ಕರಾವಳಿಗೆ ಸಿದ್ಧವಾಗಿದೆ ಸಿಆರ್ಝಡ್ ಹೊಸ ಕರಡು ನಕ್ಷೆ
Team Udayavani, Jan 25, 2021, 3:20 AM IST
ಮಹಾನಗರ: ಕರಾವಳಿಯ ಮೂರು ಜಿಲ್ಲೆಗಳ ಬಹುಬೇಡಿಕೆಯಾಗಿರುವ “ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ಅಧಿಸೂಚನೆ-2019’ರ ಅನುಷ್ಠಾನ ಸಂಬಂಧ ಹೊಸ ಕರಡು ನಕ್ಷೆ ಇದೀಗ ಅಂತಿಮಗೊಂಡಿದ್ದು, 1 ತಿಂಗಳ ಒಳಗೆ ಕರಾವಳಿಗೆ ಲಭ್ಯವಾಗುವ ನಿರೀಕ್ಷೆಯಿದೆ.
2019ರ ಜ. 18ರಂದು ಕೇಂದ್ರ ಸರಕಾರ ಸಿಆರ್ಝಡ್ ಅಧಿಸೂಚನೆ-2019ನ್ನು ಪ್ರಕಟಿಸಿತ್ತು. ಈ ನಿಯಮಾವಳಿಯನ್ನೇ ಮುಂದಿನ ದಿನಗಳಲ್ಲಿ ಜಾರಿಗೆ ತರಬೇಕು ಎಂದು ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ ತಿಳಿಸಿತ್ತು. ಆದರೆ ನಕ್ಷೆ ಮಾತ್ರ ಜಾರಿಯಾಗಿರಲಿಲ್ಲ. ಕೊರೊನಾ ಕಾರಣದಿಂದ ನಕ್ಷೆ ರಚನೆ ತಡವಾಗಿತ್ತು ಎಂದು ಇಲಾಖೆಗಳಲ್ಲಿ ಸುದ್ದಿಯಾಗಿ ತ್ತು. ಇದೀಗ ಕರಡು ನಕ್ಷೆ ಪೂರ್ಣಗೊಂಡಿರುವ ಬಗ್ಗೆ ಕೇಂದ್ರದಿಂದ ಕರಾವಳಿಗೆ ಮಾಹಿತಿ ಲಭಿಸಿದೆ.
ಸಿಆರ್ಝಡ್ ಅಧಿಸೂಚನೆ 2011ರಲ್ಲಿ ಆಗಿತ್ತು. ಇದರ ನಕ್ಷೆಗೆ ಒಪ್ಪಿಗೆ ಸಿಕ್ಕಿದ್ದು ಮಾತ್ರ 2018ರಲ್ಲಿ. ಆದರೆ 2019ರ ಹೊಸ ಅಧಿಸೂಚನೆ ಬಂದಿದ್ದರೂ ನಕ್ಷೆ ಇಲ್ಲದ ಕಾರಣದಿಂದ ಇಲ್ಲಿಯವರೆಗೆ 2011ರ ನಿಯಮಾವಳಿಯ ನಕ್ಷೆಯೇ ಜಾರಿಯಲ್ಲಿದೆ.
ಹೊಸ ನಕ್ಷೆ ಲಾಭವೇನು? :
2019ರ ಹೊಸ ಅಧಿಸೂಚನೆ ಪ್ರಕಾರ ನಕ್ಷೆ ರಚನೆಯಾದರೆ ಕರಾವಳಿ ಭಾಗದ ಪ್ರವಾಸೋದ್ಯಮ, ಮೀನುಗಾರರಿಗೆ ನೆರವಾಗುವ ಹಲವು ಸಂಗತಿಗಳು ಇರಲಿವೆ. ಕಡಲ ತೀರದಲ್ಲಿ ಪ್ರವಾಸೋದ್ಯಮಕ್ಕೆ ಇರುವ ಕೆಲವು ಸಿಆರ್ಝಡ್ ನಿಯಮಾವಳಿಯಿಂದ ರಿಯಾಯಿತಿ ದೊರೆಯಲಿದೆ. ಜತೆಗೆ, ಮೀನುಗಾರರು ಮನೆ ನಿರ್ಮಿಸುವುದಾದರೂ ಅದಕ್ಕೂ ಅನುಮತಿ ನೀಡಲು ಸಾಧ್ಯವಿದೆ. ಸದ್ಯ ನದಿಯಿಂದ 100 ಮೀಟರ್ ದೂರದವರೆಗೆ ಸಿಆರ್ಝಡ್ ನಿರ್ಬಂಧವಿದ್ದರೆ, ಹೊಸ ಅಧಿಸೂಚನೆ ಪ್ರಕಾರ ಕೇವಲ 50 ಮೀ.ವರೆಗೆ ಮಾತ್ರ ನಿರ್ಬಂಧವಿರಲಿದೆ. ಹೀಗೆ ಹಲವು ರಿಯಾಯಿತಿಗಳು ಈ ನಕ್ಷೆಯಲ್ಲಿವೆ ಎಂದು ಪ್ರಾದೇಶಿಕ ಪರಿಸರ ಕಚೇರಿಯ ಮೀನುಗಾರಿಕ ಹಿರಿಯ ಸಹಾಯಕ ನಿರ್ದೇಶಕ ಮಹೇಶ್ ತಿಳಿಸಿದ್ದಾರೆ.
1991ರ ಸಿಆರ್ಝಡ್ ಅಧಿಸೂಚನೆ :
1991ರ ಸಿಆರ್ಝಡ್ ಅಧಿಸೂಚನೆ ಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ 2006ರಲ್ಲಿ ಕರಾವಳಿ ನಿರ್ವಹಣ ವಲಯ (ಸಿಎಂಝಡ್ ) ಕರಡು ಅಧಿಸೂಚನೆಯನ್ನು ಹೊರಡಿಸಿತ್ತು. ಇದರಲ್ಲಿ ಸಿಆರ್ಝಡ್ನ “ನಿಯಂತ್ರಣ’ ಎಂಬ ಪದವನ್ನು ತೆಗದು “ನಿರ್ವಹಣೆ’ ಎಂದು ಸೇರಿಸಲಾಗಿತ್ತು. ಈ ಅಧಿಸೂಚನೆಯ ಮೇಲೆ ಬಹಳಷ್ಟು ಚರ್ಚೆಗಳು ನಡೆದು, ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸಿಎಂಝಡ್ ಅಧಿಸೂಚನೆಯನ್ನು ಹಿಂದಕ್ಕೆ ಪಡೆದುಕೊಂಡು 1991ರ ಸಿಆರ್ಝಡ್ ಅಧಿಸೂಚನೆಯಲ್ಲಿ ಕೆಲವೊಂದು ತಿದ್ದುಪಡಿಗಳೊಂದಿಗೆ 2011ರಲ್ಲಿ ಮತ್ತೆ ಅನುಷ್ಠಾನಕ್ಕೆ ತಂದಿದೆ. ಇದರ ಆಧಾರದ ಮೇಲೆ 2018ರ ಜುಲೈಯಲ್ಲಿ ಹೊಸ ನಕ್ಷೆ ಸಿದ್ಧಗೊಂಡಿತ್ತು. ಇದಾದ ಕೆಲವೇ ತಿಂಗಳಲ್ಲಿ ಕೇಂದ್ರವು ಹೊಸ ಅಧಿಸೂಚನೆ ಹೊರಡಿಸಿದ ಕಾರಣದಿಂದ ಇದೀಗ ಹೊಸ ನಕ್ಷೆ ರಚನೆಯಾಗುತ್ತಿದೆ.
ಕರಡು ಸಿದ್ಧವಾದರೂ ಅನುಮೋದನೆಗೆ 6 ತಿಂಗಳುಗಳು ಬೇಕು! :
ನಕ್ಷೆಯ ಕರಡು ಸಿದ್ಧವಾದ ಬಳಿಕ ಮೂರು ಜಿಲ್ಲೆಗಳ ಸಾರ್ವಜನಿಕರಿಂದ ಆಕ್ಷೇಪಣೆ ಪಡೆಯಲಾಗುತ್ತದೆ. ಜಿಲ್ಲಾಧಿ ಕಾರಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಸಭೆ ನಡೆಯಲಿದೆ. ಕರಡು ನಕ್ಷೆ ಕುರಿತಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಪೂರ್ಣವರದಿಯನ್ನು ಜಿಲ್ಲಾಡಳಿತವು ರಾಜ್ಯ ಸರಕಾರಕ್ಕೆ ನೀಡಲಿದೆ. ರಾಜ್ಯ ಸರಕಾರದಿಂದ ಪರಿ ಶೀಲನೆಯಾಗಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಬಳಿಕ ಕೇಂದ್ರ ಸರಕಾರವು ವರದಿಗೆ ಅನುಮೋದನೆ ನೀಡಲಿದೆ. ಈ ಎಲ್ಲ ಪ್ರಕ್ರಿಯೆ ಪೂರ್ಣ ಗೊಳ್ಳಲು ಕನಿಷ್ಠ 6 ತಿಂಗಳುಗಳು ಬೇಕಾಗಬಹುದು.
2019ರ ಜನವರಿಯಲ್ಲಿ ಕೇಂದ್ರ ಸರಕಾರ ಹೊಸದಾಗಿ ಸಿಆರ್ಝಡ್ ಅಧಿಸೂಚನೆ ಹೊರಡಿಸಿದೆ. ಇದರ ಕರಡು ನಕ್ಷೆ ತಿಂಗಳೊಳಗೆ ಲಭಿಸುವ ಬಗ್ಗೆ ಮಾಹಿತಿಯಿದೆ. ಇಲ್ಲಿಯವರೆಗೆ 2011ರ ನಿಯಮಾವಳಿಯ ನಕ್ಷೆಯೇ ಜಾರಿಯಲ್ಲಿದೆ. ಕರಡು ನಕ್ಷೆ ಬಂದ ಬಳಿಕ ಆಕ್ಷೇಪಣೆ ಸ್ವೀಕರಿಸಿ ರಾಜ್ಯ-ಕೇಂದ್ರಕ್ಕೆ ಕಳುಹಿಸಿ ಅನುಮೋದನೆ ಪಡೆಯಲಾಗುವುದು. -ಡಾ| ವೈ.ಕೆ. ದಿನೇಶ್ ಕುಮಾರ್, ಪ್ರಾದೇಶಿಕ ನಿರ್ದೇಶಕರು, ದ.ಕ. ಪರಿಸರ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ