
ದಕ್ಷಿಣಕನ್ನಡ: ಕಡಲ ಅಬ್ಬರ ಹೆಚ್ಚಾಗುವ ಸಾಧ್ಯತೆ
Team Udayavani, Mar 8, 2023, 7:30 AM IST

ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿ ಗಾಳಿಯ ಎಚ್ಚರಿಕೆಯ ಬೆನ್ನಲ್ಲೇ ಮಾ. 8ರಂದು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಮುನ್ಸೂಚನೆ ನೀಡಿದೆ.
ಬಿಸಿ ಗಾಳಿ ಹಿನ್ನೆಲೆಯಲ್ಲಿ ಮಾ. 8ರಂದು ರಾತ್ರಿಯವರೆಗೆ ಸಮುದ್ರ ತೀರದಲ್ಲಿ 1.5 ಮೀ.ನಿಂದ 2.3 ಮೀ.ವರೆಗೆ ಅಲೆಗಳ ಅಬ್ಬರ ಇರುವ ನಿರೀಕ್ಷೆ ಇದೆ.
ಕರಾವಳಿ ಭಾಗದಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ದಾಖಲಾಗಿತ್ತು. ಜಿಲ್ಲೆಯಲ್ಲಿ ದಿನವಿಡೀ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ