ದಕ್ಷಿಣ ಕನ್ನಡ: ಪರಿಸ್ಥಿತಿ ಅವಲೋಕಿಸಿ ರಜೆ ನೀಡಲು ಡಿಸಿ ಆದೇಶ
ಜಿಲ್ಲೆಯಾದ್ಯಂತ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿಲ್ಲ
Team Udayavani, Jul 23, 2023, 10:59 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು , ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾರ್ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.