ದ.ಕ. ಜಿಲ್ಲೆ ಗೋಳ್ತ ಮಜಲಿನಲ್ಲಿ ಮಲತ್ಯಾಜ್ಯ ಸಂಸ್ಕರಣೆಗೆ ಘಟಕ

ದೊಡ್ಡ-ಸಣ್ಣ ಗಾತ್ರದ ಜಲ್ಲಿಕಲ್ಲುಗಳ ಪದರ ಹೊಂದಿರುತ್ತದೆ

Team Udayavani, Jan 12, 2023, 2:25 PM IST

ದ.ಕ. ಜಿಲ್ಲೆ ಗೋಳ್ತ ಮಜಲಿನಲ್ಲಿ ಮಲತ್ಯಾಜ್ಯ ಸಂಸ್ಕರಣೆಗೆ ಘಟಕ

ಮಂಗಳೂರು: ಗ್ರಾಮೀಣ ಭಾಗದ ನೈರ್ಮಲ್ಯ ನಿರ್ವಹಣೆಯಲ್ಲಿ ಕ್ರಾಂತಿಕಾರಕ ಬದಲಾವಣೆ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸ್ವಚ್ಛ ಭಾರತ್‌ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಡೆ ಮಾನವ ಮಲತ್ಯಾಜ್ಯ ಸಂಸ್ಕರಣ ಘಟಕ (ಫೀಕಲ್‌ ಸ್ಲಡ್ಜ್ ಮ್ಯಾನೇಜ್‌ಮೆಂಟ್‌ ಯುನಿಟ್‌) ಗಳನ್ನು ನಿರ್ಮಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾ.ಪಂ. ಮತ್ತು ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ನಲ್ಲಿ ಘಟಕಗಳು ನಿರ್ಮಾಣಗೊಂಡಿದ್ದು, ಉಜಿರೆಯ ಘಟಕ ಪ್ರಾಯೋಗಿಕವಾಗಿ ಕಾರ್ಯಾರಂಭಿಸಿದೆ. ಗೋಳ್ತಮಜಲು ಘಟಕ ಜನವರಿ ಅಂತ್ಯದೊಳಗೆ ಕಾರ್ಯಾಚರಣೆಗೆ ಸಿದ್ಧವಾಗಲಿದೆ. ಉಭಯ ತಾಲೂಕುಗಳ 57 ಗ್ರಾಮಗಳಿಗೆ ಅನುಕೂಲವಾಗಲಿದೆ.

ಮಲತ್ಯಾಜ್ಯದ ಸೂಕ್ತ ನಿರ್ವಹಣೆ ಗ್ರಾಮೀಣ ಭಾಗದಲ್ಲಿ ಶೌಚಾಲಯ ಗಳಿಗೆ ಗುಂಡಿ ನಿರ್ಮಿಸಿ ವಿಲೇವಾರಿ ಮಾಡಲಾಗುತ್ತದೆ. ಈ ಗುಂಡಿಗಳು ಒಂದೆರಡು ವರ್ಷದಲ್ಲಿ ತುಂಬುವುದರಿಂದ ವಿಲೇವಾರಿ ಸಮಸ್ಯೆಯಾಗುತ್ತದೆ. ಸ್ಥಳಾವಕಾಶವಿರುವವರು ಇನ್ನೊಂದು ಗುಂಡಿ ತೆಗೆದು ಬದಲಿ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಇಲ್ಲದವರು ಖಾಸಗಿ ಏಜೆನ್ಸಿಗಳ ಮೂಲಕ ಗುಂಡಿ ಖಾಲಿ ಮಾಡಿಸುತ್ತಾರೆ. ಈ ಏಜೆನ್ಸಿಯವರು ತ್ಯಾಜ್ಯವನ್ನು ನದಿ, ಹಳ್ಳ, ತೆರೆದ ಸ್ಥಳಗಳಿಗೆ ಬಿಡುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದನ್ನು ಮನಗಂಡು ಮಲತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣಕ್ಕೆ ಇಲಾಖೆ ಮುಂದಾಗಿದೆ.

ಘಟಕದ ಕಾರ್ಯನಿರ್ವಹಣೆ
ಈ ಸಂಸ್ಕರಣ ಘಟಕಗಳು ಸಸ್ಯಸಹಿತ ಅಥವಾ ರಹಿತ ಡ್ರೈಯಿಂಗ್‌ ಬೆಡ್‌, ಸೆಟ್ಲರ್‌, ಎನೆರೋಬಿಕ್‌ ಫಿಲ್ಟರ್‌, ಪ್ಲಾಂಟೆಡ್‌ ಗ್ರಾವೆಲ್‌ ಫಿಲ್ಟರ್‌ ಮತ್ತು ಇಂಗು ಗುಂಡಿಗಳನ್ನು ಹೊಂದಿರುತ್ತವೆ. ಶೌಚ ಗುಂಡಿಯಿಂದ ತೆಗೆದ ತ್ಯಾಜ್ಯವನ್ನು ಡಿ-ಸ್ಲಡ್ಲಿಂಗ್ ವಾಹನದ ಮೂಲಕ ಸಂಸ್ಕರಣ ಘಟಕಕ್ಕೆ ತಂದು ಸೋಸಿ ಅಜೈವಿಕ ಘನ ವಸ್ತುಗಳನ್ನು ಪ್ರತ್ಯೇಕಿಸಲಾಗುತ್ತದೆ. ಅಲ್ಲಿಂದ ನೀರನ್ನು ಸೆಟ್ಲರ್‌ ಮೂಲಕ ಎನೆರೋಬಿಕ್‌ ಫಿಲ್ಟರ್‌ಗೆ ವರ್ಗಾಯಿಸಲಾಗುತ್ತದೆ. ಮುಂದಕ್ಕೆ ಪ್ಲಾಂಟೆಡ್‌ ಗ್ರಾವೆಲ್‌ ಫಿಲ್ಟರ್‌ನಲ್ಲಿ ಸಂಗ್ರಹಗೊಳ್ಳುತ್ತದೆ.

ಇದು ತೆರೆದ ತೊಟ್ಟಿಯಾಗಿದ್ದು, ದೊಡ್ಡ-ಸಣ್ಣ ಗಾತ್ರದ ಜಲ್ಲಿಕಲ್ಲುಗಳ ಪದರ ಹೊಂದಿರುತ್ತದೆ. ಮೇಲ್ಭಾಗದಲ್ಲಿ ವಿವಿಧ ಗಿಡಗಳನ್ನು ಬೆಳೆಸಲಾಗುತ್ತದೆ. ನೀರಿನಲ್ಲಿರುವ ನೈಟ್ರೋಜನ್‌, ಫಾಸ್ಪರಸ್‌ ಮತ್ತು ಪೊಟಾಶಿಯಂ ಅಂಶಗಳನ್ನು ಹೀರಿ ಸಸ್ಯಗಳು ಬೆಳೆಯುತ್ತವೆ. ಇಲ್ಲಿಂದ ಶುದ್ಧೀಕರಣಗೊಂಡ ನೀರು ಇಂಗು ಗುಂಡಿ ಸೇರುತ್ತದೆ. ಇನ್ನೊಂದೆಡೆ 2-3 ತಿಂಗಳಲ್ಲಿ ಡ್ರೈಯಿಂಗ್‌ ಬೆಡ್‌ನ‌ಲ್ಲಿರುವ ಹೂಳು ಚೆಕ್ಕೆಯಂತಾಗುತ್ತದೆ. ಇದನ್ನು ಕೃಷಿಗೆ ಜೈವಿಕ ಗೊಬ್ಬರವಾಗಿ ಬಳಸಬಹುದು.

ಉಜಿರೆಯಲ್ಲಿ ಇರುವ ಘನ ತ್ಯಾಜ್ಯ ಘಟಕ ಸಮೀಪ ದಲ್ಲೇ 20 ಸೆಂಟ್ಸ್‌ ಜಾಗದಲ್ಲಿ ಮಲತ್ಯಾಜ್ಯ ಸಂಸ್ಕರಣ ಘಟಕ ವನ್ನೂ ನಿರ್ಮಿಸಲಾಗಿದೆ. ಮೂರು ತಿಂಗಳಿಂದ ಕಾರ್ಯಾಚರಿಸುತ್ತಿದೆ. ತಾಲೂಕು ಕಚೇರಿಯ ಸಕ್ಕಿಂಗ್‌ ಯಂತ್ರವನ್ನು ಉಪಯೋಗಿಸಿ ಶೌಚ ಗುಂಡಿಗಳ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ. ಶೀಘ್ರದಲ್ಲೇ ಘಟಕ ಉದ್ಘಾಟನೆಗೊಳ್ಳಲಿದೆ.
-ಪ್ರಕಾಶ್‌ ಶೆಟ್ಟಿ, ಗ್ರಾ.ಪಂ.
ಅಭಿವೃದ್ಧಿ ಅಧಿಕಾರಿ, ಉಜಿರೆ

ಈಗಾಗಲೇ ಕಾರ್ಯಾರಂಭಿಸಿರುವ ಉಜಿರೆಯ ಘಟಕ ಯಶಸ್ವಿಯಾಗಿದೆ. ದುರ್ವಾಸನೆ ಇತ್ಯಾದಿ ಯಾವುದೇ ಸಮಸ್ಯೆ ಇಲ್ಲದ ಕಾರಣ ಜನ ವಿರೋಧವೂ ಇಲ್ಲ. ಗೋಳ್ತಮಜಲು ಘಟಕದ ಕಾರ್ಯನಿರ್ವಹಣೆಯನ್ನು ಗಮನಿಸಿ ಮುಂದೆ ಎಲ್ಲ ತಾಲೂಕುಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
-ಆನಂದ ಕುಮಾರ್‌, ದ.ಕ. ಜಿ.ಪಂ. ಉಪಕಾರ್ಯದರ್ಶಿ

*ಭರತ್ ಶೆಟ್ಟಿಗಾರ್

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.