ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ


Team Udayavani, Dec 6, 2021, 7:15 AM IST

ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ

ಸಾಂದರ್ಭಿಕ ಚಿತ್ರ.

ಮಂಗಳೂರು: ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಯ ಸಭೆ ಬೆಂಗಳೂರಿನಲ್ಲಿ ಡಿ. 26ರಂದು ನಡೆಯಲಿದ್ದು, ಇದರಲ್ಲಿ ಕರಾವಳಿಯ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಅನುಮತಿ ಲಭಿಸುವ ನಿರೀಕ್ಷೆ ಇದೆ.

ಸಿಆರ್‌ಝಡ್‌ನ‌ಲ್ಲಿ ಮರಳು ದಿಬ್ಬಗಳ ಸಮೀಕ್ಷೆ ನಡೆದು ವರದಿ ಸಿದ್ಧವಾಗಿದೆ. ಅದನ್ನು ತಾಂತ್ರಿಕ ವರದಿಗಾಗಿ ಎನ್‌ಐಟಿಕೆಗೆ ಕಳುಹಿಸಿ ಕೊಡಲಾಗಿದೆ. ಅದು ಒಂದೆರಡು ದಿನಗಳಲ್ಲಿ ಜಿಲ್ಲಾಧಿ ಕಾರಿ ಅಧ್ಯ ಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿಗೆ ಸಲ್ಲಿಕೆಯಾಗಲಿದೆ. ಸಮಿತಿಯು ಅದರ ಪರಿ ಶೀಲನೆ ನಡೆಸಿ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಗೆ ಅನುಮೋದನೆಗಾಗಿ ರವಾನಿಸಲಿದೆ. ಕೆಸಿಝಡ್‌ಎಂ ಸಭೆ 3 ತಿಂಗಳುಗಳಿಗೆ ಒಮ್ಮೆ ನಡೆಯುತ್ತದೆ. ಡಿ. 26ರ ಸಭೆಯಲ್ಲಿ ಅನುಮತಿ ಸಿಗದೆ ಇದ್ದರೆ ಮತ್ತೆ 3 ತಿಂಗಳು ಕಾಯಬೇಕು. ಹೀಗಾಗಿ ಮುಂಬರುವ ಸಭೆಯಲ್ಲೇ ವರದಿ ಪರಿಶೀಲನೆಯಾಗಿ ಅನುಮತಿ ಲಭ್ಯ ವಾಗುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಯತ್ನಗಳನ್ನು ನಡೆಸುತ್ತಿದೆ.

ಅನುಮತಿ ಲಭಿಸಿದರೆ ಜನವರಿ ಮೊದಲ ವಾರ ಮರಳುಗಾರಿಕೆ ಪರವಾನಿಗೆ ಪ್ರಕ್ರಿಯೆ ಆರಂಭಗೊಳ್ಳುವ ಸಾಧ್ಯತೆಯಿದೆ.

ಸಿಆರ್‌ಝಡ್‌ನ‌ಲ್ಲಿ ಮರಳು ಗಾರಿಕೆಗೆ ಪರಿಸರ ಇಲಾಖೆ ಈ ಹಿಂದೆ ನೀಡಿದ್ದ ಪರಿಸರ ವಿಮೋಚನ ಪತ್ರದ ಅವಧಿ ಸೆ. 16ರಂದು ಕೊನೆ ಗೊಂಡಿದ್ದರಿಂದ ಮರಳುಗಾರಿಕೆ ಸ್ಥಗಿತ ಗೊಂಡಿತ್ತು. ನೇತ್ರಾವತಿ, ಫಲ್ಗುಣಿ ನದಿಯ ಸಿಆರ್‌ಝಡ್‌ನ‌ಲ್ಲಿ ಮೀನುಗಾರಿಕೆ ಕಾಲೇಜಿನ ತಜ್ಞರು ಮರಳುದಿಬ್ಬಗಳ ಸಮೀಕ್ಷೆ ನಡೆಸಿ ವರದಿಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಲ್ಲಿಸಿದ್ದರು.

ಇದನ್ನೂ ಓದಿ:ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ನಾನ್‌ ಸಿಆರ್‌ಝಡ್‌ ಆಸರೆ
ಪ್ರಸ್ತುತ ನಾನ್‌ ಸಿಆರ್‌ಝಡ್‌ ವಲಯದ 17 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಪ್ರಸ್ತುತ ನಿರ್ಮಾಣ ಕಾಮಗಾರಿಗಳಿಗೆ ಆಸರೆಯಾಗಿರುವ ಮರಳು ಇಲ್ಲಿನದು. ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಪ್ರಕಾರ ನಾನ್‌ಸಿಆರ್‌ಝಡ್‌ ವಲಯದಲ್ಲಿ 50 ಸಾವಿರ ಮೆಟ್ರಿಕ್‌ ಟನ್‌ ಮರಳು ಲಭ್ಯವಿದ್ದು, ಸಿಆರ್‌ಝಡ್‌ ವಲಯ

ದಲ್ಲಿ ಮರಳುಗಾರಿಕೆ ಪ್ರಾರಂಭ ವಾಗುವವರೆಗೆ ಮರಳು ಪೂರೈಸಬಹು ದಾಗಿದೆ. ಆದರೆ ನಾನ್‌ಸಿಆರ್‌ಝಡ್‌ ವಲಯದಿಂದ ಮರಳು ಪಡೆಯಲು ವೆಚ್ಚ ಅಧಿಕ. ಅಲ್ಲದೆ ಇದು ಗಾರೆ ಕೆಲಸಕ್ಕೆ ಸೂಕ್ತವಲ್ಲ. ಆದುದರಿಂದ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಶೀಘ್ರ ಆರಂಭವಾಗ ಬೇಕು ಎಂಬುದು ಜಿಲ್ಲಾ ಸಿವಿಲ್‌ ಕಂಟ್ರಾಕ್ಟರ್‌ಗಳ ಒಕ್ಕೂಟದ ಆಗ್ರಹ.

ಉಡುಪಿ ಜಿಲ್ಲೆ: ಕೆಲವೆಡೆ ಆರಂಭ
ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಸಹಿತ ಕೆಲವೆಡೆ ಸಿಆರ್‌ಝಡ್‌ನ‌ಲ್ಲಿ ಈಗಾಗಲೇ ಮರಳುಗಾರಿಕೆ ಆರಂಭವಾಗಿದೆ. ವಾರಾಹಿ ನದಿಯಲ್ಲಿ 2019ರ ಸೆಪ್ಟಂಬರ್‌ನಿಂದ 2024ರ ಸೆಪ್ಟಂಬರ್‌ವರೆಗೆ ಮರಳುಗಾರಿಕೆ ನಡೆಸಲು ಇಬ್ಬರಿಗೆ ಅನುಮತಿ ಇದ್ದು, ಅ. 15ರಿಂದ ಆರಂಭವಾಗಿದೆ. ಕುಂದಾಪುರದಲ್ಲಿಯೂ ಪರವಾನಿಗೆ 2024ರ ವರೆಗೆ ಇದ್ದು, ಕೆಲವೆಡೆ ಮರಳುಗಾರಿಕೆ ಆರಂಭಗೊಂಡಿದೆ.

ಎನ್‌ಐಟಿಕೆಯಿಂದ ತಾಂತ್ರಿಕ ವರದಿ ಒಂದೆರಡು ದಿನಗಳಲ್ಲಿ ಲಭ್ಯವಾಗಲಿದೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಇದನ್ನು ರಾಜ್ಯ ಸರಕಾರಕ್ಕೆ ಕೂಡಲೇ ಕಳುಹಿಸಿಕೊಡಲಿದ್ದು, ಡಿ. 26ರಂದು ನಡೆಯುವ ಕೆಸಿಝಡ್‌ಎಂ ಸಭೆಯಲ್ಲಿ ಮಂಡನೆಯಾಗಲಿದೆ.
– ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.