ಅನುದಾನ ಸದ್ಬಳಕೆ: ದ.ಕ. ಆರೋಗ್ಯ ಇಲಾಖೆ ಮುಂದು

ಸತತ 2 ವರ್ಷಗಳಿಂದ ಸ್ಥಾನ ; ರಾಮನಗರ ದ್ವಿತೀಯ ; ಕೊನೇ ಸ್ಥಾನದಲ್ಲಿ ಬಳ್ಳಾರಿ

Team Udayavani, Oct 25, 2019, 7:00 AM IST

Health-and-Family-Welfare-Department-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಇಲಾಖೆಗೆ ನೀಡುವ ಅನುದಾನದ ಸದ್ಬಳಕೆಯಲ್ಲಿ ಸತತ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆ 2ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದು, ಈ ವರ್ಷಾರ್ಧದಲ್ಲಿ ಮೊದಲ ಸ್ಥಾನದಲ್ಲಿದೆ.

2017-18ನೇ ಸಾಲಿನಲ್ಲಿ ದ.ಕ. ಜಿಲ್ಲಾ ಆರೋಗ್ಯ ಇಲಾಖೆಗೆ 28.56 ಕೋ. ರೂ. ಬಿಡುಗಡೆಯಾಗಿದ್ದು, 25.98 ಕೋ. ರೂ. ಬಳಕೆ ಮಾಡಿಕೊಂಡು ಶೇ.91ರಷ್ಟು ಗುರಿ ಸಾಧಿಸಿದೆ. 2018-19ನೇ ಸಾಲಿನ 36.70 ಕೋ.ರೂ.ಗಳಲ್ಲಿ 31.3 ಕೋಟಿ ರೂ.ಗಳು ವಿನಿಯೋಗವಾಗಿ ಶೇ.85ರಷ್ಟು ಗುರಿ ಸಾಧನೆಯಾಗಿದೆ.

ಈ ಎರಡೂ ವರ್ಷಗಳಲ್ಲಿ ಕ್ರಮವಾಗಿ ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿದ್ದವು. 2019-20ನೇ ಸಾಲಿನ ಮೊದಲ 6 ತಿಂಗಳಲ್ಲಿ ದಕ್ಷಿಣ ಕನ್ನಡವು ಅನುದಾನ ಸದ್ಬಳಕೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಸ್ಥಾನವನ್ನು ವರ್ಷಪೂರ್ತಿ ಕಾಯ್ದುಕೊಳ್ಳಲು ಪಣ ತೊಟ್ಟಿದೆ. ಮೊದಲ ಸ್ಥಾನದಲ್ಲಿದ್ದರೂ ಬಾಕಿ ಮೊತ್ತವನ್ನು ತತ್‌ಕ್ಷಣವೇ ಸಮರ್ಪಕವಾಗಿ ವಿನಿಯೋಗಿಸಲು ಸಚಿವರು ದ.ಕ. ಆರೋಗ್ಯ ಇಲಾಖೆಗೆ ತಾಕೀತು ಮಾಡಿದ್ದಾರೆ.

9ನೇ ಸ್ಥಾನದಲ್ಲಿ ಉಡುಪಿ
2019-20ನೇ ಸಾಲಿನಲ್ಲಿ ದ.ಕ. ಜಿಲ್ಲೆಗೆ ಒಟ್ಟು 36.45 ಕೋ.ರೂ. ಅನುದಾನ ಅನುಮೋದನೆಗೊಂಡಿದ್ದು, ಈಗಾಗಲೇ 14.58 ಕೋಟಿ ರೂ. ಖರ್ಚಾಗಿದೆ. ಅನುಮೋದಿತ 21.86 ಕೋ.ರೂ.ಗಳ ಪೈಕಿ 8.59 ಕೋ.ರೂ. ಬಳಕೆ ಮಾಡುವ ಮೂಲಕ ರಾಮನಗರ ಎರಡನೇ ಸ್ಥಾನದಲ್ಲಿದೆ. 26 ಕೋ. ರೂ. ಪೈಕಿ 10 ಕೋ.ರೂ.ಗಳನ್ನು ಬಳಸಿ ಉಡುಪಿ 9ನೇ ಸ್ಥಾನದಲ್ಲಿದೆ. ಅನುದಾನದ ಸದ್ಬಳಕೆಯಲ್ಲಿ ವಿಫಲವಾದ ಎಲ್ಲ 30 ಜಿಲ್ಲೆ ಮತ್ತು ಬಿಬಿಎಂಪಿಗೆ ಆರೋಗ್ಯ ಸಚಿವರು ಮೂರು ತಿಂಗಳ ಗಡುವು ನೀಡಿದ್ದಾರೆ.

ಅನುದಾನ ಸದ್ವಿನಿಯೋಗ
ವೇತನ, ಆರೋಗ್ಯ ಕೇಂದ್ರಗಳಿಗೆ ಮುಕ್ತ ನಿಧಿ ಅನುದಾನ, ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಯೋಜನೆ, ರಾಷ್ಟ್ರೀಯ ಔಷಧ ಅನುದಾನ, ಲ್ಯಾಬ್‌ಗಳಲ್ಲಿ ಉಚಿತ ಸೇವೆ, ಸಿಬಂದಿ ತರಬೇತಿ, ತಾಯಿ ಮಕ್ಕಳ ಅಭಿವೃದ್ಧಿ ಸಂಬಂಧಿ ಸೇರಿ ದಂತೆ ವಿವಿಧ ಕಾರ್ಯಕ್ರಮಗಳಿಗೆ ಈ ಅನುದಾನವನ್ನು ಬಳಕೆ ಮಾಡಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಗ್ಯ ಸಚಿವರ ಜಿಲ್ಲೆಗೆ ಕೊನೆ ಸ್ಥಾನ
ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಾದ ಬಳ್ಳಾರಿ ಅನುದಾನ ಸದ್ಬಳಕೆಯಲ್ಲಿ ಸದ್ಯ ಕೊನೆಯ ಸ್ಥಾನದಲ್ಲಿದೆ. ಮುಂದಿನ ಆರು ತಿಂಗಳುಗಳಲ್ಲಿ ಹೆಚ್ಚು ಅನುದಾನ ಬಳಕೆ ಮಾಡಿ ತನ್ನ ಜಿಲ್ಲೆಯಲ್ಲಿ ಪರಿಣಾಮಕಾರಿ ಆರೋಗ್ಯ ಸೇವೆ ನೀಡುವಂತೆ ಮಾಡುವ ಸವಾಲು ಆರೋಗ್ಯ ಸಚಿವರಿಗಿದೆ. ಅನುಮೋದಿತ 66.63 ಕೋ.ರೂ. ಪೈಕಿ 16.32 ಕೋ.ರೂ.ಗಳನ್ನು ಬಳ್ಳಾರಿ ಜಿಲ್ಲಾ ಆರೋಗ್ಯ ಇಲಾಖೆ ಬಳಸಿದೆ.

400 ಕೋ.ರೂ. ಬಾಕಿ!
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ ಆರೋಗ್ಯ ಇಲಾಖೆಗೆ 2019-20ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಒಟ್ಟು ಅನುದಾನದ ಪೈಕಿ ಸುಮಾರು 400 ಕೋ.ರೂ. ಬಳಕೆಯಾಗಿಲ್ಲ. ಬಳಕೆ ಮಾಡದೆ ಇದ್ದಲ್ಲಿ ಮುಂದಿನ ಬಾರಿ ಅನುದಾನ ಕೇಳುವುದು ಕಷ್ಟವಾಗುತ್ತದೆ. ದ.ಕ. ಜಿಲ್ಲೆಯವರು ಇತರರಿಗಿಂತ ಹೆಚ್ಚು ಖರ್ಚು ಮಾಡಿದ್ದು, ಮೊದಲ ರ್‍ಯಾಂಕಿಂಗ್‌ ನೀಡಲಾಗಿದೆ. ಆದರೂ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಹಣ ಖರ್ಚಾಗದೆ ಬಾಕಿಯಿದ್ದು, ಮುಂದಿನ ಮೂರು ತಿಂಗಳೊಳಗೆ ವಿನಿಯೋಗಿಸುವಂತೆ ಸೂಚಿಸಲಾಗಿದೆ ಎಂದು ಸಚಿವ ಶ್ರೀರಾಮುಲು “ಉದಯವಾಣಿ’ಗೆ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಅನುದಾನ ಸದ್ಬಳಕೆಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ ಜಿಲ್ಲೆಗಳಲ್ಲಿಯೂ ಶೇ. 100 ಸಾಧನೆ ಆಗಿಲ್ಲದ ಕಾರಣ ಒಟ್ಟಾರೆ ಈ ಯೋಜನೆ ವಿನಿಯೋಗದಲ್ಲಿ ವಿಫಲವಾಗಿದೆ. ಬಳ್ಳಾರಿ ಸಹಿತ ಎಲ್ಲ ಜಿಲ್ಲೆಗಳ ಆರೋಗ್ಯಾಧಿಕಾರಿಗಳಿಗೆ ಮೂರು ತಿಂಗಳ ಟಾರ್ಗೆಟ್‌ ನೀಡಲಾಗಿದೆ. ಇಲ್ಲವಾದಲ್ಲಿ ಆಯಾ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.
– ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.