Dakshina Kannada; ರೈತರ ಮನೆಯಿಂದಲೇ ಹಾಲು ಸಂಗ್ರಹ!

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದಿಂದ ಪ್ರಾಯೋಗಿಕ ಜಾರಿ

Team Udayavani, Jan 28, 2024, 7:00 AM IST

Dakshina Kannada; ರೈತರ ಮನೆಯಿಂದಲೇ ಹಾಲು ಸಂಗ್ರಹ!

ಮಂಗಳೂರು: ಹೈನುಗಾರಿಕೆ ನಿರ್ವಹಣೆ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಧ್ಯೆಯೇ ಲಭ್ಯ ಹಾಲನ್ನು ಡಿಪೋಗೆ ಸರಬರಾಜು ಮಾಡುವುದೂ ಸವಾಲಾಗಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಮನೆ ಬಾಗಿಲಿನಿಂದಲೇ ಹಾಲು ಸಂಗ್ರಹಿಸುವ ಕಾರ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಮುಂದಾಗಿದೆ.

ಹಳ್ಳಿಗಳಲ್ಲಿ ಹೈನುಗಾರಿಕೆಗೆ ಅವಕಾಶಗಳಿದ್ದರೂ ಡಿಪೋಗೆ ಹಾಲು ಕೊಂಡೊಯ್ಯಲು ವ್ಯವಸ್ಥೆ ಇಲ್ಲ. ಹತ್ತಾರು ಕಿ.ಮೀ. ದೂರದಲ್ಲಿ ಡಿಪೋಗಳಿರುವ ಕಾರಣ ರೈತರು ದೊಡ್ಡ ಪ್ರಮಾಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿ ಕೊಳ್ಳಲು ನಿರುತ್ಸಾಹ ತೋರು ತ್ತಿದ್ದಾರೆ. ಸಣ್ಣ ಹಾಗೂ ಮಧ್ಯಮ ವರ್ಗದ ರೈತರ ಈ ಸಂಕಷ್ಟ ಅರಿತುಕೊಂಡ ಒಕ್ಕೂಟ ಮನೆ ಬಾಗಿಲಿಂದಲೇ ಹಾಲು ಸಂಗ್ರಹಿಸುವ ಉಪಕ್ರಮವೊಂದನ್ನು ಸಂಘಗಳ ಮೂಲಕವೇ ಆರಂಭಿಸಿದೆ.

ಪ್ರಾಯೋಗಿಕ ಆರಂಭ ಯಶಸ್ವಿ
ದ.ಕ. ಜಿಲ್ಲೆಯ ವಾಮದಪದವು ಹಾಗೂ ಉಡುಪಿ ಜಿಲ್ಲೆಯ ಕಿರಿಮಂಜೇಶ್ವರದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು ಯಶಸ್ಸು ಸಿಕ್ಕಿದೆ. ಈ ಭಾಗಗಳಲ್ಲಿ ಹಾಲು ಸಂಗ್ರಹ ಹೆಚ್ಚಳವಾಗಿದೆ. ಜತೆಗೆ ಹೊಸ ಸದಸ್ಯರು ಸೇರ್ಪಡೆಯಾಗುತ್ತಿದ್ದಾರೆ. ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಯೋಜನೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಒಕ್ಕೂಟ ಸರ್ವೇ ನಡೆಸಿದೆ. ಮನೆ ಬಾಗಿಲಿನಿಂದ ಹಾಲು ಸಂಗ್ರಹಕ್ಕೆ ಹೆಚ್ಚಿನ ರೈತರಿಂದ ಆಗ್ರಹ ಕೇಳಿಬರುತ್ತಿದ್ದು, ಹಂತ ಹಂತವಾಗಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಆಯಾ ಹಾಲು ಉತ್ಪಾದಕ ಸಂಘಗಳೇ ವಾಹನವನ್ನು ಖರೀದಿಸಿ ಹಾಲು ಖರೀದಿಸುವಂತೆ ಒಕ್ಕೂಟ ಪ್ರೋತ್ಸಾಹ ನೀಡುತ್ತಿದೆ ಎಂದು ಒಕ್ಕೂಟದ ಪ್ರಮುಖರು ತಿಳಿಸಿದ್ದಾರೆ.

ವ್ಯವಸ್ಥೆ ಹೇಗೆ?
ಹಾಲು ಸಂಗ್ರಹ ವಾಹನ ಎಲ್ಲ ವ್ಯವಸ್ಥೆಗಳನ್ನು ಹೊಂದಿದೆ. ಮಾಪನ ಯಂತ್ರ, ಗುಣಮಟ್ಟ ತಪಾಸಣೆಗೆ ಈಎಂಟಿ ಹಾಗೂ ಪಾತ್ರೆಗಳನ್ನು ಸಮರ್ಪಕವಾಗಿ ಇರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆ ಹಾಗೂ ಸಂಜೆ 2 ಬಾರಿ ವಾಹನಗಳಲ್ಲಿ ಸಂಗ್ರಹಿಸಿ ಸಂಘದ ಮುಖ್ಯ ಕಚೇರಿಗೆ ತಂದು ಅಲ್ಲಿಂದ ರವಾನಿಸಲಾಗುತ್ತದೆ. ವರ್ಷದ ಹಿಂದೆ ವಾಮದಪದವಿನಲ್ಲಿ ಈ ವ್ಯವಸ್ಥೆ ಆರಂಭಗೊಂಡಿದ್ದು, ನಿತ್ಯ 800 ಲೀ. ಸಂಗ್ರಹಿಸಲಾಗುತ್ತಿದೆ. ಕಿರಿಮಂಜೇಶ್ವರದಲ್ಲಿ ತಿಂಗಳ ಹಿಂದೆ ಸಂಗ್ರಹಕ್ಕೆ ಮುಂದಾಗಿದ್ದು ನಿತ್ಯ620 ಲೀ. ಸಂಗ್ರಹಿಸಲಾಗುತ್ತಿದೆ. ಆರಂಭದಿಂದ ಇಂದಿನ ಪ್ರಮಾಣ ಗಮನಿಸಿದಾಗ ಹೆಚ್ಚಳವಾಗಿದೆ ಎಂದು ಸಂಘದವರ ಮಾತು.

ಮನೆ ಬಾಗಿಲಿನಿಂದ ಹಾಲು ಸಂಗ್ರಹಿಸುವುದರಿಂದ ರೈತರಿಗೆ ಅನುಕೂಲವಾಗಿದ್ದು, ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಹಾಲು ಸಂಗ್ರಹ ಪ್ರಮಾಣವೂ ವೃದ್ಧಿಯಾಗಿದೆ. ಹತ್ತಾರು ಕಿ.ಮೀ. ಪ್ರಯಾಣಿಸಿ ಡಿಪೋಗೆ ಹಾಲು ಹಾಕಬೇಕಾದ ಅನಿವಾರ್ಯ ಈಗ ನಿವಾರಣೆಯಾಗಿದೆ.
– ಸುಬ್ಬಣ್ಣ ಶೆಟ್ಟಿ , ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ

ರೈತರ ಬಳಿಗೆ ತೆರಳಿ ಸಂಗ್ರಹಿಸುವುದರಿಂದ ಹಾಲಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಜತೆಗೆ ಹೆಚ್ಚು ಮಂದಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪ್ರಸ್ತುತ ಒಂದೂವರೆ ಲಕ್ಷ ಲೀ. ಹಾಲು ಕೊರತೆಯಿದ್ದು, ಅದನ್ನು ಸರಿದೂಗಿಸಲು ಇದೊಂದು ಉತ್ತಮ ಮಾರ್ಗೋಪಾಯ. ಮುಂದಿನ ದಿನಗಳಲ್ಲಿ ಉಳಿದ ಭಾಗಗಳಿಗೂ ವಿಸ್ತರಿಸಲಾಗುವುದು.
– ಸುಚರಿತ ಶೆಟ್ಟಿ , ಅಧ್ಯಕ್ಷರು, ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ

-ಸಂತೋಷ್‌ ಮೊಂತೇರೊ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.