ಬಿರುಗಾಳಿ, ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬ: ಸುಳ್ಯ ಕತ್ತಲುಮಯ


Team Udayavani, May 21, 2018, 3:37 PM IST

21-may-18.jpg

ಸುಳ್ಯ : ಶನಿವಾರ ತಡರಾತ್ರಿ ಬೀಸಿದ ಗಾಳಿ ಮಳೆಯ ಅಬ್ಬರದ ಪರಿಣಾಮ ಸುಳ್ಯ 33 ಕೆವಿ ಸಬ್‌ ಸ್ಟೇಷನ್‌ ವ್ಯಾಪ್ತಿಯಿಂದ ಹೊರಡುವ ವಿದ್ಯುತ್‌ ಪೂರೈಕೆ ಮಾರ್ಗಗಳು ಪೂರ್ಣ ಪ್ರಮಾಣದಲ್ಲಿ ಸ್ಥಗಿತಗೊಂಡು ಹತ್ತಾರು ಗ್ರಾಮಗಳು ಕತ್ತಲಲ್ಲೆ ಕಾಲ ಕಳೆದವು. ಬರೋಬ್ಬರಿ 24 ತಾಸು ಮಿಕ್ಕಿ ವಿದ್ಯುತ್‌ ಇಲ್ಲದೆ, ದಿನವಿಡೀ ಪರದಾಡುವ ಪರಿಸ್ಥಿತಿ ಉಂಟಾಯಿತು.

ಸುಳ್ಯ ನಗರ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಮಡಪ್ಪಾಡಿ, ಮರ್ಕಂಜ, ಗುತ್ತಿಗಾರು, ದುಗಲಡ್ಕ, ದೇವಚಳ್ಳ, ನೆಲ್ಲೂರು ಕೆಮ್ರಾಜೆ, ಅರಂತೋಡು ಮೊದಲಾದ ಗ್ರಾಮಗಳಲ್ಲಿ ಶನಿವಾರ ತಡರಾತ್ರಿಯಿಂದ ರವಿವಾರ ದಿನಪೂರ್ತಿ ವಿದ್ಯುತ್‌ ಇರಲಿಲ್ಲ. ಹಲವು ಭಾಗದಲ್ಲಿ ಗಾಳಿ ಮಳೆಯಿಂದ ಉಂಟಾದ ತೊಂದರೆಯಿಂದ ಯಾವುದೇ ಫೀಡರ್‌ಗಳು ಕಾರ್ಯ ನಿರ್ವಹಿಸಲಿಲ್ಲ.

ಸುಳ್ಯ 33 ಕೆವಿ ಸಬ್‌ಸ್ಟೇಷನ್‌ ವ್ಯಾಪ್ತಿಯಲ್ಲಿ ನೂರಾರು ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿ ಉಂಟಾಗಿರುವುದು ವಿದ್ಯುತ್‌ ವ್ಯತಯಕ್ಕೆ ಕಾರಣವಾಗಿದೆ. ಹಲವೆಡೆ ಮರಗಳ ವಿದ್ಯುತ್‌ ಕಂಬ ಹಾಗೂ ಲೈನ್‌ ಮೇಲೆ ಬಿದ್ದಿದ್ದು, ಅದರ ತೆರವು ಕಾರ್ಯ ಆದ ಬಳಿಕ, ಹೊಸ ಕಂಬ ಅಳವಡಿಸಿ, ತಂತಿ ಎಳೆದು ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಿದೆ.

33 ಕೆವಿ ಸಬ್‌ಸ್ಟೇಷನ್‌ ಕಚೇರಿ ಬಳಿಯೇ ವಿದ್ಯುತ್‌ ಕಂಬ ಧರೆಗುರಳಿದೆ. ನಗರದ ನಾನಾ ಭಾಗಗಳಲ್ಲಿ ಸಾಲು-ಸಾಲು ಕಂಬಗಳು ಉರುಳಿವೆ. ಮೆಸ್ಕಾಂ ಸಿಬಂದಿ ಕಂಬ ಜೋಡಣೆ ಕಾರ್ಯದಲ್ಲಿ ನಿರತರಾಗಿದ್ದು, ಪೂರ್ಣ ಪ್ರಮಾಣದಲ್ಲಿ ಅಳವಡಿಕೆಗೆ ಸೋಮವಾರ ತನಕವು ಕಾಯಬೇಕಿದೆ. ಕಾಡು ಆವರಿತ ಪ್ರದೇಶಗಳಲ್ಲೂ ಕಂಬಗಳಿಗೆ ಹಾನಿ ಉಂಟಾಗಿರುವುದು ತತ್‌ಕ್ಷಣ ಜೋಡಣೆಗೆ ಸವಾಲೆನಿಸಿದೆ.

ರವಿವಾರ ಪೇಟೆಯಲ್ಲಿ ವ್ಯವಹಾರ ನೀರಸವಾಗಿತ್ತು. ವಿದ್ಯುತ್‌ ಇಲ್ಲದ ಪರಿಣಾಮ ಸಣ್ಣ ಪುಟ್ಟ ಉದ್ಯಮದಾರರು, ಹೋಟೆಲ್‌, ಬೇಕರಿ, ಜ್ಯೂಸ್‌ ಸೆಂಟರ್‌ ಮೊದಲಾದ ಅಂಗಡಿ ಮುಂಗಟ್ಟುಗಳಿಗೆ ತೊಂದರೆ ಉಂಟಾಯಿತು. ಗ್ರಾಮಾಂತರ ಪ್ರದೇಶದಲ್ಲಿಯೂ ರಾತ್ರಿ ವಿದ್ಯುತ್‌ ಇಲ್ಲದೆ ಜನರು ಪರದಾಡಿದರು. ಕೊಳವೆಬಾವಿ, ನಳ್ಳಿ ನೀರು ಆಶ್ರಯ ಹೊಂದಿರುವ ಮಂದಿಯೂ ವಿದ್ಯುತ್‌ ಅಭಾವದಿಂದ ಸಮಸ್ಯೆಗೊಳಗಾದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.