ಎಚ್ಚೆತ್ತುಕೊಂಡ ಇಲಾಖೆ : ಅಪಾಯಕಾರಿ ಮರಗಳ ತೆರವು
Team Udayavani, Jul 3, 2017, 3:55 AM IST
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಹತ್ತಿರ ಇರುವ ಹೈ ವೋಲ್ಟೇಜ್ ಲೈನ್ ಹಾಗೂ ಲೋ ವೋಲ್ಟೇಜ್ ಲೈನ್ನ ಮೇಲೆ ಒಣಗಿದ ಮರದ ಬೃಹತ್ ಗಾತ್ರದ ಕೊಂಬೆಗಳಿಗೆ ಕೊನೆಗೂ ಮುಕ್ತಿ ದೊರೆತಿದೆ. ಮುರಿದು ಬೀಳುವ ಸ್ಥಿತಿಯಲ್ಲಿದ್ದು ಸಾರ್ವಜನಿಕರ ದೂರು ಆಲಿಸಿಯೂ ನಿರ್ಲಕ್ಷ್ಯ ವಹಿಸಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾಗೂ ಜೀವ ಹಾನಿಯ ಬಗ್ಗೆ ಕಾಳಜಿ ವಹಿಸುವ ಬದಲಾಗಿ ಮೆಸ್ಕಾಂ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಂವಹನ ಕೊರತೆಯಿಂದ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಅಪಾಯಕಾರಿ ಮರಗಳ ಕುರಿತು ಪತ್ರಿಕೆ ವರದಿ ಮಾಡಿತ್ತು. ಈಗ ಅವುಗಳಿಗೆ ಕಡೆಗೂ ಮುಕ್ತಿ ಸಿಕ್ಕಿದೆ.
ಮೆಸ್ಕಾಂ ಇಲಾಖೆಗೆ ಹಾಗೂ ಅರಣ್ಯ ಇಲಾಖೆಗೆ ಸ್ಥಳೀಯರು ಹಲವು ಬಾರಿ ಮನವಿ ಮಾಡಿದ ಫಲವಾಗಿ ಮೆಸ್ಕಾಂ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳೀಯ ಯುವಕರ ಶ್ರಮದಾನದೊಂದಿಗೆ ಅಪಾಯಕಾರಿ ಮರಗಳನ್ನು ತೆರವು ಕಾರ್ಯಾಚರಣೆ ನಡೆಸಿದರು. ಅಪಾಯಕಾರಿ ಮರಗಳಿರುವ ಜಾಗದ ಮಾಲಕರಲ್ಲಿ ಒಬ್ಬರಾದ ಪ್ರಸಿದ್ಧ ಕಿಲ್ಲೂರು ಮನೆತನದ ಶ್ರೀಕಾಂತ್ ರಾವ್ ಮರಗಳ ವಿಲೇವಾರಿ ಕುರಿತು ಸೂಕ್ತ ಮಾರ್ಗದರ್ಶನ ನೀಡಿ ಕಟ್ಟಿಗೆಗೆ ಉಪಯೋಗ ಆಗುವಂತಹ ಎಲ್ಲ ಮರಗಳನ್ನು ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದರು. ಅರಣ್ಯ ಇಲಾಖೆಯ ತಾಲೂಕಿನ ಅಧಿಕಾರಿ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳಾದ ಶಿವಶಂಕರ್, ಶಾಜಿ, ಸ್ಥಳದಲ್ಲಿ ಸೂಕ್ತ ಸಲಹೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ