ಅಪಾಯಕಾರಿ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಕಂಬ


Team Udayavani, Jun 18, 2019, 5:15 AM IST

t-13

ಬಜಪೆ: ಇಲ್ಲಿನ ಪೇಟೆಯ ಫ‌ುಟ್‌ಪಾತ್‌ ಸಮೀಪದಲ್ಲೇ ಇರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಕಂಬ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಮಳೆಗಾಲದಲ್ಲಿ ಗಾಳಿ ಮಳೆಗೆ ವಿದ್ಯುತ್‌ ಅಪ ಘಾತ, ತಂತಿ ಕಡಿದು ಬೀಳುವ ಅಪಾಯ ಹೆಚ್ಚಾಗಿರುವುದರಿಂದ ಪಾದಚಾರಿಗಳ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತ ಕ್ರಮವಾಗಿ ಈ ಟ್ರಾನ್ಸ್‌ಫಾರ್ಮರ್‌ ಕಂಬವನ್ನು ಇಲ್ಲಿಂದ ಸ್ಥಳಾಂತರಿಸುವುದು ಉತ್ತಮ. ಇಲ್ಲವಾದರೆ ಕನಿಷ್ಠ ಸೂಕ್ತ ರಕ್ಷಣಾ ಬೇಲಿ ಅಳವಡಿಸಬೇಕಿದೆ.

ಬಜಪೆ ಪೇಟೆಯ ಚರಂಡಿ ಬದಿಯಲ್ಲೇ ಇರುವ ಈ ಟ್ರಾನ್ಸ್‌ಫಾರ್ಮರ್‌ ಕಂಬದ ಸಮೀಪದಿಂದಲೇ ಕಾನ್ವೆಂಟ್‌ ಮೂಲಕ ಮುರ ನಗರಕ್ಕೆ ಹೋಗುವ ರಸ್ತೆ ಇದೆ. ಅಲ್ಲದೇ ಇಲ್ಲಿ ರಾಜ್ಯ ಹೆದ್ದಾರಿ 67 ಕೂಡ ಹಾದು ಹೋಗಿದೆ. ಹೀಗಾಗಿ ಇಲ್ಲಿ ವಾಹನ, ಜನ ಸಂಚಾರ ಅಧಿಕವಾಗಿರುತ್ತದೆ.

ಹೆಚ್ಚು ಅಪಾಯಕಾರಿ
ಈ ಟ್ರಾನ್ಸ್‌ಫಾರ್ಮರ್‌ ಕಂಬದ ಕೆಳಗೆ ಜನರ ಓಡಾಟಕ್ಕೆ ಸಾಕಾಗುವಷ್ಟು ಜಾಗವಿದೆ. ಅಲ್ಲದೇ ಕೆಲವರು ವಾಹನಗಳನ್ನೂ ಇದರ ಸಮೀಪದಲ್ಲೇ ನಿಲ್ಲಿಸಿ ಹೋಗುತ್ತಾರೆ. ಫ‌ುಟ್‌ಪಾತ್‌ ಸಮೀಪದಲ್ಲೇ ಇರುವುದರಿಂದ ಶಾಲಾ ಮಕ್ಕಳು, ವಾಹನಗಳು ಇಲ್ಲೇ ನಿಲ್ಲುತ್ತವೆ. ರಸ್ತೆ ಕಿರಿದಾಗಿರುವುದರಿಂದ ಬೇರೆ ಜಾಗವೂ ಇಲ್ಲದೆ ಟ್ರಾನ್ಸ್‌ ಫಾರ್ಮರ್‌ನ ಕೆಳಗಿನಿಂದ ಸಂಚಾರ ಮಾಡುವ ಅನಿವಾರ್ಯತೆ ಪಾದಚಾರಿಗಳದ್ದು. ಅಲ್ಲದೇ ಮಳೆ, ಬಿಸಿಲಿಗೆ ಕೊಡೆ ಹಿಡಿದು ಕೊಂಡು ಹೋಗುವ ವೇಳೆ ಟ್ರಾನ್ಸ್‌ ಫಾರ್ಮರ್‌ ತಂತಿಗೆ ಸ್ಪರ್ಶವಾದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹೀಗಾಗಿ ಸುರಕ್ಷೆಯ ದೃಷ್ಟಿಯಿಂದ ಇದಕ್ಕೆ ಸೂಕ್ತ ರಕ್ಷಣಾ ಬೇಲಿ ಅಳವಡಿಸಲು ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

 ಜನರಿಂದ ವಿರೋಧ ಬಂದರೆ ಸಮಸ್ಯೆ
ಬಜಪೆ ಪೇಟೆಯ ರಸ್ತೆಯ ಬದಿ ಇರುವ ಟ್ರಾನ್ಸ್‌ಫಾರ್ಮರ್‌ ಕಂಬಕ್ಕೆ ರಕ್ಷಣಾ ಬೇಲಿಯನ್ನು ಶೀಘ್ರದಲ್ಲೇ ಹಾಕಲಾಗುವುದು. ಆದರೆ ಪೇಟೆಯ ರಸ್ತೆಯ ಬದಿಯಲ್ಲಿ ಇರುವುದರಿಂದ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗಿ ವಿರೋಧ ಬರಬಹುದು. ಹೆಚ್ಚಿನ ಟ್ರಾನ್ಸ್‌ಫಾರ್ಮರ್‌ ಇದ್ದಲ್ಲಿ ರಕ್ಷಣಾ ಬೇಲಿ ಹಾಕುವಾಗ ಖಾಸಗಿ ಜಾಗದವರ ವಿರೋಧ ಬಂದಿದೆ. ಇದರಿಂದ ಸಮಸ್ಯೆಯಾಗುತ್ತದೆ.
 - ಅರುಣ್‌, ಬಜಪೆ ಮೆಸ್ಕಾಂ ಅಧಿಕಾರಿ

 ಮೆಸ್ಕಾಂಗೆ ಮನವಿ ಮಾಡಲಾಗುವುದು
ಬಜಪೆ ಪೇಟೆಯ ರಾಜ್ಯ ಹೆದ್ದಾರಿಯ 67 ಹಾಗೂ ಕಾನ್ವೆಂಟ್‌ ರಸ್ತೆಯ ಬದಿಯಲ್ಲಿರುವ ಟ್ರಾನ್ಸ್‌ಫಾರ್ಮರ್‌ ಅಪಾಯಕಾರಿಯಾಗಿದ್ದು, ಇದನ್ನು ಸ್ಥಳಾಂತರ ಮಾಡುವ ಅಥವಾ ತಡೆ ಬೇಲಿ ಅಳ ವ ಡಿ ಸುವ ಬಗ್ಗೆ ಪಂಚಾಯತ್‌ ಸಭೆಯಲ್ಲಿ ನಿರ್ಣಯ ಕೈಗೊಂಡು ಮೆಸ್ಕಾಂ ಇಲಾಖೆಗೆ ಮನವಿ ಮಾಡಲಾಗುವುದು.
– ರೋಝಿ ಮಥಾಯಸ್‌,  ಅಧ್ಯಕ್ಷೆ, ಬಜಪೆ ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.