ಮಾಣಿ – ಮೈಸೂರು ಹೆದ್ದಾರಿ: ಜೀವಭಯದಲ್ಲೇ ಸವಾರಿ


Team Udayavani, Jul 7, 2018, 2:00 AM IST

road-damage-6-7.jpg

ಕಬಕ: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಅಲ್ಲಲ್ಲಿ ಹೊಂಡಗಳು ಉಂಟಾಗಿದ್ದು, ವಾಹನ ಸವಾರರು ಜೀವ ಭಯದಿಂದಲೇ ಓಡಾಡುವಂತಾಗಿದೆ. ತಿರುವುಗಳಲ್ಲೂ ಹಲವು ಮರಣ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ಬರುವ ಸಂದರ್ಭದಲ್ಲಿ ಚಾಲಕರು, ಸವಾರರ ಗಮನಕ್ಕೇ ಬರುವುದಿಲ್ಲ. ಇಡ್ಕಿದು ಗ್ರಾಮದ ಮಿತ್ತೂರು ತಿರುವಿನಲ್ಲಿ ರಸ್ತೆಯೇ ಇಲ್ಲ. ಗುಂಡಿಗಳಲ್ಲೇ ಪರದಾಡುತ್ತ ಸವಾರಿ ಮಾಡಬೇಕಿದೆ. ಹೊಂಡಗಳಲ್ಲಿ ದ್ವಿಚಕ್ರ ವಾಹನ ಸವಾರರು ಮುಗ್ಗರಿಸುವಾಗ ದೊಡ್ಡ ವಾಹನಗಳು ಹಿಂದಿನಿಂದ ಬಂದು ಢಿಕ್ಕಿ ಹೊಡೆಯುತ್ತಿವೆ. ಕುವೆತಿಲ ತಿರುವಿನಲ್ಲಿ ಇತ್ತೀಚೆಗೆ ಲಾರಿ ಢಿಕ್ಕಿಯಾಗಿ ಬೈಕ್‌ ಸವಾರನ ಪಾದವೇ ತುಂಡಾಗಿದೆ. ಮಿತ್ತೂರು ಸಮೀಪ ಲಾರಿ ಢಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇಂತಹ ಅಪಘಾತಗಳು ಹೆಚ್ಚುತ್ತಿವೆ.

ವಾಹನ ದಟ್ಟಣೆ ಜಾಸ್ತಿ
ಶಿರಾಡಿ ಘಾಟಿಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಬದಲಿ ಮಾರ್ಗವಾಗಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ರಸ್ತೆ ನಿತ್ಯವೂ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಮಳೆ ನೀರು ಚರಂಡಿಗಳು ಸರಿಯಾಗಿಲ್ಲದೆ ರಸ್ತೆಯಲ್ಲೇ ಹರಿಯುತ್ತಿರುವ ಕಾರಣ ರಸ್ತೆ ಹಾನಿಗೀಡಾಗುತ್ತಿದೆ. ರಸ್ತೆ ಪಕ್ಕದಲ್ಲಿ ಹಲವು ಕಡೆ ಬರೆಯ ಮಣ್ಣು ಜರಿದು ಬೀಳುವ ಸ್ಥಿತಿಯಲ್ಲಿದ್ದು, ದೊಡ್ಡ ಗಾತ್ರದ ಮರಗಳು ರಸ್ತೆಗೆ ಬಾಗಿವೆ. ಅಪಾಯ ಸಂಭವಿಸುವ ಮುನ್ನ ಈ ಬಗ್ಗೆ ಹೆದ್ದಾರಿ ಇಲಾಖೆ ಗಮನ ಹರಿಸಿ, ತೆರವುಗೊಳಿಸುವುದು ಒಳಿತು. ಇತ್ತೀಚೆಗೆ ಮೂರು ದಿನ ಮಳೆ ಕಡಿಮೆಯಾದ ಸಂದರ್ಭದಲ್ಲಿ ಹೆದ್ದಾರಿಯ ಗುಂಡಿಗಳನ್ನು ಮುಚ್ಚುವ ತಾತ್ಕಾಲಿಕ ಕೆಲಸ ನಡೆದಿದ್ದರೂ ಮಳೆಗಾಲದಲ್ಲಿ ಸಂಭವಿಸುವ ಅಪಾಯ ತಪ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹೊಂಡ ಮುಚ್ಚುತ್ತೇವೆ
ಮಾಣಿ-ಮೈಸೂರು ರಸ್ತೆ ಕೆ.ಆರ್‌.ಡಿ.ಸಿ.ಎಲ್‌. ವತಿಯಿಂದ ಅಭಿವೃದ್ಧಿ ನಡೆಸಿ ಐದು ವರ್ಷ ಕಳೆದವು. ಮೂರು ವರ್ಷಗಳ ನಿರ್ವಹಣೆ ಮುಗಿದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕಾರಣ, ಈ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ರಸ್ತೆ ಹದಗೆಟ್ಟಿದೆ. ತತ್‌ ಕ್ಷಣ ಗುಂಡಿ ಮುಚ್ಚುವ ಕೆಲಸ ನಡೆಸುತ್ತೇವೆ. ಬರೆ ಜರಿದು ಬಿದ್ದಿರುವಲ್ಲಿ ಮಣ್ಣು ತೆರವುಗೊಳಿಸುವ ಹಾಗೂ ಚರಂಡಿ ಸರಿಪಡಿಸುವ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆಯಾಗಿದೆ. ರಸ್ತೆ ಗುಂಡಿ ಮುಚ್ಚುವುದು ಇತ್ಯಾದಿ ತಾತ್ಕಾಲಿಕ ಕೆಲಸಗಳನ್ನು ನಮ್ಮ ಇಲಾಖೆಯಿಂದಲೇ ನಿರ್ವಹಿಸಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರವಾಗಲಿದೆ. ಹೆದ್ದಾರಿಯಲ್ಲಿ ಮಾಣಿ-ಕಬಕ ನಡುವಿನ ಹೊಂಡಗಳನ್ನು ಮುಚ್ಚುವ ಕೆಲಸಕ್ಕೂ ಚಾಲನೆ ನೀಡಲಾಗುವುದು.
– ಸುನೀಲ್‌, ಕೆ.ಆರ್‌.ಇ.ಡಿ.ಸಿ.ಎಲ್‌. ಎಂಜಿನಿಯರ್‌

— ಉಮ್ಮರ್‌ ಜಿ. ಕಬಕ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.