ದ.ಕ. : 8 ವಿದ್ಯಾರ್ಥಿಗಳು ಟಾಪರ್‌ ಪಟ್ಟಿಯಲ್ಲಿ


Team Udayavani, May 12, 2017, 2:26 AM IST

Srujana-11-5.jpg

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕಳೆದ ಬಾರಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದ ದ.ಕ. ಜಿಲ್ಲೆ ಈ ಸಲ ಎರಡನೇ ಸ್ಥಾನ ಗಳಿಸಿದೆ. ಜತೆಗೆ ವಿಜ್ಞಾನ ವಿಭಾಗದಲ್ಲಿ ಮೊದಲ ಹಾಗೂ ತೃತೀಯ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳಿಸುವ ಮೂಲಕ ದ.ಕ. ಮುಂಚೂಣಿಯಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ ಪರ್ಟ್‌ ಪ.ಪೂ. ಕಾಲೇಜಿನ ಸೃಜನಾ ಎನ್‌. 596 ಅಂಕಗಳೊಂದಿಗೆ ಮೊದಲ ಸ್ಥಾನಗಳಿಸಿದ್ದಾರೆ. ಆಳ್ವಾಸ್‌ ಪ.ಪೂ. ಕಾಲೇಜಿನ ಮಹಾಗುಂಡಯ್ಯ ವಸ್ತ್ರದ್‌, ನಿಹಾರಿಕಾ ಎಚ್‌.ಆರ್‌. ಮತ್ತು ಎಸ್‌ಡಿಎಂ ಪ.ಪೂ. ಕಾಲೇಜಿನ ಪ್ರಣವ್‌ ಭಟ್‌ ತಲಾ 594 ಅಂಕಗಳೊಂದಿಗೆ 3ನೇ ಸ್ಥಾನ ಗಳಿಸಿದ್ದಾರೆ. ಇನ್ನೊಂದೆಡೆ ವಾಣಿಜ್ಯ ವಿಭಾಗದಲ್ಲಿಯೂ ದ.ಕ. ಪ್ರಥಮ ಸ್ಥಾನ ಪಡೆದಿದ್ದು, ಅಳಿಕೆ ಸತ್ಯಸಾಯಿ ಲೋಕಸೇವಾ ಪಪೂ ಕಾಲೇಜಿನ ಸಾಯಿ ಸಮರ್ಥ್ 595 ಅಂಕ ಪಡೆಯುವುದರೊಂದಿಗೆ ಮುಂಚೂಣಿಯಲ್ಲಿದ್ದಾರೆ.
 
ಹಾಗೆಯೇ ಆಳ್ವಾಸ್‌ ಪಪೂ ಕಾಲೇಜಿನ ವಿ. ಸ್ಪಂದನಾ 594 ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಲ್ಲದೇ ಆಳ್ವಾಸ್‌ ಪಪೂ ಕಾಲೇಜಿನ ಅನಿತಾ ಕೃಷ್ಣಾನಂದ ಹೆಗ್ಡೆ ಹಾಗೂ ಮಂಗಳೂರಿನ ಸಂತ ಅಲೋಶಿಯಸ್‌ ಪಪೂ ಕಾಲೇಜಿನ ದರ್ಶನ್‌ ಪಿ. ತಲಾ 593 ಅಂಕಗಳೊಂದಿಗೆ 3ನೇ ಸ್ಥಾನ ಗಳಿಸಿದ್ದಾರೆ.

ಶೇಕಡಾವಾರು ಫಲಿತಾಂಶದಲ್ಲೂ ಕುಸಿತ: ದ.ಕ. ಜಿಲ್ಲೆಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 38,568 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 33,578 ಮಂದಿ ಉತ್ತೀರ್ಣರಾಗಿ ಶೇ. 89.92 ಫಲಿತಾಂಶ ಬಂದಿದೆ. ಖಾಸಗಿಯಾಗಿ ಕುಳಿತ ವಿದ್ಯಾರ್ಥಿಗಳ ಸಂಖ್ಯೆ 4,002 ಆಗಿದ್ದು, ಈ ಪೈಕಿ 1620 ಮಂದಿ ಉತ್ತೀರ್ಣರಾಗಿ ಶೇ. 40.18 ಫಲಿತಾಂಶ ದೊರಕಿದೆ. 184 ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 43 ಮಂದಿ ಉತ್ತೀರ್ಣರಾಗಿದ್ದಾರೆ. 

ವಿಭಾಗವಾರು ಫಲಿತಾಂಶ: ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 4,498 ವಿದ್ಯಾರ್ಥಿಗಳ ಪೈಕಿ 3,414 ಮಂದಿ ಉತ್ತೀರ್ಣರಾಗಿ ಶೇ. 75.9 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 14,906 ಮಂದಿಯಲ್ಲಿ 13,651 ಮಂದಿ ಪಾಸಾಗಿ ಶೇ. 91.58 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 14,978 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 13,850 ಮಂದಿ ತೇರ್ಗಡೆ ಹೊಂದಿ ಶೇ. 92.47 ಫಲಿತಾಂಶ ಬಂದಿದೆ.

ನಗರ/ಗ್ರಾಮಾಂತರ: ನಗರ ಪ್ರದೇಶದ 23,574 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, 21,387 ಮಂದಿ ಪಾಸಾಗಿ ಶೇ. 90.72 ಫಲಿತಾಂಶ ಬಂದಿದೆ. ಗ್ರಾಮಾಂತರ ಪ್ರದೇಶದ 10,606 ಮಂದಿಯ ಪೈಕಿ 9,528 ಮಂದಿ ಉತ್ತೀರ್ಣರಾಗಿ ಶೇ. 88.16 ಫಲಿತಾಂಶ ಬಂದಿದೆ.

ಹುಡುಗಿಯರೇ ಮೇಲುಗೈ: ಫಲಿತಾಂಶದಲ್ಲಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ 19,456 ಮಂದಿ ವಿದ್ಯಾರ್ಥಿನಿಯರ ಪೈಕಿ 17,367 ಮಂದಿ ಪಾಸಾಗಿ ಶೇ. 89.26 ಫಲಿತಾಂಶ ಬಂದಿದೆ. 19,112 ಹುಡುಗರು ಹಾಜರಾಗಿದ್ದು, 15,211 ಮಂದಿ ತೇರ್ಗಡೆಯಾಗಿದ್ದಾರೆ.

ಟಾಪರ್ಸ್‌: ದ.ಕ.ದ 8 ವಿದ್ಯಾರ್ಥಿಗಳು
ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯ ಒಟ್ಟು 8 ವಿದ್ಯಾರ್ಥಿಗಳು ಅಗ್ರ 10 ಮಂದಿಯಲ್ಲಿ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಸತತವಾಗಿ ದ.ಕ. ಜಿಲ್ಲೆಯು ಪಿಯು ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿತ್ತು.

ಟಾಪ್ ನ್ಯೂಸ್

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.