ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ವೈಭವ

ಆಡಳಿತ ಣ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ

Team Udayavani, Nov 2, 2019, 3:35 AM IST

nov-15

ಮಹಾನಗರ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೌರವ ರಕ್ಷೆ ಸ್ವೀಕರಿಸಿದರು.

ಮಹಾನಗರ: ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ನಗರದ ನೆಹರೂ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು.

ಮಂಗಳೂರು ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನೀತಿಸಂಹಿತೆ ಜಾರಿಯಾಗಿರುವ ಕಾರಣದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಜತೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಭಾಷಣದಲ್ಲಿಯೂ ಸರಕಾರದ ಸಾಧನೆ-ಯೋಜನೆ, ಜಿಲ್ಲೆಯ ಅಭಿವೃದ್ಧಿ ಕಾಮಗಾರಿ ಸಂಬಂಧಿತ ಯಾವುದೇ ವಿಚಾರವನ್ನು ಉಲ್ಲೇಖೀಸಲಿಲ್ಲ.

ಎರಡು ದಿನಗಳಿಂದ ನಗರದಲ್ಲಿ ಭಾರೀ ಮಳೆ ಆಗುತ್ತಿದ್ದ ಕಾರಣದಿಂದ ನೆಹರೂ ಮೈದಾನದ ನಾಲ್ಕೂ ಸುತ್ತ ಶೀಟ್‌ ಹಾಕಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಮಾತ್ರ ಮಳೆ ಬಾರದೆ ಕಾರ್ಯಕ್ರಮ ಸಾಂಗವಾಗಿ ನಡೆಯಿತು. ಬೆಳಗ್ಗೆ 9.05ಕ್ಕೆ ನೆಹರೂ ಮೈದಾನದಲ್ಲಿ ರಾಜ್ಯದ ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ಮುಜರಾಯಿ ಖಾತೆಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದರು.

ಗಮನಸೆಳೆದ ಟ್ಯಾಬ್ಲೋ
ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜ್ಯೋತಿ ವೃತ್ತದಿಂದ ನೆಹರೂ ಮೈದಾನದ ವರೆಗೆ ಮೆರವಣಿಗೆ ನಡೆಯಿತು. ಮಲೇರಿಯಾ, ಡೆಂಗ್ಯೂ, ಮಂಗನ ಕಾಯಿಲೆ ನಿಯಂತ್ರಣ, ತಂಬಾಕು ನಿಯಂತ್ರಣದ ಬಗ್ಗೆ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಟ್ಯಾಬ್ಲೋ, ದ.ಕ. ಜಾನಪದ ಕಲೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ಟ್ಯಾಬ್ಲೋ, ಕರ್ನಾಟಕ ಕಲಾ ವೈಭವ ಸಾರುವ ಸಾರ್ವಜನಿಕ ಶಿಕ್ಷಣ ಇಲಾಖೆ ಟ್ಯಾಬ್ಲೋ, ಅಡಿಕೆಯಿಂದ ಶೃಂಗಾರಗೊಂಡ ಭುವನೇಶ್ವರಿಯ ಮೂರ್ತಿ ಇರುವ ತೋಟಗಾರಿಕಾ ಇಲಾಖೆಯ ಟ್ಯಾಬ್ಲೋ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೆರವಣಿಗೆ ತಂಡ, ತುಳು ಸಾಹಿತ್ಯ ಅಕಾಡೆಮಿಯ ಹುಲಿ ವೇಷ ಮೆರವಣಿಗೆ ತಂಡ, ಪ್ಲಾಸ್ಟಿಕ್‌ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಇಲಾಖೆಯ ಟ್ಯಾಬ್ಲೋ, ವನ್ಯಜೀವಿಗಳನ್ನು ಸಂರಕ್ಷಿಸುವ ಅರಣ್ಯ ಇಲಾಖೆಯ ಟ್ಯಾಬ್ಲೋ, ಹಿಂದೂ ಧಾರ್ಮಿಕ ದತ್ತಿ ಮತ್ತು ಉಂಬಳಿ ಇಲಾಖೆಯ ಮೆರವಣಿಗೆ ತಂಡ, ಸ್ವತ್ಛತೆಯನ್ನು ಸಾರುವ ನಗರಾಭಿವೃದ್ಧಿ ಇಲಾಖೆಯ ಟ್ಯಾಬ್ಲೋ, ಮೂಡಾ ನೇತೃತ್ವದ ಭುವನೇಶ್ವರಿ ಟ್ಯಾಬ್ಲೋ ಮೆರವಣಿಗೆಯಲ್ಲಿ ಜನರ ಗಮನಸೆಳೆಯಿತು.

ಮೈದಾನದಲ್ಲಿ ಸಾಂಸ್ಕೃತಿಕ ವೈಭವ
ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಕನ್ನಡ ನಾಡು ನುಡಿಯ ಅಸ್ಮಿತೆಗೆ ಸಂಬಂಧಿಸಿದ ಕಾರ್ಯಕ್ರಮ ಗಮನಸೆಳೆಯಿತು. ಡೊಂಗರಕೇರಿಯ ಕೆನರಾ ಆಂಗ್ಲಮಾಧ್ಯಮ ಶಾಲೆ, ಉರ್ವ ಸೈಂಟ್‌ ಅಲೋಶಿಯಸ್‌ ಆಂಗ್ಲ ಮಾಧ್ಯಮ ಶಾಲೆ, ಉರ್ವ ಪೊಂಪೈ ಪ್ರೌಢಶಾಲೆ, ಕುಂಜತ್ತಬೈಲ್‌ನ ನೊಬಲ್‌ ಆಂಗ್ಲ ಮಾಧ್ಯಮ ಶಾಲೆ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆಯಿತು.
ಮನಸೆಳೆದ ಪುಟಾಣಿಗಳ ಹುಲಿವೇಷ

ಕುಂಜತ್ತಬೈಲ್‌ನ ನೊಬಲ್‌ ಆಂ.ಮಾ. ಶಾಲೆಯ ಪುಟಾಣಿಗಳ ನೃತ್ಯದಲ್ಲಿ ಪುಟಾಣಿಗಳ ಹುಲಿವೇಷ ಕುಣಿತ ಎಲ್ಲರ ಗಮನಸೆಳೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಜಿಲ್ಲಾಡಳಿತದ ಅಧಿಕಾರಿಗಳು ಪುಟಾಣಿಗಳನ್ನು ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿ, ವಿಶೇಷ ನಗದು ಬಹುಮಾನ ನೀಡಿದರು.

ಮನಸೆಳೆದ ಪಥಸಂಚಲನ
ನೆಹರೂ ಮೈದಾನದಲ್ಲಿ ಆಕರ್ಷಕ ಕವಾಯತಿ ನಡೆಯಿತು. ವಿಟuಲ್‌ ಕೆ. ಶಿಂಧೆ ದಂಡನಾಯಕರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆ 7ನೇ ಬೆಟಾಲಿಯನ್‌, ಸಿಎಆರ್‌ ತುಕಡಿ, ಮಂಗಳೂರು ನಗರ ಮಹಿಳಾ ಪೊಲೀಸ್‌ ತುಕುಡಿ, ಗೃಹರಕ್ಷಕ ದಳ, ಪೊಲೀಸ್‌ ಬ್ಯಾಂಡ್‌ ಡಿ.ಎ.ಆರ್‌. ಮಂಗಳೂರು, ಕೆ.ಎಸ್‌ಆರ್‌.ಪಿ ಪೊಲೀಸ್‌ ಬ್ಯಾಂಡ್‌, ಕರ್ನಾಟಕ ಅಗ್ನಿಶಾಮಕದಳ ಮಂಗಳೂರು ಘಟಕ, ಎನ್‌.ಸಿ.ಸಿ. ಸೀನಿಯರ್‌, ಆರ್‌ಎಸ್‌ಪಿ ಹುಡುಗಿಯರು, ಮೂಡುಶೆಡ್ಡೆ ಸರಕಾರಿ ಪ್ರೌಢಶಾಲೆಯ ಭಾರತ್‌ ಸೇವಾದಳ, ಆರ್‌ಎಸ್‌ಪಿ ಹುಡುಗರ ತಂಡ, ಎನ್‌ಸಿಸಿ ಏರ್‌ವಿಂಗ್‌ ಜ್ಯೂನಿಯರ್‌, ಬಲ್ಮಠ ಮಹಿಳಾ ಪಿಯು ಕಾಲೇಜಿನ ಭಾರತ್‌ ಸೇವಾದಳ ಸೀನಿಯರ್‌ ತಂಡ ಭಾಗವಹಿಸಿತ್ತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.