ದಕ್ಷಿಣ ಕನ್ನಡ: 630 ಮಂದಿಯ ತಪಾಸಣೆ


Team Udayavani, Mar 21, 2020, 5:04 AM IST

ದಕ್ಷಿಣ ಕನ್ನಡ: 630 ಮಂದಿಯ ತಪಾಸಣೆ

ಮಂಗಳೂರು:ಕೋವಿಡ್‌ 19 ವೈರಸ್‌ ಹರಡದಂತೆ ತಡೆಯುವ ಸಲುವಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದ್ದು, ಶುಕ್ರವಾರ 630 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.

1,564 ಮಂದಿ ಈಗಾಗಲೇ ಮನೆಯಲ್ಲೇ ನಿಗಾದಲ್ಲಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 14 ಮಂದಿ ನಿಗಾದಲ್ಲಿದ್ದು, ವೆನ್ಲಾಕ್ ನಲ್ಲಿ ಯಾರೂ ಇಲ್ಲ. 10 ಮಂದಿ ಈಗಾಗಲೇ 28 ದಿನಗಳ ನಿಗಾ ಅವಧಿಯನ್ನು ಪೂರೈಸಿದ್ದು, ಆರೋಗ್ಯದಲ್ಲಿ ಚೇತರಿಕೆ ಉಂಟಾಗಿದೆ. 9 ಮಂದಿಯ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.

17 ಮಂದಿಯ ಗಂಟಲು ಸ್ರಾವ ಪರೀಕ್ಷಾ ವರದಿ ಲಭ್ಯವಾಗಿದ್ದು, ಯಾರಲ್ಲಿಯೂ ಕೋವಿಡ್‌ 19 ಸೋಂಕು ಪತ್ತೆಯಾಗಿಲ್ಲ. ಜ್ವರ, ಶೀತ, ಕೆಮ್ಮು ಮುಂತಾದ ಕಾರಣಗಳಿಂದ ಶುಕ್ರವಾರ ಒಟ್ಟು 5 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.

ಆನ್‌ಲೈನ್‌ ವ್ಯವಹಾರಕ್ಕೆ ಮನವಿ
ದ.ಕ. ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಮುಂದುವರಿದಿದ್ದು, ಬ್ಯಾಂಕ್‌, ಭವಿಷ್ಯನಿಧಿ ಕಚೇರಿಗಳಿಗೆ ಭೇಟಿ ನೀಡುವುದನ್ನು ಮುಂದೂಡಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ವ್ಯವಹಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಎಸ್‌ಎಂಎಸ್‌ ಸಂದೇಶ ರವಾನಿಸಿ ಕೋವಿಡ್‌ 19 ವೈರಸ್‌ ಭೀತಿ ಹಿನ್ನೆಲೆಯಲ್ಲಿ ಗ್ರಾಹಕರು ಬ್ಯಾಂಕಿಗೆ ಆಗಮಿಸುವುದನ್ನು ಸ್ವಲ್ಪ ದಿನಗಳ ಕಾಲ ಆದಷ್ಟು ಕಡಿಮೆ ಮಾಡಬೇಕು. ಡಿಜಿಟಲ್‌ ಬ್ಯಾಂಕಿಂಗ್‌ನ್ನೇ ಹೆಚ್ಚು ಬಳಸಬೇಕು ಎಂದು ಮನವಿ ಮಾಡಿವೆ.

ಭವಿಷ್ಯನಿಧಿ ಕಚೇರಿಗೂ ಸಾರ್ವಜನಿಕರು ಭೇಟಿ ನೀಡದಿರುವುದು ಉತ್ತಮ. ಆನ್‌ಲೈನ್‌ ಮುಖಾಂತರ ವ್ಯವಹಾರ ಮಾಡಿ ಸ್ವಲ್ಪ ದಿನ ಕಾಲ ಸಹಕರಿಸಬೇಕೆಂದು ತಿಳಿಸಲಾಗಿದೆ. ಎಲ್‌ಐಸಿ ಸಂಸ್ಥೆಯೂ ಎಲ್ಲ ಗ್ರಾಹಕರಿಗೆ ಸಂದೇಶ ರವಾನಿಸಿ ವೈಯಕ್ತಿಕ ಸ್ವತ್ಛತೆ ಕಾಪಾಡಲು ಮನವಿ ಮಾಡಿದೆ.

ನ್ಯಾಯಬೆಲೆ ಅಂಗಡಿ
ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಮಾ.22ರಂದು ಜಿಲ್ಲೆಯಲ್ಲಿ ಯಾವುದೇ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುವುದಿಲ್ಲ. ಈ ದಿನದ ಬದಲಾಗಿ ಮಾ.24ರಂದು ಎಲ್ಲ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

ವಿದೇಶಿಯರಿಗೆ ಲಾಡ್ಜ್ ಕೊರತೆ
ನಗರದಲ್ಲಿ ವಿದೇಶಿಯರಿಗೆ ಲಾಡ್ಜ್ಗಳಲ್ಲಿ ತಂಗಲು ಅವಕಾಶ ನೀಡುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಹಿಂದೆಯೇ ಮಂಗಳೂರಿಗೆ ಆಗಮಿಸಿದ್ದರೂ ಅವರಿಗೆ ರೂಮ್‌ ನೀಡಲು ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ ಅವರು ಲಾಡ್ಜ್ ಮಾಲಕ ಸಭೆ ನಡೆಸಿದರು.

ಪಾಸ್‌ಪೋರ್ಟ್‌ನ್ನು ತಪಾಸಣೆ ಮಾಡಬೇಕು. ಒಂದು ತಿಂಗಳ ಹಿಂದೆ ವಿದೇಶದಿಂದ ಆಗಮಿಸಿರುವವರಿಗೆ ಅವಕಾಶ ನೀಡಬೇಕು. 15 ದಿನಗಳ ಹಿಂದೆಯಷ್ಟೇ ಆಗಮಿಸಿದ್ದರೆ ಅಂತವರನ್ನು ಪರೀಕ್ಷೆಗೊಳಪಡಿಸಲು ಸೂಚಿಸಬೇಕು. ಅವರು ಒಪ್ಪದಿದ್ದರೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

ಸೆಲೂನ್‌, ಬ್ಯೂಟಿಪಾರ್ಲರ್‌ ಬಂದ್‌
ಶನಿವಾರದಿಂದಲೇ ಉಭಯ ಜಿಲ್ಲೆಗಳಲ್ಲಿ ಎಲ್ಲ ಬ್ಯೂಟಿಪಾರ್ಲರ್‌ ಮತ್ತು ಸೆಲೂನ್‌ಗಳು ತಾತ್ಕಾಲಿಕವಾಗಿ ಬಂದ್‌ ಆಗಲಿವೆ.

ಆರ್‌ಟಿಒ: ದೈನಂದಿನ ಸೇವೆ ಮೊಟಕು
ಮಂಗಳೂರು/ಉಡುಪಿ: ಕೋವಿಡ್‌ 19 ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕಚೇರಿಯಲ್ಲಿ ಜನದಟ್ಟನೆ ನಿವಾರಿಸುವುದು ಹಾಗೂ ವೈರಾಣು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು, ಪುತ್ತೂರು, ಉಡುಪಿ ಹಾಗೂ ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ದೈನಂದಿನ ಕೆಲಸ ಕಾರ್ಯಗಳನ್ನು ಮೊಟಕುಗೊಳಿಸಲಾಗಿದೆ.

ವಾಹನ ಚಾಲನಾ ಕಲಿಕಾ ಅನುಜ್ಞಾ ಪತ್ರ ನೀಡಿಕೆ ಸಂಪೂರ್ಣವಾಗಿ ನಿಬಂìಧಿಸಲಾಗಿದೆ. ಎಪ್ರಿಲ್‌ 15ರ ವರೆಗೆ ಸಿಂಧುತ್ವ ಹೊಂದಲಿರುವ ಕಲಿಕಾ ಚಾಲನಾ ಅನುಜ್ಞಾ ಪತ್ರಗಳ ಅಭ್ಯರ್ಥಿಗಳು ಮಾತ್ರ ಕಾಯಂ ಚಾಲನಾ ಅನುಜ್ಞಾ ಪತ್ರಗಳಿಗೆ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಮಾ. 20ರಿಂದ ಮುಂದಿನ ಆದೇಶದವರೆಗೆ ಯಾವುದೇ ಕಲಿಕಾ ಚಾಲನಾ ಅನುಜ್ಞಾ ಪತ್ರ ಮತ್ತು ಖಾಯಂ ಚಾಲನಾ ಅನುಜ್ಞಾ ಪತ್ರಗಳಿಗಾಗಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳನ್ನು ನಿಬಂìಧಿಸಲಾಗಿದೆ. ವಾಹನ ಚಾಲನಾ ಅನುಜ್ಞಾ ಪತ್ರದ ನವೀಕರಣ-ನಿರ್ಬಂಧವು ಅನ್ವಯಿಸುದಿಲ್ಲ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟನೆತಿಳಿಸಿದೆ.

ಮಂಗಳೂರು: ದ. ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ .ಪೊನ್ನುರಾಜ್‌ ಅವರು ಗುರುವಾರ ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರ ವೈದ್ಯಕೀಯ ತಪಾಸಣ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಜಿಲ್ಲಾ ಅರೋಗ್ಯಾಧಿಕಾರಿ ಡಾ|ರಾಜೇಶ್‌, ಮಂಗಳೂರು ಉಪವಿಭಾಗಾಧಿಕಾರಿ ಮದನ್‌ ಮೋಹನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.