ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರಗಳು


Team Udayavani, May 24, 2018, 1:40 PM IST

24-may-9.jpg

ಕರಂಬಾರು : ಮಳವೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕರಂಬಾರು ರಾಜ್ಯ ಹೆದ್ದಾರಿಯಲ್ಲಿ ಹಲವಾರು ಮರಗಳು ಗೆಲ್ಲುಗಳು ಬೀಳುವ ಸ್ಥಿತಿಯಲ್ಲಿದ್ದು, ಕೂಡಲೇ ತೆರವುಗೊಳಿಸದೇ ಇದ್ದರೆ ರಸ್ತೆಯಲ್ಲಿ ವಾಹನ, ಪಾದಚಾರಿಗಳ ಸಂಚಾರಕ್ಕೆ ಹಾಗೂ ಸುತ್ತಮುತ್ತಲಿನ ಮನೆಗಳಿಗೆ ಅಪಾಯವಾಗುವ ಸಾಧ್ಯತೆ ಇದೆ.

ಬಜಪೆ- ಕರಂಬಾರು ರಾಜ್ಯ ಹೆದ್ದಾರಿ ತಿರುವಿನಿಂದ ಕೂಡಿದೆ. ಮಾತ್ರವಲ್ಲದೇ ಅತ್ಯಂತ ಕಿರಿದಾಗಿದ್ದು ವಾಹನ ಸಂಚಾರವೇ ಇಲ್ಲಿ ಕಷ್ಟ ಕರ. ಹೆದ್ದಾರಿಯ ಬದಿಯಲ್ಲಿಯೇ ಹಲವು ಮರಗಳಿವೆ. ಹಲವೆಡೆ ಇದರ ಗೆಲ್ಲುಗಳು ಹೆದ್ದಾರಿಯನ್ನು ಅವರಿಸಿವೆ. ಇವು ಭಾರವಾಗಿ ಹೆದ್ದಾರಿಗೆ ಬೀಳುವ ಪರಿಸ್ಥಿತಿಯಲ್ಲಿವೆ.

ಕಳೆದ ನಾಲ್ಕು ದಿನಗಳ ಗಾಳಿ ಮಳೆಗೆ ಮರವೂರು ಮತ್ತು ಕರಂಬಾರಿನಲ್ಲಿ ಮರ ಹಾಗೂ ಗೆಲ್ಲುಗಳು ಬಿದ್ದು ಒಟ್ಟು 5 ವಿದ್ಯುತ್‌ ಕಂಬಗಳು ತುಂಡಾಗಿ ಹೆದ್ದಾರಿಗೆ ಉರುಳಿ ಬಿದ್ದಿವೆ.

ವಿದ್ಯುತ್‌ ತಂತಿಗಳು ತುಂಡಾಗಿ ಹೆದ್ದಾರಿಯಲ್ಲಿ ಜೋತು ಬಿದ್ದಿವೆ. ಇಷ್ಟೇ ಅಲ್ಲ ದೇ ಹೆದ್ದಾರಿ ಬದಿಯ ಗುಡ್ಡದಲ್ಲಿರುವ ಮರಗಳು ಹೆಮ್ಮರವಾಗಿದ್ದು, ಮಣ್ಣು ಕೊರೆದು ಹೆದ್ದಾರಿಯ ಕಡೆಗೆ ವಾಲುತ್ತಿದೆ. ಇವುಗಳು ಕೂಡ ಹೆದ್ದಾರಿ ಮೇಲೆ ಬೀಳುವ ಅಪಾಯವಿದೆ.

ಪ್ರಯಾಣಿಕರಿಗೆ ತೊಂದರೆ
ಬಜಪೆ -ಮರವೂರು ಹೆದ್ದಾರಿ 67 ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅತೀ ಮುಖ್ಯ ಹೆದ್ದಾರಿ. ಹೆಚ್ಚಾಗಿ ರಾತ್ರಿ ಪ್ರಯಾಣಿಕರು ಇದನ್ನೇ ಬಳಸುತ್ತಾರೆ. ಮಂಗಳೂರಿನಿಂದ ವಿಮಾನ ನಿಲ್ದಾಣ ಹಾಗೂ ಬಜಪೆಗೆ ಬರುವ ಹಾಗೂ ಹೋಗುವ ವಾಹನ ಸವಾರರು ಇದೇ ಮಾರ್ಗವನ್ನು ಬಳ ಸು ತ್ತಾರೆ. ಮೇ 20ರಂದು ಮುಂಜಾನೆ ಮರವೂರು ಜಂಕ್ಷನ್‌ನಲ್ಲಿ ಹೆದ್ದಾರಿಗೆ ಮರ ಬಿದ್ದ ಪರಿಣಾಮ ವಿಮಾನ ನಿಲ್ದಾಣಕ್ಕೆ ಬರುವ, ಹೋಗುವ ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸಬೇಕಾಯಿತು.

ಅರಣ್ಯ ಇಲಾಖೆಗೆ ಮನವಿ
ಕರಂಬಾರು ಹೆದ್ದಾರಿ ಬದಿಯಲ್ಲಿರುವ ಅಪಾಯಕಾರಿ ಮರ ಹಾಗೂ ಗೆಲ್ಲುಗಳನ್ನು ತೆರವುಗೊಳಿಸುವಂತೆ ಈಗಾಗಲೇಮಳವೂರು ಗ್ರಾಮ ಪಂಚಾಯತ್‌ ನಿಂದ ಅರಣ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಬೃಹತ್‌ ಗಾತ್ರದ ಮರಗಳು ಇಲ್ಲಿದ್ದು, ತೆಗೆಯದೇ ಇದ್ದರೆ ತಗ್ಗು ಪ್ರದೇಶದಲ್ಲಿರುವ ಮನೆ, ವಿದ್ಯುತ್‌ ಕಂಬಗಳಿಗೂ ಅಪಾಯವಿದೆ ಎಂದು ಮಳವೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಗಣೇಶ್‌ ಅರ್ಬಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.