ಸಸಿಕಾಂತ್ ಸೆಂಥಿಲ್ ರಾಜೀನಾಮೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Team Udayavani, Sep 6, 2019, 1:11 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದು, ಇದನ್ನು ವಿರೋಧಿಸಿ ಐವನ್ ಡಿಸೋಜಾ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧರಿಸಿದೆ.
ಜಿಲ್ಲಾಧಿಕಾರಿಗಳ ರಾಜೀನಾಮೆ ವಿರೋಧಿಸಿ ಶುಕ್ರವಾರ ಮಧ್ಯಾಹ್ನ ಎರಡು ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಜಿಲ್ಲಾ ಕಾಂಗ್ರೆಸ್ ನಿರ್ಧರಿಸಿದೆ.
ಸಸಿಕಾಂತ್ ಸೆಂಥಿಲ್ ಅವರು 2017ರ ಅಕ್ಟೋಬರ್ ನಿಂದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದರು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರು ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.