Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Team Udayavani, Mar 27, 2024, 10:00 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಿನ ಪರಿಸ್ಥಿತಿ ನೋಡಿದರೆ ಕುಡಿಯುವ ನೀರನ್ನು ರೇಷನಿಂಗ್ ಮಾಡುವ ಸ್ಥಿತಿ ಎದುರಾಗದು. ನೇತ್ರಾವತಿ ನದಿಯ ಮೂರು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ತೃಪ್ತಿದಾಯಕವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಗಾರು ಯಾವಾಗ ಜಿಲ್ಲೆಗೆ ಬರುವುದೋ ಗೊತ್ತಿಲ್ಲ, ಹಾಗಿದ್ದರೂ ಸದ್ಯದ ಮಟ್ಟಿಗೆ ಸಮಸ್ಯೆ ಕಾಣುತ್ತಿಲ್ಲ ಎಂದರು.
ತುಂಬೆಯ ಅಣೆಕಟ್ಟಿನಲ್ಲಿ 5.48 ಮೀಟರ್, ಎಎಂಆರ್ ಅಣೆಕಟ್ಟಿನಲ್ಲಿ 17.6 ಮೀ, ಬಿಳಿಯೂರು ಅಣೆಕಟ್ಟಿನಲ್ಲಿ 1.95 ಮೀಟರ್ ನೀರು ಲಭ್ಯವಿದೆ. ತುಂಬೆ ಅಣೆಕಟ್ಟಿನ ಮಟ್ಟ 5ಕ್ಕೆ ಇಳಿದಾಗ ಎಎಂಆರ್ನಿಂದ ನೀರು ಬಿಡಲಾಗುವುದು, ಎಎಂಆರ್ನಲ್ಲಿ 16 ಮೀಟರ್ಗೆ ಬಂದಾಗ ಬಿಳಿಯೂರಿನಿಂದ ನೀರು ಬಿಡಲಾಗುವುದು. ಈಗಾಗಲೇ ಕೈಗಾರಿಕೆಗಳಿಗೆ ಕೊಡುವ ನೀರಿನ ಪ್ರಮಾಣವನ್ನು ಶೇ. 50ರಷ್ಟು ಕಡಿಮೆ ಮಾಡಲಾಗಿದೆ. ನಾಗರಿಕರೂ ಆದಷ್ಟೂ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸಿ ಸಹಕರಿಸಬೇಕು ಎಂದರು.
ಉಳ್ಳಾಲ ತಾಲೂಕಿನ ಉಳ್ಳಾಲ, ಸೋಮೇಶ್ವರ, ಕೋಟೆಕಾರು ಪಟ್ಟಣ ವ್ಯಾಪ್ತಿಯಲ್ಲಿ 10 ಟ್ಯಾಂಕರ್ಗಳಲ್ಲಿ ಹಾಗೂ ಕೊಣಾಜೆ, ನರಿಮೊಗರು, ಬಾಳೇಪುಣಿ, ಪಜೀರು, ಮಂಜನಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಟ್ಯಾಂಕರ್ಗಳಲ್ಲಿ ನೀರು ಪೂರೈಕೆ ನಡೆಯುತ್ತಿದೆ ಎಂದೂ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ