ಪಕ್ಷಾತೀತವಾಗಿ ಕೆಲಸ ಮಾಡುವುದು ಪೊಲೀಸ್ ಇಲಾಖೆ,ಜಿಲ್ಲಾಡಳಿತದ ಜವಾಬ್ದಾರಿ: ದಿನೇಶ್ ಗುಂಡೂರಾವ್
Team Udayavani, Jun 11, 2023, 10:16 AM IST
ಮಂಗಳೂರು: ದ.ಕ ಜಿಲ್ಲೆ ಉಸ್ತುವಾರಿ ವಹಿಸಿರುವುದು ಹೆಮ್ಮೆಯ ವಿಚಾರ. ಯೂತ್ ಕಾಂಗ್ರೆಸ್ ನಲ್ಲಿ ಇರುವಾಗಿನಿಂದ ಜಿಲ್ಲೆಯ ಜೊತೆ ಸಂಬಂಧ ಇದೆ. ಸ್ಥಳೀಯರೇ ಉಸ್ತುವಾರಿ ಆದರೆ ಒಳ್ಳೆಯದು. ಆದರೆ ಖಾದರ್ ಅವರು ಸಭಾಪತಿ ಆಗಿರೋದರಿಂದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುತ್ತೇವೆ. ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕೆಲಸ ಮಾಡಬೇಕು. ಪಕ್ಷಾತೀತವಾಗಿ ಕೆಲಸ ಮಾಡುವುದು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ಜವಾಬ್ದಾರಿ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇದನ್ನೂ ಓದಿ:Mansoon Season; ಮಳೆಗಾಲದಲ್ಲಿ ಯಾವ ಆಹಾರ ಆರೋಗ್ಯಕ್ಕೆ ಒಳ್ಳೆಯದು…
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರ ಪಡೆದು ಜಿಲ್ಲೆಯ ಅಭಿವೃದ್ಧಿ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಅಭಿವೃದ್ಧಿ ಕೆಲಸ ಆಗುವುದಿಲ್ಲ. ಜಿಲ್ಲಾಡಳಿತ ಸದ್ಯ ಮಳೆಗಾಲ ಎದುರಿಸಲು ಸಜ್ಜಾಗಬೇಕು. ಅದಕ್ಕೆ ಬೇಕಾದ ಎಲ್ಲಾ ಸಹಕಾರ ಸರಕಾರದಿಂದ ನೀಡಲಾಗುತ್ತದೆ. ಮುಂದಿನ ವಾರ ಜಿಲ್ಲೆಗೆ ಬಂದು ಎಲ್ಲಾ ಜನಪ್ರತಿನಿಧಿ, ಅಧಿಕಾರಿಗಳ ಜತೆಗೆ ಪ್ರಗತಿಪರಿಶೀಲನೆ ಸಭೆ ಕರೆಯುತ್ತೇನೆ ಎಂದು ಹೇಳಿದರು.
ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳದ್ದೇ ಪ್ರಾಬಲ್ಯವಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣ ನಾವು ಘೋಷಣೆ ಮಾಡಿದಾಗ ಈ ಯೋಜನೆ ಆಗುತ್ತಾ ಇಲ್ವಾ ಎಂದು ಕೇಳಿದ್ದರು. ಕಾಂಗ್ರೆಸ್ ಸುಮ್ಮನೆ ಘೋಷಣೆ ಮಾಡುತ್ತಿದೆ ಎಂದು ಹೇಳಿದ್ದರು. ಆದರೆ ಸರಕಾರ ನುಡಿದಂತೆ ನಡೆದಿದೆ. ಖಾಸಗಿ ಗೆ ಈ ಯೋಜನೆ ವಿಸ್ತೀರ್ಣ ಮಾಡಲು ಆಗಲ್ಲ. ಈ ಯೋಜನೆ ಸರ್ಕಾರಿ ಬಸ್ ಗಳಿಗೆ ಮಾತ್ರ ಸಿಮೀತವಾಗಿದೆ. ಬರೀ ಮಂಗಳೂರಿಗೆ ಖಾಸಗಿ ಬಸ್ ಗೆ ಫ್ರೀ ಕೊಡೋಕೆ ಆಗಲ್ಲ. ವಿಸ್ತೀರ್ಣ ಮಾಡಿದರೆ ಇಡೀ ಕರ್ನಾಟಕಕ್ಕೆ ನೀಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ