Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಮೊಳಕೆಯಲ್ಲೇ ಬಾಡಿದವು ಅರಳಬೇಕಿದ್ದ 5 ಜೀವಗಳು !

Team Udayavani, Apr 18, 2024, 6:55 AM IST

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಮಂಗಳೂರು: ಕಳೆದೊಂದು ವಾರದಲ್ಲಿ ದ.ಕ. ಜಿಲ್ಲೆಯಲ್ಲಿ 5 ಮಂದಿ ಹದಿಹರೆಯದವರು ಪ್ರಾಣ ಕಳೆದುಕೊಂಡಿದ್ದು ಹೆತ್ತವರಲ್ಲಿ ನೋವು ಮಡುಗಟ್ಟಿದೆ. ಇಬ್ಬರು ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಇಬ್ಬರು ವಿದ್ಯಾರ್ಥಿನಿಯರು, ಓರ್ವ ಯುವತಿ ದಿಢೀರ್‌ ಅಸೌಖ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಶಿರ್ತಾಡಿಯ ಹೈಸ್ಕೂಲ್‌ವೊಂದರ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಅಸೌಖ್ಯದಿಂದ ಎ.14ರಂದು ಮೃತಪಟ್ಟಿದ್ದಾರೆ. ಎ.16ರ ಮುಂಜಾವ ಮೂಲ್ಕಿಯ ಕಾಲೇಜೊಂದರ ವಿದ್ಯಾರ್ಥಿನಿ ಜುನಾ (19) ಹಾಸ್ಟೆಲ್‌ನಲ್ಲಿ ಅಸ್ವಸ್ಥಗೊಂಡು ಮೃತಪಟ್ಟರು. ಪಾಂಡೇಶ್ವರದ ಪಿಜಿಯಲ್ಲಿ ಉಳಿದುಕೊಂಡಿದ್ದ ದಂತ ವೈದ್ಯಕೀಯ ಪದವೀಧರೆ ಸ್ವಾತಿ ಶೆಟ್ಟಿ (24) ಅವರು ಎ.15ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನೋಡುವಾಗ ಮೃತಪಟ್ಟಿದ್ದರು.

ಪ್ರಾಣ ಕಸಿದ ಅಪಘಾತಗಳು
ಎ. 11ರಂದು ಬೆಳ್ಳಾರೆ-ಸವಣೂರು ರಸ್ತೆಯ ಪೆರವಾಜೆ ಬೋರಡ್ಕದ ಬಳಿ ಸ್ಕೂಟಿಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಎಸ್ಸೆಸೆಲ್ಸಿ ವಿದ್ಯಾರ್ಥಿ ಮಹಮ್ಮದ್‌ ರಾಝೀಕ್‌ (16) ಮೃತಪಟ್ಟಿದ್ದರು. ಎ.15ರಂದು ರಾತ್ರಿ ಮಂಗಳೂರಿನ ಅಡ್ಯಾರ್‌ನಲ್ಲಿ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವ್ಯೊ ಮಹೇಶ್‌ (20) ಮೃತಪಟ್ಟಿದ್ದಾರೆ.

ಕಳೆದ ಫೆ.28ರಂದು ಹಳೆಯಂಗಡಿ ಸಮೀಪ ನದಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ದಾರುಣ ಘಟನೆಯ ಕಹಿ ನೆನಪು ಮಾಸುವ ಹೊತ್ತಿನಲ್ಲಿ ಜಿಲ್ಲೆಯ ವಿವಿಧೆಡೆ ನಡೆದಿರುವ ಐವರು ಯುವಜನರ ದಿಢೀರ್‌ ಸಾವು ಸಾರ್ವಜನಿಕರಲ್ಲಿ ಕಳವಳವನ್ನುಂಟು ಮಾಡಿದೆ.

ಸ್ಪಷ್ಟ ಕಾರಣ ತಿಳಿದುಕೊಳ್ಳುತ್ತೇವೆ; ಆತಂಕ ಬೇಡ
ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು, ಓರ್ವ ಯುವ ವೈದ್ಯೆ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಈ ಪೈಕಿ ಶಿರ್ತಾಡಿಯ ಹೈಸ್ಕೂಲ್‌ನ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಕೆಲವು ದಿನ ಚಿಕಿತ್ಸೆ ಪಡೆದಿದ್ದರು. ಅವರಿಗೆ “ಆಟೋ ಇಮ್ಯುನೋ ಡಿಸೀಸ್‌’ ಇರುವುದು ಗೊತ್ತಾಗಿದೆ. ಅಂದರೆ ಇದನ್ನು “ದೇಹದಲ್ಲಿ ನಿರ್ದಿಷ್ಟ ಜೀವಕೋಶದ ವಿರುದ್ಧವೇ ಆ್ಯಂಟಿ ಬಾಡಿ ಉತ್ಪಾದನೆಯಾಗುವ ಸ್ಥಿತಿ’ ಎಂದು ಹೇಳಲಾಗುತ್ತದೆ. ಇದರಲ್ಲಿಯೂ ಹಲವು ವಿಧಗಳಿವೆ. ಕೆಲವೇ ಕೆಲವು ವಿಧದ ಸಮಸ್ಯೆಗಳಿಗೆ ಚಿಕಿತ್ಸೆ ಫ‌ಲಕಾರಿಯಾಗದೇ ಇರಬಹುದು. ಇದು ಅಪರೂಪದ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ವೈದ್ಯೆ ಸ್ವಾತಿ ಶೆಟ್ಟಿ ಅವರು ರಾತ್ರಿ ವಿಪರೀತ ತಲೆನೋವು ಎಂದು ಮನೆಯವರಿಗೆ ತಿಳಿಸಿದ್ದರು. ಮರುದಿನ ಮೃತಪಟ್ಟಿದ್ದರು. ಅವರಿಗೆ ಬೇರೇನಾದರೂ ಆರೋಗ್ಯ ಸಮಸ್ಯೆ ಇತ್ತೆ ಎಂಬ ಬಗ್ಗೆಯೂ ಮನೆಯವರಿಂದ ಪೂರ್ಣ ಮಾಹಿತಿ ಪಡೆಯುತ್ತೇವೆ. ಮುಲ್ಕಿಯ ಕಾಲೇಜಿನ ವಿದ್ಯಾರ್ಥಿನಿ ಜುನಾ ಅವರ ಸಾವಿಗೆ ಸ್ಪಷ್ಟ ಕಾರಣವೇನೆಂಬುದರ ಬಗ್ಗೆಯೂ ವರದಿ ಪಡೆದುಕೊಳ್ಳುತ್ತೇವೆ. ಹದಿಹರೆಯದವರು ಮೃತಪಟ್ಟಿರುವ ಘಟನೆ ಬಗ್ಗೆ ಆತಂಕ ಪಡಬೇಕಾದ ಅಗತ್ಯವಿಲ್ಲ.
– ಡಾ| ತಿಮ್ಮಯ್ಯ
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ,
ದ.ಕ. ಜಿಲ್ಲೆ

 

 

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.