ದ.ಕನ್ನಡ : ಶೇಕಡವಾರು ಮತದಾನದಲ್ಲಿ ಏರಿಕೆ


Team Udayavani, May 14, 2018, 11:20 AM IST

election.jpg

ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.77.56 ಮತದಾನ ದಾಖಲಾಗಿದ್ದು, ಉತ್ತಮ ನಿರ್ವಹಣೆ ತೋರಿದೆ. ಕಳೆದ ಬಾರಿಗೆ ಹೋಲಿಸಿದರೆ ಒಟ್ಟು ಮತದಾನ ಪ್ರಮಾಣದಲ್ಲಿ ಶೇಕಡವಾರು 3.25 ಹೆಚ್ಚಳವಾಗಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಒಟ್ಟು ಶೇ.74.48 ಮತದಾನವಾಗಿತ್ತು.

ಜಿಲ್ಲೆಯಲ್ಲಿ ಈ ಬಾರಿ ಗರಿಷ್ಠ ಮತದಾನವಾಗಬೇಕು ಎಂಬ ನೆಲೆಯಲ್ಲಿ ಜಿಲ್ಲಾಡಳಿತ ಚುನಾವಣೆಗೆ ಕೆಲವು ತಿಂಗಳ ಮೊದಲೇ ಇದಕ್ಕೆ ಪೂರಕವಾಗಿ ಪ್ರಕ್ರಿಯೆಗಳನ್ನು ಆರಂಭಿಸಿತ್ತು. ಸ್ವೀಪ್‌ ಮೂಲಕ ಜಿಲ್ಲೆಯಾದ್ಯಂತ ಮತದಾರರಲ್ಲಿ ಅರಿವು ಕಾರ್ಯಕ್ರಮಗಳನ್ನು ವ್ಯಾಪಕವಾಗಿ ನಡೆಸಿತ್ತು.  

ಜಿಲ್ಲೆಯ ಒಟ್ಟು 17,11,848 ಅರ್ಹ ಮತದಾರರಲ್ಲಿ 13,27,794 ಮಂದಿ ಮತ ಚಲಾಯಿಸಿದ್ದಾರೆ. 2013ರ ಚುನಾವಣೆಯಲ್ಲಿ ಒಟ್ಟು 15,01,024 ಮತದಾರರ ಪೈಕಿ 11,18,025 ಮಂದಿ ಮತ ಚಲಾಯಿಸಿದ್ದರು.  

ಕ್ಷೇತ್ರವಾರು ಹೆಚ್ಚಳ
ಬೆಳ್ತಂಗಡಿಯಲ್ಲಿ ಒಟ್ಟು 2,18,880 ಮತದಾರರಲ್ಲಿ 1,78,162 ಮತದಾರರು ಮತ ಚಲಾಯಿಸಿದ್ದು ಶೇ.81.40 ಮತದಾನವಾಗಿದೆ. ಮೂಡಬಿದಿರೆಯಲ್ಲಿ ಒಟ್ಟು 2,00,045 ಮತದಾರರಲ್ಲಿ 1,50,917 ಮತದಾರರು ಮತ ಚಲಾಯಿಸಿದ್ದು ಶೇ. 75.44 ಮತದಾನವಾಗಿದೆ. ಮಂಗಳೂರು ನಗರ ಉತ್ತರದಲ್ಲಿ 2,34,826 ಮತದಾರರಲ್ಲಿ 1,75,071 ಮತದಾರರು ಮತ ಚಲಾಯಿಸಿದ್ದು, ಶೇ. 74.55 ಮತದಾನ ದಾಖಲಾಗಿದೆ.  

ಮಂಗಳೂರು ದಕ್ಷಿಣದಲ್ಲಿ ಒಟ್ಟು 2,40,057 ಮತದಾರರ ಪೈಕಿ 1,61,969 ಮತದಾರರು ಮತ ಹಾಕಿದ್ದು ಶೇ.67.47 ಮತದಾನ ನಡೆದಿದೆ. ಮಂಗಳೂರು ಕ್ಷೇತ್ರದಲ್ಲಿ 1,95,735 ಮತದಾರರಲ್ಲಿ 1,48,229 ಮತದಾರರು ಮತ ಚಲಾಯಿಸಿದ್ದು ಶೇ.75.73 ಮತದಾನವಾಗಿದೆ.  

ಬಂಟ್ವಾಳದಲ್ಲಿ 2,21,735 ಮತದಾರರ ಪೈಕಿ 1,81,590 ಮಂದಿ ಮತ ಹಾಕಿದ್ದು, ಶೇ.81.89 ಮತದಾನವಾಗಿದೆ.  ಪುತೂರ‌ಲ್ಲಿ 2,01,884 ಮತದಾರರಲ್ಲಿ 1,64,938 ಮಂದಿ ಮತ ಚಲಾಯಿಸಿದ್ದು, ಶೇ. 81.70 ಮತದಾನ ದಾಖಲಾಗಿದೆ. ಸುಳ್ಯದಲ್ಲಿ 1,98,686 ಮತದಾರರಲ್ಲಿ 1,66,854 ಮಂದಿ ಮತ ಚಲಾಯಿಸಿದ್ದು ಶೇ. 83.98 ಮತದಾನ ಆಗಿದೆ.

ಈ ಬಾರಿಯೂ ಸುಳ್ಯ ಪ್ರಥಮ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲೂ ಗರಿಷ್ಠ ಮತದಾನದ ಮೂಲಕ ಸುಳ್ಯ ಕ್ಷೇತ್ರವು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಇಲ್ಲಿ ಈ ಬಾರಿ ಶೇ. 83.98 ಮತದಾನವಾಗಿದೆ. 2013ರ ವಿಧಾನಸಭಾ ಚುನಾವಣೆಯಲೂ ಶೇ. 80.63 ಮತದಾನ ಆಗುವ ಮೂಲಕ ಸುಳ್ಯ ಪ್ರಥಮ ಸ್ಥಾನ ಗಳಿಸಿತ್ತು.

ಜಿಲ್ಲೆಯಲ್ಲಿ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಉತ್ತಮ ಮತದಾನ ದಾಖಲಾಗಿದೆ. ಇದರ ಹಿಂದೆ ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬಂದಿಗಳ ಬಹುದೊಡ್ಡ ಶ್ರಮವಿದೆ. ಒಟ್ಟು ಚುನಾವಣೆ ಪ್ರಕ್ರಿಯೆ ಸುಗಮವಾಗಿ ನಡೆದಿರುವುದು ಸಂತಸ ತಂದಿದೆ.
– ಶಶಿಕಾಂತ್‌ ಸೆಂಥಿಲ್‌, ಜಿಲ್ಲಾ ಮುಖ್ಯ ಚುನಾವಣಾಧಿಕಾರಿ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.