ದ.ಕ., ಉಡುಪಿ: ಸಾಂಗವಾಗಿ ನಡೆದ ನೀಟ್‌


Team Udayavani, May 6, 2019, 6:14 AM IST

neet

ಮಂಗಳೂರು/ ಉಡುಪಿ: ಎಂಬಿಬಿಎಸ್‌ ಮತ್ತು ಬಿಡಿಎಸ್‌ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ 2019ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ರವಿವಾರ ಸುಗಮವಾಗಿ ನಡೆಯಿತು.

ದ.ಕ. ಜಿಲ್ಲೆಯಲ್ಲಿ ಮಂಗಳೂರಿನ ಸೈಂಟ್‌ ಅಲೋಶಿಯಸ್‌, ಶಾರದಾ ವಿದ್ಯಾಲಯ, ಕೆನರಾ ಪ್ರೌಢಶಾಲೆ, ಬಜಪೆ ಶ್ರೀದೇವಿ ಕಾಲೇಜು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಮಧ್ಯಾಹ್ನ 2ರಿಂದ 5ರ ವರೆಗೆ ಪರೀಕ್ಷೆ ನಡೆಯಿತು.

ಮಧ್ಯಾಹ್ನ 12ರೊಳಗೆ ಹಾಜರಿರು ವುದು ಕಡ್ಡಾಯವಾಗಿದ್ದ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿ ಗಳ ಉದ್ದನೆಯ ಕ್ಯೂ ಕಂಡುಬಂತು.

ಮಧ್ಯಾಹ್ನ 1.30ಕ್ಕೆ ಕೊಠಡಿಯ ಪ್ರವೇಶ ದ್ವಾರವನ್ನು ಬಂದ್‌ ಮಾಡಲಾ ಯಿತು. ಎಡ್ಮಿಟ್‌ ಕಾರ್ಡ್‌, ಗುರುತು ಚೀಟಿ ಕಡ್ಡಾಯವಾಗಿತ್ತು.

ನಿಯಮ ಪಾಲನೆ
ಅಭ್ಯರ್ಥಿಗಳು ತುಂಬು ತೋಳಿನ ಅಂಗಿ, ಶೂ ಧರಿಸುವುದಕ್ಕೆ ನಿಷೇಧ ವಿತ್ತು. ವಿದ್ಯಾರ್ಥಿನಿಯರೂ ಯಾವುದೇ ಆಭರಣ ತೊಡುವಂತಿರಲಿಲ್ಲ. ಈ ಬಗ್ಗೆ ಕಾಲೇಜಿನಲ್ಲಿಯೇ ಉಪನ್ಯಾಸಕರು ತಿಳಿಸಿದ್ದರಿಂದ ಗೊಂದಲಕ್ಕೆಡೆಯಾಗಲಿಲ್ಲ ಎಂದು ಪೋಷಕ ರೋರ್ವರು ತಿಳಿಸಿದರು.

ಸಂಚಾರ ದಟ್ಟಣೆ
ನಗರದ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ನೀಟ್‌ ಪರೀಕ್ಷೆ ಬರೆದ ಮಕ್ಕಳನ್ನು ಕರೆದೊಯ್ಯಲು ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳಲ್ಲಿ ಪೋಷಕರು ಆಗಮಿಸಿದ್ದರು. ಅಲ್ಲದೆ ಕಾರುಗಳನ್ನು ಕಿರಿದಾದ ರಸ್ತೆಗಳಲ್ಲಿಯೇ ಪಾರ್ಕಿಂಗ್‌
ಮಾಡಿದ್ದರಿಂದ ಸಂಜೆ 4.45ರಿಂದ 5ರ ಅವಧಿಯಲ್ಲಿ ಉಳಿದ ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು.

ಉಡುಪಿ: 2,673 ಹಾಜರು, 311 ಗೈರು
ಉಡುಪಿಯ ಪೂರ್ಣಪ್ರಜ್ಞ, ಕನ್ನರ್ಪಾಡಿಯ ಸೈಂಟ್‌ ಮೇರೀಸ್‌, ಮಣಿಪಾಲದ ಮಾಧವಕೃಪಾ, ಬ್ರಹ್ಮಾವರದ ಲಿಟ್ಲರಾಕ್‌, ಜಿ.ಎಂ. ವಿದ್ಯಾನಿಕೇತನ ಸಂಸ್ಥೆಗಳಲ್ಲಿ ಪರೀಕ್ಷೆ ನಡೆಯಿತು. 2,984 ವಿದ್ಯಾರ್ಥಿಗಳು ನೋಂದಾಯಿಸಿದ್ದು, 311 ಮಂದಿ ಗೈರುಹಾಜರಾಗಿದ್ದರು. ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಆ್ಯಂಬುಲೆನ್ಸ್‌ನಲ್ಲಿ ಬಂದು ಬರೆದಳು
ಉಡುಪಿ: ರಸ್ತೆ ಅವಘಡದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯೊಬ್ಬಳು ರವಿವಾರದ ನೀಟ್‌ ಪರೀಕ್ಷೆಗೆ ಆ್ಯಂಬುಲೆನ್ಸ್‌ನಲ್ಲಿ ಬಂದು ಉತ್ತರಿಸಿದ್ದಾಳೆ.
ಬ್ರಹ್ಮಾವರ ಸಮೀಪದ ಚೇರ್ಕಾಡಿ ಗ್ರಾಮದ ಮುಂಡಿRನಜೆಡ್ಡುವಿನಲ್ಲಿ ಮೇ 1ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೊನ್ನಾವರ ಮೂಲದ ಸುಚೇತಾ ಮತ್ತು ಪರ್ಕಳದ ಅನಘಾ ಗಾಯಗೊಂಡಿದ್ದರು. ಸುಚೇತಾ ಕಾಲಿನ ಮೂಳೆಗೆ, ಅನಘಾ ತಲೆಗೆ ಪೆಟ್ಟಾಗಿತ್ತು. ಅನಘಾ ಶನಿವಾರ ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಯವರ ಕಾರಿನಲ್ಲಿ ಮಣಿಪಾಲ ಮಾಧವಕೃಪಾ ಶಾಲೆಯಲ್ಲಿ ನಡೆದ ಪರೀಕ್ಷೆಗೆ ಹಾಜರಾದರು. ಸುಚೇತಾ ಅವರಿಗೆ ನಡೆಯಲು ಆಗುತ್ತಿರಲಿಲ್ಲ. ಅವರು ಪರೀಕ್ಷೆಗೆ ಬರೆಯಬೇಕೆಂದು ತಂದೆ, ಭಟ್ಕಳದ ಪ್ರೌಢ ಶಾಲೆಯ ಶಿಕ್ಷಕ ಸುರೇಶ ನಾಯಕ್‌ ಅವರು ವೈದ್ಯರಲ್ಲಿ ಮನವಿ ಮಾಡಿಕೊಂಡ ಮೇರೆಗೆ ವೈದ್ಯರು ಆ್ಯಂಬುಲೆನ್ಸ್‌ನಲ್ಲಿ ಕಳುಹಿಸಲು ಒಪ್ಪಿದರು. ಪರೀಕ್ಷೆ ಬರೆದ ಬಳಿಕ ಮರಳಿ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಾದರು. ಇವರಿಬ್ಬರೂ ಕುಂದಾಪುರ ಎಕ್ಸಲೆಂಟ್‌ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು.

ನೀಟ್‌ ಪರೀಕ್ಷೆ ಸುಲಭವಾಗಿತ್ತು. ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಬರೆದಿದ್ದೇನೆ. ಮುಂದೆ ವೈದ್ಯಕೀಯ ಕ್ಷೇತ್ರದಲ್ಲಿ ಮುಂದುವರಿಯುವ ಕನಸಿದೆ.
-ಮಂಥನ್‌, ಮಂಗಳೂರು

ಪರೀಕ್ಷೆ ಸುಲಭವಾಗಿತ್ತು. ಪರೀಕ್ಷಾ ಕೇಂದ್ರದವರು ಸಹಕಾರ ಕೊಟ್ಟರು.
ಬೆಡ್‌ನ‌ಲ್ಲಿ ಕುಳಿತುಕೊಂಡು ಪರೀಕ್ಷೆ ಬರೆದಿದ್ದೇನೆ.
– ಸುಚೇತಾ, ಉಡುಪಿ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.