ್ನು ಇಲ್ಲಿ ಸಂಗ್ರಹಿಸಲಾಗಿದೆ. ತೈಲದ ಒಂದು ಭಾಗವನ್ನು ಆಡ್ನಾಕ್‌ ಕಂಪೆನಿ ಭಾರತದ ಗ್ರಾಹಕರಿಗೆ ಪೂರೈಸಲಿದೆ. ಉಳಿದದ್ದು ತುರ್ತು ಸಂದರ್ಭಗಳಿಗೆ ಮೀಸಲು.

ಇರಾನ್‌ನಿಂದ  ಮಂಗಳೂರಿಗೆ ಕಚ್ಚಾ ತೈಲ ಆಮದು
ಇರಾನ್‌ನಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಲು ಭಾರತ, ಚೀನ ಸಹಿತ ಅನೇಕ ದೇಶಗಳಿಗೆ ಅಮೆರಿಕ ನ.4ರ ಗಡುವು ವಿಧಿಸಿದೆ. ಇದಕ್ಕೆ ತಪ್ಪಿದಲ್ಲಿ ಆರ್ಥಿಕ ನಿಷೇಧ ಅನಿವಾರ್ಯ ಎಂದಿದೆ ಅಮೆರಿಕ. ಇರಾಕ್‌ ಹಾಗೂ ಸೌದಿ ಅರೇಬಿಯಾದ ಅನಂತರ ಭಾರತಕ್ಕೆ ಮೂರನೇ ಅತೀಹೆಚ್ಚು ತೈಲ ಪೂರೈಸುವ ರಾಷ್ಟ್ರ ಇರಾನ್‌. 2017 ಅ.12ರಂದು ಇರಾನ್‌ನಿಂದ 2.60 ಲಕ್ಷ ಮೆಟ್ರಿಕ್‌ ಟನ್‌ ಮಿಕ್ಸೆಡ್‌ ಕಚ್ಚಾ ತೈಲವು ‘ಡಿನೊ’ ಬೃಹತ್‌ ನೌಕೆಯಲ್ಲಿ ಮಂಗಳೂರಿಗೆ ಆಮದಾಗಿತ್ತು. ಇದನ್ನು ಪೆರ್ಮುದೆ ತೈಲ ಸಂಗ್ರಹಾಗಾರ ಸ್ಥಾವರದಲ್ಲಿ ಸಂಗ್ರಹಿಸಿಡಲಾಗಿದೆ. ಬಳಿಕ ಇರಾನ್‌ ನಿಂದ 2.50 ಲಕ್ಷ ಮೆಟ್ರಿಕ್‌ ಟನ್‌ ತೈಲವನ್ನು ‘ಗ್ರೀಕ್‌ ವಾರಿಯರ್‌’ ಎಂಬ ಬೃಹತ್‌ ನೌಕೆಯ ಮೂಲಕ ತರಿಸಲಾಗಿತ್ತು. ಇವೆರಡನ್ನೂ ಮಂಗಳೂರಿನಲ್ಲಿ ಸಂಗ್ರಹಿಸಿಡಲಾಗಿದೆ. ಎಂ.ಆರ್‌.ಪಿ.ಎಲ್‌. ಸಂಸ್ಥೆಗೂ ಆಂಶಿಕ ಪ್ರಮಾಣದಲ್ಲಿ ಇರಾನ್‌ ನಿಂದ ಸದ್ಯ ತೈಲ ಆಮದು ಮಾಡಲಾಗುತ್ತಿದೆ. ಮುಂದೆಯೂ ಇರಾನ್‌ನಿಂದ ತೈಲ ಆಮದಿಗೆ ಭಾರತ ಸರಕಾರ ಚಿಂತನೆ ನಡೆಸುವಾಗಲೇ ಅಮೆರಿಕದ ನಿಲುವು ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. 

ತಣ್ಣೀರುಬಾವಿಯಿಂದ ಪೆರ್ಮುದೆ- ಪಾದೂರಿಗೆ!
ನವಮಂಗಳೂರು ಬಂದರಿಗೆ ಆಗಮಿಸುವ ಕಚ್ಚಾತೈಲವನ್ನು ಹಡಗಿನಿಂದ ತೇಲುಜೆಟ್ಟಿ ಮೂಲಕ ತಣ್ಣೀರುಬಾವಿಯಲ್ಲಿರುವ ಐ.ಎಸ್‌.ಪಿ.ಆರ್‌.ಎಲ್‌.ನ ಪಂಪಿಂಗ್‌ ಸ್ಟೇಷನ್‌ ಗೆ ತಂದು ಬಳಿಕ ಪೆರ್ಮುದೆಯ ಭೂಗತ ಸಂಗ್ರಹಾಗಾರಕ್ಕೆ ಪಂಪಿಂಗ್‌ ಮಾಡಲಾಗುತ್ತಿದೆ. ಇದಕ್ಕಾಗಿ ತಣ್ಣೀರುಬಾವಿಯಿಂದ ಪೆರ್ಮುದೆಗೆ 12 ಕಿ.ಮೀ. ವರೆಗೆ 48 ಇಂಚಿನ ಪೈಪ್‌ಲೈನ್‌ ಅಳವಡಿಸಲಾಗಿದೆ. ಪೆರ್ಮುದೆಯಿಂದ ಪಾದೂರಿಗೂ 36 ಕಿ.ಮೀ. ವರೆಗೆ ತೈಲ ಸಾಗಣೆಗೆ 42 ಇಂಚಿನ ಪೈಪ್‌ಲೈನ್‌ ಅಳವಡಿಸಲಾಗಿದೆ.

— ದಿನೇಶ್‌ ಇರಾ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.