ದ್ವಿಚಕ್ರ ವಾಹನ ಸವಾರರ ಅಪಾಯಕಾರಿ ಸಂಚಾರ

ಪಾದಚಾರಿಗಳಿಗೆ ಆತಂಕ; ನಿರ್ಲಕ್ಷ್ಯದ ಚಾಲನೆಗೆ ಬೇಕಿದೆ "ಬ್ರೇಕ್‌'

Team Udayavani, Nov 10, 2021, 5:30 AM IST

ದ್ವಿಚಕ್ರ ವಾಹನ ಸವಾರರ ಅಪಾಯಕಾರಿ ಸಂಚಾರ

ಸಾಂದರ್ಭಿಕ ಚಿತ್ರ.

ಮಹಾನಗರ: ನಗರದಲ್ಲಿ ಲಾಕ್‌ಡೌನ್‌ ಅನಂತರ ದ್ವಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದಿದ್ದು, ಸಂಚಾರ ನಿಯಮಗಳ ಉಲ್ಲಂಘನೆ ಕೂಡ ಹೆಚ್ಚಾಗಿ ಕಂಡುಬರುತ್ತಿವೆ.

ದ್ವಿಚಕ್ರ ವಾಹನ ಸವಾರರು ಅತೀವೇಗ, ಅಜಾಗರೂಕತೆಯಿಂದ ವಾಹನ ಚಲಾ ಯಿಸುತ್ತಿರುವ ಪರಿಣಾಮ ಸ್ವತಃ ಅವರೇ ಅಪಾಯಕ್ಕೀಡಾಗುತ್ತಿರುವ ಜತೆಗೆ ಪಾದಚಾರಿ ಹಿರಿಯ ನಾಗರಿಕರು ಸಹಿತ ಇತರ ಸಾರ್ವಜನಿಕರಿಗೂ ಸಂಕಷ್ಟ ತಂದೊಡ್ಡುತ್ತಿದ್ದಾರೆ. ಪೊಲೀಸರು ವಾಹನಗಳ ದಾಖಲೆಗಳನ್ನು ಪರಿಶೀಲಿಸಿ ದಂಡ ವಿಧಿಸುವುದು ಮಾತ್ರವಲ್ಲದೆ ನಿರ್ಲಕ್ಷ್ಯದಿಂದ ವಾಹನ ಚಲಾಯಿ ಸುವವರನ್ನು ಕೂಡ ತಡೆದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.

ನಗರದ ಪ್ರಮುಖ ರಸ್ತೆಗಳು, ಒಳ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಅತೀ ವೇಗದಲ್ಲಿ ಚಲಾಯಿಸಲಾಗುತ್ತಿದೆ. ಶಾರ್ಟ್‌ಕಟ್‌ ದಾರಿಗಳಲ್ಲಿಯೂ ಮನಬಂದಂತೆ ವಾಹನ ಓಡಿಸಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಕೆಲವೆಡೆ ವಿರುದ್ಧ ದಿಕ್ಕಿನಲ್ಲಿ ದ್ವಿಚಕ್ರವಾಹನಗಳನ್ನು ನುಗ್ಗಿಸಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಆತಂಕ ಸೃಷ್ಟಿಸುವ ಫುಡ್ ಡೆಲಿವರಿ ಬಾಯ್ಸ
ಕೆಲವು ಆನ್‌ಲೈನ್‌ ಫುಡ್ ಡೆಲಿವರಿ ಸಂಸ್ಥೆಗಳ ಸಿಬಂದಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಸವಾರಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ಅತ್ಯಂತ ವೇಗವಾಗಿ ಅಜಾಗರೂಕತೆಯಿಂದ ವಾಹನ ಚಲಾಯಿ ಸುವುದು, ವಾಹನ ಚಾಲನೆ ವೇಳೆ ಮೊಬೈಲ್‌ ಬಳಕೆ ಮಾಡು ತ್ತಿರುವುದು, ವನ್‌ವೇಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚರಿಸುವುದು, ಶಾರ್ಟ್‌ಕಟ್‌ ರಸ್ತೆಗಳಲ್ಲಿ ಅಪಾಯ ಕಾರಿಯಾಗಿ ಚಲಿಸುವುದು ಸಹಿತ ವಿವಿಧ ರೀತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ:ಮೈ ನವಿರೇಳಿಸಿದ ಹೋರಿ ಬೆದರಿಸುವ ಸ್ಪರ್ಧೆ

ಕೆಲವರು ದ್ವಿಚಕ್ರ ವಾಹನದ ಮುಂಭಾಗ ದಲ್ಲಿಯೇ ಮೊಬೈಲ್‌ ಅನ್ನು ಫಿಕ್ಸ್‌ ಮಾಡಿಟ್ಟುಕೊಂಡು ನೋಡುತ್ತಿರುತ್ತಾರೆ. ಇನ್ನು ಕೆಲವು ಮಂದಿ ಒಂದು ಕೈಯಲ್ಲಿ ವಾಹನ ಓಡಿಸುತ್ತಾ ಇನ್ನೊಂದು ಕೈಯಲ್ಲಿ ಮೊಬೈಲ್‌ ಆಪರೇಟ್‌ ಮಾಡುತ್ತಿರುತ್ತಾರೆ. ನಿಗದಿತ ಅವಧಿಯಲ್ಲಿ ಗ್ರಾಹಕರಿಗೆ ಆರ್ಡರ್‌ ಅನ್ನು ತಲುಪಿಸುವ ಹೊಣೆ ಇರುವುದರಿಂದ ವಾಹನವನ್ನು ವೇಗವಾಗಿ ಓಡಿಸುತ್ತಾರೆ. ಒಂದುವೇಳೆ ನಿಗದಿತ ಅವಧಿಯಲ್ಲಿ ತಲುಪದಿದ್ದರೆ ಡೆಲಿವರಿ ಬಾಯ್ಸಗೆ ದುಡಿದ ಹಣವೂ ಸಿಗುವುದಿಲ್ಲ. ಹಾಗಾಗಿ ಸಾಧ್ಯವಾದಷ್ಟು ಒಳದಾರಿಗಳನ್ನು ಬಳಕೆ ಮಾಡುತ್ತಾರೆ ಎಂಬುದು ಸಾರ್ವಜನಿಕರ ದೂರು.

ಮತ್ತೆ ಹೆಚ್ಚಳ ಆತಂಕ
ಈಗಾಗಲೇ ಹಲವೆಡೆ ಯುವಕರು ಜಾಲಿ ರೈಡ್‌ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದೀಗ ಕಾಲೇಜು ಗಳು ಆರಂಭಗೊಳ್ಳುತ್ತಿದ್ದು, ನಗರದಲ್ಲಿ ಸಹಜವಾಗಿಯೇ ಯುವಜನತೆಯ ಬೈಕ್‌, ಸ್ಕೂಟರ್‌ ಸವಾರಿ ಇನ್ನಷ್ಟು ಹೆಚ್ಚಲಿದೆ. ಬೆಳಗ್ಗೆ, ಸಂಜೆಯ ಅವಧಿಯಲ್ಲಿ ವಾಹನದಟ್ಟಣೆ ಉಂಟಾಗುವ ಸಂದರ್ಭ ದ್ವಿಚಕ್ರ ಸವಾರರು ಫ‌ುಟ್‌ಪಾತ್‌ ಏರಿ ಸಂಚರಿಸುತ್ತಿರುವುದು ಕೂಡ ಕಂಡುಬಂದಿದ್ದು, ಇಂತಹ ಚಾಲಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಸಮಸ್ಯೆ ಎದುರಿಸುವಂತಾಗಲಿದೆ.

ನಿಗಾ ಹೆಚ್ಚಳ
ಅತೀ ವೇಗ ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವವರ ಮೇಲೆ ಈಗಾಗಲೇ ಅಗತ್ಯ ಕ್ರಮ ತೆಗೆದು ಕೊಳ್ಳಲಾಗುತ್ತಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲವು ಫುಡ್ ಡೆಲಿವರಿ ಬಾಯ್ಸಗಳ ದ್ವಿಚಕ್ರ ವಾಹನ ಸವಾರಿ ಬಗ್ಗೆ ಸಾರ್ವಜನಿಕರು ದೂರಿದ್ದರು. ಈಗ ಮತ್ತೆ ದೂರುಗಳು ಕೇಳಿಬಂದಿವೆ. ಇಂತಹ ವಾಹನ ಸವಾರರ ಮೇಲೆ ವಿಶೇಷ ನಿಗಾ ಇಡಲಾಗುವುದು.
-ನಟರಾಜ್‌ ಎಂ.ಎ., ಎಸಿಪಿ ಮಂಗಳೂರು ಸಂಚಾರ ವಿಭಾಗ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.