ದಕ್ಷಿಣ ಕನ್ನಡ: ಡೆಂಗ್ಯೂ ಇಳಿಕೆ
Team Udayavani, Aug 1, 2019, 6:26 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣ ಇಳಿಕೆಯಾಗುತ್ತಿದ್ದು, ಸದ್ಯ ಯಾರೂ ಆಸ್ಪತ್ರೆಗಳಲ್ಲಿ ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಡೆಂಗ್ಯೂ ಸೊಳ್ಳೆ ಉತ್ಪತ್ತಿಗೆ ಪೂರಕವಾದ ತಾಣಗಳ ಪರಿಶೀಲನಾ ಕಾರ್ಯ ಮುಂದುವರಿದಿದ್ದು, ಬುಧವಾರ 20 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.
ಎಚ್ಚರ ವಹಿಸಲು ದೇವಸ್ಥಾನಗಳಿಗೆ ಸೂಚನೆ
ಹಿಂದೂ ಧಾರ್ಮಿಕ ಸಂಸ್ಥೆಗಳ ಅಧೀನಕೊಳಪಟ್ಟ ದೇವಸ್ಥಾನಗಳಲ್ಲೂ ಸ್ವತ್ಛತೆ ಕಾಪಾಡುವಂತೆ ಇಲಾಖೆ ತಿಳಿಸಿದೆ. ದಿನನಿತ್ಯ ಮತ್ತು ವಿಶೇಷ ಸಂದರ್ಭ ನಡೆಯುವ ಸೀಯಾಳ ಸಹಿತ ವಿವಿಧ ರೀತಿಯ ಅಭಿಷೇಕ ಸಂದರ್ಭ ಸೀಯಾಳದ ನೀರು ಸರಿಯಾಗಿ ಹರಿದು ಹೋಗುವಂತೆ ಹಾಗೂ ದೇವಸ್ಥಾನದಲ್ಲಿ ಉಪಯೋಗಿಸುವ ತಟ್ಟೆ-ಲೋಟಗಳು ಹಾಗೂ ಇನ್ನಿತರ ಸಾಮಗ್ರಿಗಳನ್ನು ಆಡಳಿತದಾರರು ಪರಿಶೀಲನೆ ನಡೆಸಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆಗಳ ಸಂತಾನೋತ್ಪತ್ತಿಗೆ ಪೂರಕವಾಗುವ ನೀರು ನಿಲ್ಲುವ ಪ್ರದೇಶಗಳನ್ನು ದೇವಸ್ಥಾನದ ಹಿಂಭಾಗ, ಮುಂಭಾಗಗಳಲ್ಲಿ ಪರಿಶೀಲಿಸಿ ಕೂಡಲೇ ನಿವಾರಿಸಬೇಕು.
ನಿರ್ಲಕ್ಷ್ಯದಿಂದಾಗಿ ಲಾರ್ವಾ ಉತ್ಪತ್ತಿಯಾಗಿರುವುದು ಕಂಡುಬಂದಲ್ಲಿ ಕಾರಣರಾದ ದೇವಾಲಯದ ಆಡಳಿತದಾರರ, ಕಾರ್ಯನಿರ್ವಹಣಾಧಿಕಾರಿಯವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ