“ಸಂಸ್ಕೃತಿ, ಪರಂಪರೆ ಅರಿಯಲು ಆಟಿದ ಕೂಟ  ಸಹಕಾರಿ’


Team Udayavani, Aug 8, 2017, 6:20 AM IST

samskruti.jpg

ಬಂಟ್ವಾಳ : ನಮ್ಮ ಸಾಮಾಜಿಕ, ಸಾಂಸ್ಕೃತಿಕ, ಪಾರಂಪರಿಕ ಕಟ್ಟುಕಟ್ಟಲೆಗಳನ್ನು ತಿಳಿಯಲು ಆಟಿದ ಕೂಟ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ಹಿರಿಯರ ವಿಚಾರಧಾರೆಗಳನ್ನು ತಿಳಿಯಬೇಕು. ಶೈಕ್ಷಣಿಕವಾಗಿ ನಾವು ಮುಂದೆ ಬಂದಂತೆ ಹಿಂದಿನ ಸಂಪ್ರದಾಯಗಳನ್ನು ಮರೆಯಕೂಡದು ಎಂದು  ಉದ್ಯಮಿ ಡಾ| ಪ್ರಶಾಂತ್‌ ಮಾರ್ಲ ಹೇಳಿದರು.

ಅವರು ಆ. 6ರಂದು  ಬಂಟರ ಸಂಘ ಕಲ್ಲಡ್ಕ ವಲಯ ಆಶ್ರಯದಲ್ಲಿ ಕೆಲಿಂಜ ಹಿ.ಪ್ರಾ. ಶಾಲೆಯಲ್ಲಿ ನಡೆದ 4ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಸಹಾಯಕ ಯೋಜನಾಧಿಕಾರಿ ಚಂದ್ರಹಾಸ ಅಡಪ ನಡುವಳಚ್ಚಿಲು ಆಟಿದ ವಿಶೇಷತೆಗಳ ಮಾತನಾಡುತ್ತಾ ನಮ್ಮ ಪಾರಂಪರಿಕ ಕ್ರಮದಲ್ಲಿ ಆಟಿ ತಿಂಗಳಲ್ಲಿ ನೈಸರ್ಗಿಕ ತಿಂಡಿ ತಿನಿಸು  ನೀಡುತ್ತಿದ್ದರು. ಅದು ಆರೋಗ್ಯಕ್ಕೆ ಒಳ್ಳೆಯದಾಗಿತ್ತು.ಅಂದಿನ ಆಟಗಳಾದ ಚೆನ್ನೆಮನೆ, ಕಬಡ್ಡಿ ಮೊದಲಾದವುಗಳು ದೈಹಿಕವಾಗಿ ಮನುಷ್ಯನನ್ನು ಪ್ರಕೃತಿ ಸಹಜವಾಗಿ ಬದುಕಲು ಪ್ರಚೋದನೆ ನೀಡುತ್ತಿದ್ದವು ಎಂದರು.

ಬಂಟರ ಸಂಘ ಕಲ್ಲಡ್ಕ ವಲಯ ಅಧ್ಯಕ್ಷ ಕೆ.ಪದ್ಮನಾಭ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಅವರು ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆRಯಾದ ಹಿನ್ನೆಲೆಯಲ್ಲಿ ಅವರನ್ನು ಸಮ್ಮಾನಿಸಲಾಯಿತು.

ವೇದಿಕೆಯಲ್ಲಿ ಉದ್ಯಮಿ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಬಂಟರ ಸಂಘ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯೆ ಪ್ರತಿಭಾ ಎ. ರೈ, ಎಪಿಎಂಸಿ ಮಾಜಿ ಅಧ್ಯಕ್ಷ ನೇಮಿರಾಜ ರೈ , ಮಹಾಬಲ ರೈ ಬೋಳಂತೂರು, ಪ್ರ.ಕಾರ್ಯದರ್ಶಿ ಗಣೇಶ್‌ ಶೆಟ್ಟಿ ಗೋಳ್ತಮಜಲು ಉಪಸ್ಥಿತರಿದ್ದರು.

ಸಾಧಕರಾದ ಪೂವಪ್ಪ ಶೆಟ್ಟಿ ಕಲ್ಲಡ್ಕ, ಹರೀಶ್‌ ಪೆರ್ಗಡೆ, ತಿಮ್ಮಪ್ಪ ಶೆಟ್ಟಿ ವೀರಕಂಭ ಈ ಮೂವರಿಗೆ ವೇದಿಕೆಯಲ್ಲಿ ಸಮ್ಮಾನಿಸಲಾಯಿತು.

ರಾಮಣ್ಣ ಶೆಟ್ಟಿ ಸುಧೆಕಾರ್‌ ಸ್ವಾಗತಿಸಿ,  ಪ್ರೇಮನಾಥ ಶೆಟ್ಟಿ  ನರಿಕೊಂಬು ವಂದಿಸಿದರು. ನಡುಳಚ್ಚಿಲು ಜಗದೀಶ ರೈ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.