ಉಳ್ಳಾಲ: ತೌಖ್ತೆ ಚಂಡಮಾರುತದ ಪ್ರಭಾವಕ್ಕೆ ಸಮುದ್ರ ಪಾಲಾದ ಹಿಂದೂ ರುದ್ರಭೂಮಿ
Team Udayavani, May 15, 2021, 2:35 PM IST
ಉಳ್ಳಾಲ: ತೌಖ್ತೆ ಚಂಡಮಾರುತದ ಪ್ರಭಾವಕ್ಕೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಸೋಮೇಶ್ವರ ಬಳಿ ಹಿಂದೂ ರುದ್ರಭೂಮಿ ಸಮುದ್ರ ಪಾಲಾಗಿದೆ.
ಸಮುದ್ರದ ಅಲೆಗಳಿಂದ ಸಮುದ್ರದ ನೀರು ಸುಮಾರು 100 ಮೀಟರ್ ಒಳಗೆ ನುಗ್ಗಿ ಮನೆಗಳು ಜಲಾವೃತವಾಗಿದೆ.
ಸೋಮೇಶ್ವರ ರುದ್ರಪಾದ ಬಳಿ ಇರುವ ಹಿಂದೂ ರುದ್ರಭೂಮಿ ಶುಕ್ರವಾರದ ಅಲೆಗೆ ಸಿಲುಕಿ ತಡೆಗೋಡೆ ಸಮುದ್ರ ಪಾಲಾಗಿತ್ತು. ಶನಿವಾರದ ಸಮುದ್ರದ ಅಲೆಗಳಿಗೆ ಸಂಪೋರ್ಣ ರುದ್ರಭೂಮಿಯೇ ಕುಸಿದು ಬಿದ್ದು ಭಾಗಸದ: ಸಮುದ್ರ ಪಾಲಾಗಿದೆ.
ಉಚ್ಚಿಲ ಬಟ್ಟಪ್ಪಾಡಿ ಬಳಿಯೂ ಮನೆಗಳು ಅಪಾಯದಲ್ಲಿದ್ದು ಬೃಹತ್ ಗಾತ್ರದ ಅಲೆಗಳು ಮನೆಗಳಿಗೆ ಅಪ್ಪಳಿಸುತ್ತಿದೆ.
ಉಳ್ಳಾಲ ಮೊಗವೀರಪಟ್ಣ ಬಳಿ ಬೃಹತ್ ಗಾತ್ರದ ಅಲೆಗಳಿಂದ ಉಂಟಾದ ಸಮುದ್ರದ ನೀರು ಸುತ್ತಮುತ್ತಲಿನ ಮನೆಗಳಿಗೆ ನುಗ್ಗುತ್ತಿದ್ದೆ. ಉಳ್ಳಾಲದ ಕಿಲೇರಿಯಾನಗರ, ಮುಕ್ಜಚ್ಚೇರಿ ಬಳಿ ಮಸೀದಿಯೊಂದು ಅಪಾಯದ ಸ್ಥಿತಿಯಲ್ಲಿದೆ. ಕೋಟೆಪುರ , ಸೀಗ್ರೌಂಡ್ ಬಳಿ ಮನೆ ಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸುತ್ತಿದೆ. ಸೋಮೇಶ್ವರ ಉಚ್ಚಿಲ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ